ಎಡ-ಐಕ್ಯರಂಗಗಳಿಗೆ ಮತದಾರರಿಂದ ತಕ್ಕ ಶಾಸ್ತಿ: ಕೆ.ಪಿ. ಶ್ರೀಶನ್‌ 


Team Udayavani, Mar 8, 2019, 1:00 AM IST

eda-ikyaranga.jpg

ಕಾಸರಗೋಡು: ಕೇರಳದಲ್ಲಿ ಇದುವರೆಗೆ ಆಡಳಿತ ನಡೆಸಿದ ಎಡರಂಗ ಮತ್ತು ಐಕ್ಯರಂಗವು ಒಂದೇ ನಾಣ್ಯದ ಎರಡು ಮುಖಗಳಾಗಿವೆ. ಈ ಎರಡೂ ಒಕ್ಕೂಟಗಳಿಗೆ ಇದುವರೆಗೆ ರಾಜ್ಯದಲ್ಲಿ  ಯಾವುದೇ ಸಮರ್ಪಕ ಅಭಿವೃದ್ಧಿಯನ್ನು  ಮಾಡಲು ಸಾಧ್ಯವಾಗಿಲ್ಲ  ಎಂದು ರಾಜ್ಯದ ಜನರು ಈಗಾಗಲೇ ಅರ್ಥೈಸಿದ್ದಾರೆ. ಇದರಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ  ರಾಜ್ಯದ ಮತದಾರರು ಈ ಎರಡೂ ಒಕ್ಕೂಟಗಳಿಗೆ ತೀವ್ರ ತಿರುಗೇಟು ನೀಡಲಿದ್ದಾರೆ ಎಂದು ಬಿಜೆಪಿ ಕೇರಳ ರಾಜ್ಯ ಉಪಾಧ್ಯಕ್ಷ ಕೆ.ಪಿ.ಶ್ರೀಶನ್‌ ಮಾಸ್ತರ್‌ ಹೇಳಿದ್ದಾರೆ.

ಬಿಜೆಪಿ ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಟಿ. ರಮೇಶ್‌ ನೇತೃತ್ವದಲ್ಲಿ ಕುಂಬಳೆಯಿಂದ ಆರಂಭಗೊಂಡ ಉತ್ತರ ವಲಯ ಪರಿವರ್ತನಾ ಯಾತ್ರೆಗೆ ಕಾಸರಗೋಡು ಹೊಸ ಬಸ್‌ ನಿಲ್ದಾಣ ಪರಿಸರದಲ್ಲಿ ನೀಡಿದ ಭವ್ಯ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಶ್ಚಿಮ ಬಂಗಾಲ ಸಹಿತ ಉತ್ತರ ಭಾರತದ ವಿವಿಧೆಡೆ ಸಿಪಿಎಂ ಮತ್ತು ಕಾಂಗ್ರೆಸ್‌ ಪಕ್ಷಗಳು ಒಟ್ಟಾಗಿ ಸ್ಪರ್ಧಿಸಲು ನಿರ್ಧರಿಸಿವೆ. ಇದರಿಂದ ಮುಂದಿನ ದಿನಗಳಲ್ಲಿ  ನಡೆಯುವ ಚುನಾವಣೆಯಲ್ಲಿ  ಈ ಎರಡೂ ಪಕ್ಷಗಳು ಕೇರಳದಲ್ಲಿಯೂ ಪರಸ್ಪರ ಸೀಟು ಹೊಂದಾಣಿಕೆ ಮಾಡಿದರೆ ಯಾವುದೇ ಅಚ್ಚರಿಪಡಬೇಕಾಗಿಲ್ಲ  ಎಂದು ಶ್ರೀಶನ್‌ ಮಾಸ್ತರ್‌ ಹೇಳಿದರು.

ಕಳೆದ 60 ವರ್ಷಗಳ ಕಾಲ ನಮ್ಮ ದೇಶವನ್ನು ಆಳಿದ ಕಾಂಗ್ರೆಸ್‌ ಪಕ್ಷಕ್ಕೆ ಈ ದೇಶದಲ್ಲಿ  ಮಾಡಲು ಸಾಧ್ಯವಾಗದ ಸಾಧನೆಯನ್ನು  ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ನಾಲ್ಕೂವರೆ ವರ್ಷಗಳಲ್ಲಿ  ಸಾಧಿಸಿದೆ. ಉದ್ಯೋಗ ಖಾತರಿ ಯೋಜನೆಗಳನ್ನು  ಕೇಂದ್ರ ಸರಕಾರವು ಸ್ಥಗಿತಗೊಳಿಸಲು ಮುಂದಾಗುತ್ತಿದೆ ಎಂದು ಸಿಪಿಎಂ ಮತ್ತು  ಕಾಂಗ್ರೆಸ್‌ ವ್ಯಾಪಕ ಅಪಪ್ರಚಾರ ನಡೆಸುತ್ತಿದೆ. ಇದು ಅಪ್ಪಟ ಸುಳ್ಳು. ಕೇಂದ್ರ ಸರಕಾರವು ದೇಶದ ಸಾಮಾನ್ಯ ವರ್ಗದ ಜನರಿಗೆ ಇದುವರೆಗೆ ಹೆಚ್ಚಿನ ಸವಲತ್ತುಗಳನ್ನು ನೀಡಿದೆಯೇ ಹೊರತು, ಇರುವ ಸವಲತ್ತುಗಳನ್ನು  ರದ್ದುಗೊಳಿಸಿಲ್ಲ. ಈ ನಿಟ್ಟಿನಲ್ಲಿ  ಜನರು ಇಂತಹ ಅಪಪ್ರಚಾರಗಳಿಗೆ ಕಿವಿಗೊಡದೆ ಕೇಂದ್ರದಲ್ಲಿ ನರೇಂದ್ರ ಮೋದಿ ಸರಕಾರ ಮತ್ತೆ ಅಧಿಕಾರಕ್ಕೇರಲು ಬೇಕಾದ ಪರಿಪೂರ್ಣ ಬೆಂಬಲ ನೀಡಬೇಕೆಂದು ಅವರು ಮತದಾರರಲ್ಲಿ ವಿನಂತಿಸಿದರು.

ಪರಿವರ್ತನ ಯಾತ್ರೆಯ ನಾಯಕ ಎಂ.ಟಿ. ರಮೇಶ್‌ ಮಾತನಾಡಿ, ಶಬರಿಮಲೆಗೆ ಯುವತಿ ಯರನ್ನು  ಪ್ರವೇಶಿಸುವಂತೆ ಮಾಡಲು ಮುಂದಾದ ಸಿಪಿಎಂ ಪಕ್ಷದ ಧೋರಣೆಯನ್ನು ಆ ಪಕ್ಷದ ಹಲವು ಮಂದಿ ಕಾರ್ಯಕರ್ತರೇ ವಿರೋಧಿಸಿದ್ದಾರೆ. ತನ್ಮೂಲಕ ಮುಂದಿನ ಚುನಾವಣೆಯಲ್ಲಿ  ಸಿಪಿಎಂ ಕಾರ್ಯಕರ್ತರು, 
ಸಿಪಿಎಂ ಹಿತೈಷಿಗಳು ತಮ್ಮ ಉತ್ತಮ ಅಭ್ಯರ್ಥಿಗಳ ಹುಡುಕಾಟಕ್ಕಾಗಿ ತಲೆಕೆಡಿಸಿಕೊಂಡಿದ್ದಾರೆ. ಅಭ್ಯರ್ಥಿಗಳ ಆಯ್ಕೆಯ ಮೊದಲ ಸುತ್ತಿನಲ್ಲಿ  ಸಿಪಿಎಂ ಈಗಾಗಲೇ ಸೋತಿದೆ ಎಂದು ಎಂ.ಟಿ.ರಮೇಶ್‌ ಹೇಳಿದರು.
ಬಿಜೆಪಿ ಕಾಸರಗೋಡು ಮಂಡಲ ಅಧ್ಯಕ್ಷ  ಎಂ. ಸುಧಾಮ ಗೋಸಾಡ ಅಧ್ಯಕ್ಷತೆ ವಹಿಸಿದ್ದರು. 

ಬಿಜೆಪಿ ಜಿಲ್ಲಾಧ್ಯಕ್ಷ , ನ್ಯಾಯವಾದಿ  ಕೆ.  ಶ್ರೀಕಾಂತ್‌, ರಾಷ್ಟ್ರೀಯ ಸಮಿತಿ  ಸದಸ್ಯ ಎಂ. ಸಂಜೀವ ಶೆಟ್ಟಿ, ರಾಜ್ಯ ಸಮಿತಿ ಸದಸ್ಯರಾದ  ಸುರೇಶ್‌ ಕುಮಾರ್‌ ಶೆಟ್ಟಿ   ಪೂಕಟ್ಟೆ, ನ್ಯಾಯವಾದಿ ವಿ. ಬಾಲಕೃಷ್ಣ ಶೆಟ್ಟಿ, ಕುಂಟಾರು ರವೀಶ ತಂತ್ರಿ, ರಾಜ್ಯ ಉಪಾಧ್ಯಕ್ಷೆ ಪ್ರಮೀಳಾ ಸಿ. ನಾೖಕ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ರಮೇಶ್‌, ಮಧೂರು ಗ್ರಾಮ ಪಂಚಾಯತ್‌ ಅಧ್ಯಕ್ಷೆ  ಮಾಲತಿ ಸುರೇಶ್‌, ನೇತಾರರಾದ  ನ್ಯಾಯವಾದಿ ಎ. ಸದಾನಂದ ರೈ, ಪದ್ಮಿನಿ ಟೀಚರ್‌, ಅಭಿಲಾಷ್‌, ಎಂ. ಜನನಿ ಮತ್ತಿತರರು ಉಪಸ್ಥಿತರಿದ್ದರು. 

ಸುಕುಮಾರ ಕುದ್ರೆಪ್ಪಾಡಿ ಸ್ವಾಗತಿಸಿ, ಹರೀಶ್‌ ಗೋಸಾಡ ವಂದಿಸಿದರು.
ಬಳಿಕ ಕಾಸರಗೋಡು ಜಿಲ್ಲೆಯ ಪೆರಿಯ, ಕಾಞಂಗಾಡು, ತೃಕ್ಕರಿಪುರ ಮುಂತಾದೆಡೆಗಳಲ್ಲಿ  ಪರಿವರ್ತನ ಯಾತ್ರೆಗೆ ಭವ್ಯ ಸ್ವಾಗತ ದೊರಕಿತು.

ಮತ್ತೆ  ಮೋದಿ ಸರಕಾರ : ಎಂ.ಟಿ.ರಮೇಶ್‌
 ಪರಿವರ್ತನ ಯಾತ್ರೆಯ ನಾಯಕ ಮಾತನಾಡಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ  ನರೇಂದ್ರ ಮೋದಿ ಸರಕಾರವು ಮತ್ತೆ ಅಧಿಕಾರಕ್ಕೆ ಬರುವುದರಲ್ಲಿ  ಯಾವುದೇ ಸಂಶಯವಿಲ್ಲ. ಇದನ್ನು ಅರ್ಥೈಸಿದ ವಿಪಕ್ಷಗಳು ಹೇಗಾದರೂ ಮಾಡಿ ಬಿಜೆಪಿ ಸರಕಾರವನ್ನು ಪರಾಭವಗೊಳಿಸುವ ಸಲುವಾಗಿ ಎಲ್ಲರೂ ಸೇರಿ ಮಹಾಘಟ್‌ಬಂಧನ್‌ ರಚಿಸಿದ್ದಾರೆ. ಆದರೆ ಮುಂದಿನ ಚುನಾವಣೆಯ ಬಳಿಕ ನಮ್ಮ  ದೇಶದ ಹಲವು ಪಕ್ಷಗಳು ಕಣ್ಮರೆಯಾಗಲಿವೆ. ಅದರಲ್ಲಿ  ಸಿಪಿಎಂ ಕೂಡಾ ಒಂದು ಎಂದು ಲೇವಡಿ ಮಾಡಿದರು.
-ಎಂ.ಟಿ.ರಮೇಶ್‌  ಪರಿವರ್ತನ ಯಾತ್ರೆಯ ನಾಯಕ

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.