14 ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ: ಅಧಿಕ ಹಣವಿದ್ದರೆ ವಿಚಾರಣೆ


Team Udayavani, Mar 15, 2019, 1:00 AM IST

15-kade.jpg

ಮಡಿಕೇರಿ: ಈಗಾಗಲೇ ಲೋಕಸಭಾ ಚುನಾವಣಾ ಸಂಬಂಧ ಕೊಡಗು ಜಿಲ್ಲೆಯಲ್ಲಿ ಅಂತರರಾಜ್ಯ ಮೂರು ಚೆಕ್‌ಪೋಸ್ಟ್‌ಗಳು ಸೇರಿದಂತೆ ಒಟ್ಟು 14 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ಜಿಲ್ಲೆಗೆ ಬರುವ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು 50 ಸಾವಿರಕ್ಕೂ ಹೆಚ್ಚು ಹಣ ತೆಗೆದುಕೊಂಡು ಹೋಗುವವರು ಅಗತ್ಯ ದಾಖಲೆಗಳನ್ನು ಇಟ್ಟುಕೊಳ್ಳಬೇಕು. 50 ಸಾವಿರದಿಂದ 10 ಲಕ್ಷ ರೂ.ವರೆಗೆ ಬ್ಯಾಂಕ್‌ನಲ್ಲಿ ಚಲಾವಣೆಯಾಗುವ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗುತ್ತದೆ ಎಂದರು.  ಎಸ್ಪಿ ಜಿ.ಪಂ.ಸಿಇಒ ಹಾಗೂ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ಅಧ್ಯಕ್ಷರಾದ ಕೆ.ಲಕ್ಷ್ಮೀಪ್ರಿಯಾಐ ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ್‌ ‌ು ಹಾಜರಿದ್ದರು.

ಅಧಿಕ ಹಣವಿದ್ದರೆ ವಿಚಾರಣೆ::
ವಾಹನಗಳಲ್ಲಿ ರೂ.10 ಲಕ್ಷಕ್ಕಿಂತ ಹೆಚ್ಚು ನಗದು ಇರುವುದು ತಪಾಸಣಾ ಅವಧಿಯಲ್ಲಿ ಕಂಡುಬಂದಲ್ಲಿ ಆದಾಯ ತೆರಿಗೆ ಇಲಾಖೆಯಿಂದ ವಿಚಾರಣೆಗೆ ಒಳಪಡಿಸಲಾಗುವುದು. ವಾಹನಗಳಲ್ಲಿ ಅನುಮಾನಾಸ್ಪದವಾಗಿ, ದಾಖಲೆಗಳಿಲ್ಲದೆ ಸಾಗಿಸುವ ಯಾವುದೇ ಗೃಹ ಉಪಯೋಗಿ ವಸ್ತುಗಳು, ದಿನಬಳಕೆ ವಸ್ತುಗಳು, ಮದ್ಯ, ಮಾದಕ ದ್ರವ್ಯಗಳು ಮತ್ತು ಆಯುಧಗಳು ¤ಗಳನ್ನು ಮುಟ್ಟುಗೋಲು ಹಾಕಲಾಗುವುದು ಎಂದರು. ನಿಶ್ಚಿತಾರ್ಥ, ಮದುವೆ, ನಾಮಕರಣ, ಜಾತ್ರೆ, ಹಬ್ಬ ಇತ್ಯಾದಿ ಖಾಸಗಿ ಸಮಾ ರಂಭಗಳಿಗೆ ಯಾವುದೇ ನಿರ್ಬಂಧ ವಿರುವುದಿಲ್ಲ. ಆದರೆ ಈ ಸಮಾರಂಭಗಳು ರಾಜಕೀಯ ಪ್ರೇರಿತವಾಗಿರಬಾರದು ಎಂ¨ರು.

ಮಾ.19 ರಂದು ಅಧಿಸೂಚನೆ:
ಲೋಕಸಭಾ ಚುನಾವಣೆ ಸಂಬಂಧ ಮಾ.19 ರಂದು ಚುನಾವಣಾ ಅಧಿಸೂಚನೆಯನ್ನು ಚುನಾವಣಾಧಿಕಾರಿ ಅವರು ಹೊರಡಿಸಲಿದ್ದಾರೆ. ನಾಮಪತ್ರ ಸಲ್ಲಿಸಲು ಮಾ.26 ಕಡೆ ದಿನವಾಗಿದೆ. ನಾಮಪತ್ರ ಪರಿಶೀಲನಾ ಕಾರ್ಯವು ಮಾ.27 ರಂದು ನಡೆಯಲಿದೆ. ನಾಮಪತ್ರ ವಾಪಸ್‌ ಪಡೆಯಲು ಮಾ.29 ಕಡೆ ದಿನವಾಗಿದೆ. ಏ.18 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. 

ಎಷ್ಟು ವೆಚ್ಚ ಮಾಡಬಹುದು:
ಒಬ್ಬ ಅಭ್ಯರ್ಥಿಯು ರೂ.70 ಲಕ್ಷದವರೆಗೆ ಚುನಾವಣಾ ವೆಚ್ಚಗಳನ್ನು ಮಾಡಬಹುದಾಗಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ವೆಚ್ಚದ ಮೇಲೆ ನಿಗಾವಹಿಸಲು ವಿವಿಧ ವೆಚ್ಚ ತಂಡಗಳನ್ನು ನೇಮಕ ಮಾಡಲಾಗಿದೆ.  208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನ ಸಭಾ ಕ್ಷೇತ್ರಗಳಿಗೆ ತಲಾ ಒಬ್ಬರಂತೆ ಒಟ್ಟು ಇಬ್ಬರು ಸಹಾಯಕ ವೆಚ್ಚ ವೀಕ್ಷಕರು, 2 ಲೆಕ್ಕ ಪತ್ರ ತಂಡ, ಒಂದು ವೀಡಿಯೋ ವಿವಿಂಗ್‌ ತಂಡ, 4 ವೀಡಿಯೋ ಸರ್ವಿಲೆನ್ಸ್‌ ತಂಡಗಳನ್ನು ನೇಮಕ ಮಾಡಲಾಗಿದೆ. ಎಂದು ಅವರು ತಿಳಿಸಿದರು.

ಅಧಿಕಾರಿಗಳ ನೇಮಕ
‌ ಜಿ.ಪಂ.ಸಿಇಒ ಕೆ.ಲಕ್ಷಿ¾ಪ್ರಿಯಾ(ಮಾದರಿ ನೀತಿ ಸಂಹಿತೆ ಮತ್ತು ಸ್ವೀಪ್‌) ಸ್ಥಳೀಯ ಲೆಕ್ಕ ಪರಿಶೋಧನಾ ವರ್ತುಲ ಹಿರಿಯ ಉಪ ನಿರ್ದೇಶಕರಾದ ಎಚ್‌.ಇ.ನಂದ (ಚುನಾವಣಾ ವೆಚ್ಚ ನಿರ್ವಹಣೆ), ಜಿಲ್ಲಾ ನೋಂದಣಾಧಿಕಾರಿ ಸಿದ್ದೇಶ್‌ , ಭೂ ದಾಖಲೆಗಳ ಸಹಾಯಕ ನಿರ್ದೇಶಕ ಕೆ.ಪಿ.ಶಂಷುದ್ದಿನ್‌(ಸಿ-ವಿಜಿಲ್‌), ಶಿಕ್ಷಣ ಇಲಾಖೆ ಉಪ ನಿರ್ದೇಶಕ‌ ಮಚ್ಚಾಡೋ (ಮತಗಟ್ಟೆ ಅಧಿಕಾರಿಗಳ ನೇಮಕ), ಲೋಕೋಪ ಯೋಗಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ‌ ಎಂಜಿನಿಯರ್‌ ಇಬ್ರಾಹಿಂ (ವಿದ್ಯುನ್ಮಾನ ಮತಯಂತ್ರ), ಜಿ.ಪಂ.ಉಪ ಕಾರ್ಯದರ್ಶಿ ಗುಡೂರು ಭೀಮಸೇನ(ಮತಗಟ್ಟೆಗಳ ಮೇಲ್ವಿಚಾರಣೆ), ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಪ್ರಮೋದ್‌ ಸಿ.ಎಂ(ವೀಕ್ಷಕರು), ಮಡಿಕೇರಿ ಎನ್‌.ಐ.ಸಿ ಮಾಹಿತಿ ಅಧಿಕಾರಿ ಅಜಿತ್‌ ಜಿ(ಐಟಿ, ಐಟಿ ಆ್ಯಪ್ಸ್‌ ಮತ್ತು ತಾಂತ್ರಿಕತೆ), ಕೂಡಿಗೆ ಡಯಟ್‌ ಪ್ರಾಂಶುಪಾಲ ವಾಲ್ಟರ್‌ ಎಚ್‌.ಡಿಮೆಲೊ(ತರಬೇತಿ).

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.