ನೀರಾವರಿ ಪಂಪ್‌ಗೆ ವಿದ್ಯುತ್‌ ಕಡಿತ: ಕೃಷಿಕರಿಂದ ಪ್ರತಿಭಟನೆ


Team Udayavani, Mar 17, 2019, 4:08 AM IST

kumble.png

ಕುಂಬಳೆ: ಕಾಸರಗೋಡು ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಕ್ಷಾಮ ತಲೆದೋರಿದೆ. ಇದರ ಪರಿಹಾರಕ್ಕಾಗಿ ಜಿಲ್ಲಾಧಿಕಾರಿ ಅವರು ಪರಿಹಾರ ಕ್ರಮಕ್ಕೆ ಮುಂದಾಗಿರುವ ಕ್ರಮದ ವಿರುದ್ಧ ಕೃಷಿಕರು ಪ್ರತಿಭಟನೆಗೆ ಇಳಿದಿದ್ದಾರೆ.

ಮಂಜೇಶ್ವರ ತಾಲೂಕಿನಲ್ಲಿ ಹರಿಯುವ ಹೊಳೆಗಳಾದ ಉಪ್ಪಳ, ಶಿರಿಯ,ಮೊಗ್ರಾಲ್‌ ಮೊದಲಾದೆಡೆಗಳಲ್ಲಿ ಕುಡಿಯುವ ನೀರಿಗೆ ಪಂಪಿಂಗ್‌ ನಡೆಸುವ ಸ್ಥಳದ 500 ಮೀ.ಪ್ರದೇಶದ ಕೆಳ ಮತ್ತು ಮೇಲಿನ ಭಾಗದಲ್ಲಿರುವ ಕೃಷಿ ನೀರಾವರಿ ಪಂಪ್‌ಗ್ಳ ವಿದ್ಯುತ್‌ ಸಂಪರ್ಕವನ್ನು ಕೂಡಲೇಕಡಿತಗೊಳಿಸಲು ಜಿಲ್ಲಾಧಿಕಾರಿಯವರು ಆಯಾ ವಿದ್ಯುತ್‌ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಿದ್ದರು.ಇದರಿಂದ ಕೃಷಿಕರ ಕಂಗಾಲಾಗಿದ್ದು ಹೋರಾಟಕ್ಕೆ ಇಳಿದಿರುವರು.

ಭಾರತೀಯ ಕಿಸಾನ್‌ ಸಂಘ ಮತ್ತು ರೈತ ಸಂಘದ ನೇತೃತ್ವದಲ್ಲಿ ಪೈವಳಿಕೆ ಕುರುಡಪದವು,ಕಳಾಯಿ ಮೊದಲಾದೆಡೆಗಳ ಕೃಷಿಕರು ಸಂಘಟಿತರಾಗಿ ಪೈವಳಿಕೆ ವಿದ್ಯುತ್‌ ಕಚೇರಿ ಮುಂದೆ ಪ್ರತಿಭಟನೆಗೆ ಮುಂದಾದರು.
ಬಳಿಕ ಗ್ರಾಮ ಪಂಚಾಯತ್‌ ಕಚೇರಿಯಲ್ಲಿ ಜರಗಿದ ಸಭೆಯಲ್ಲಿ ಗ್ರಾ.ಪಂ.ಅಧ್ಯಕ್ಷೆ ಭಾರತಿ ಜೆ.ಶೆಟ್ಟಿ, ಉಪಾಧ್ಯಕ್ಷರು, ಗ್ರಾಮ ಪಂಚಾಯತ್‌ ಸದಸ್ಯರು, ಜಿಲ್ಲಾ ಪಂಚಾಯತ್‌ ಸದಸ್ಯನ್ಯಾಯವಾದಿ ಶ್ರೀಕಾಂತ್‌,ಕಿಸಾನ್‌ ಸಂಘದ ಜಿಲ್ಲಾ ಕಾರ್ಯದರ್ಶಿ ಸದಾನಂದ ಕೊಮ್ಮಂಡ, ರೈತ ಸಂಘದ ನಾಯಕರಾದ ಶ್ರೀನಿವಾಸ ಭಂಡಾರಿ, ಮಹಾಬಲ ಶೆಟ್ಟಿ ಕರುವೋಳು,ಸದಾನಂದ ಕೋರಿಕ್ಕಾರ್‌,ಬಾಬು ವಾದ್ಯಪ್ಪಡು³,ಪ್ರಮುಖರಾದ ಎಂ.ಹರಿಶ್ಚಂದ್ರ,ಡಾ.ಜಯಪ್ರಕಾಶ್‌ ನಾರಾಯಣ್‌ ತೊಟ್ಟೆತೋ¤ಡಿ,ಕಯ್ನಾರು ಸುರೇಶ್‌ ಹೊಳ್ಳ,ಕಳ್ಳಿಗೆ ಕರುಣಾಕರ ಶೆಟ್ಟಿ,ಶಂಕರನಾರಾಯಣ ಭಟ್‌, ವಿನೋದ್‌ ಕೊಜಪ್ಪೆ,ಅಬ್ಟಾಸ್‌ ವಾದ್ಯಪ್ಪಡು³,ಹಮೀದ್‌ ವಾದ್ಯಪ್ಪಡು³, ಹಾರಿಸ್‌ ಪೈವಳಿಕೆ ಮುಂತಾದವರ ನೇತೃತ್ವದಲ್ಲಿ ಮಾತುಕತೆ ನಡೆಸಲಾಯಿತು.

ಬಳಿಕ ಜಿಲ್ಲಾಧಿಕಾರಿಗಳನ್ನು ಮೊಬೈಲ್‌ ಮೂಲಕ ನಾಯಕರು ಸಂಪರ್ಕಿಸಿ ಸಮಸ್ಯೆಯ ಗಂಬೀರತೆಯನ್ನು ತಿಳಿಸಿದಾಗ ಡಿ.ಸಿ.ಅವರು ವಿದ್ಯುತ್‌ ಮರು ಸಂಪರ್ಕಕ್ಕೆ ಒಪ್ಪಿಗೆ ನೀಡಿದರು.ಆ ಬಳಿಕ ವಿದ್ಯುತ್‌ ಇಲಾಖೆಯ ಕೃಷಿ ಭವನದ ಮತ್ತು ಜಲನಿಧಿ ಇಲಾಖೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಕಡಿತಗೊಳಿಸಿದ ‌ 6 ಪಂಪ್‌ಗ್ಳಿಗೆ ವಿದ್ಯುತ್‌ ಸಂಪರ್ಕ ನೀಡಲಾಯಿತು.ಇದರಿಂದ ಕೃಷಿಕರು ಸಮಾಧಾನದ ನಿಟ್ಟುಸಿರು ಬಿಡುವಂತಾಯಿತು.

 ದುರುಪಯೋಗದ ಆರೋಪ 
ರಾಜ್ಯ ಸರಕಾರ ಕೃಷಿಕರಿಗೆ ನೀಡಿದ ಉಚಿತ ವಿದ್ಯುತ್‌ ಯೋಜನೆಯಂತೆ ಹೆಚ್ಚಿನ ಕೃಷಿಕರು ಇದರ ದುರುಪಯೋಗ ನಡೆಸುತ್ತಿರುವುದಾಗಿ ಜಿಲ್ಲಾಧಿಕಾರಿ ಆರೋಪಿಸುತ್ತಿರುವರು.ಹೊಳೆಗಳಲ್ಲಿ ಪರವಾನಿಗೆ ಪಡೆಯದೆ ಬಾವಿ ತೋಡಿ ಇದಕ್ಕೆ ಕಾಂಕೀÅಟ್‌ ರಿಂಗ್‌ ಹಾಕಿ ಮುಚ್ಚಿ ತೋಟಗಳಿಗೆ ಅನಿಯಂತ್ರಿತವಾಗಿ ನೀರು ಬಳಸುತ್ತಿರುವುದರಿಂದ ವರ್ಷದಿಂದ ವರ್ಷಕ್ಕೆ ಕಾಸರಗೋಡು ಜಿಲ್ಲೆಯಲ್ಲಿ ನೀರಿನ ಕ್ಷಾಮ ಉಂಟಾಗುತ್ತಿದೆ  ಕೆಲವು ಕೃಷಿಕರು ಹೊಳೆಯ ನೀರನ್ನು ನಿತ್ಯ ರಾತ್ರಿ ಹಗಲೆನ್ನದೆ ತೋಟಕ್ಕೆ ಹರಿಯಬಿಟ್ಟು ನೀರಿನ ಕ್ಷಾಮಕ್ಕೆ ಕಾರಣವಾಗಿದೆ.

ಅಲ್ಲದೆ ಕೆಲವು ಕಡೆಗಳಲ್ಲಿ ಕುಡಿಯುವ ನೀರನ್ನು ಕೃಷಿಗೆ ಮತ್ತು ಹೂದೋಟಗಳಿಗೆ ಹರಿಸುತ್ತಿರುವುದಾಗಿ ದೂರು ಬಂದಿದ್ದು ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಕ್ಷಾಮ ತೀವ್ರವಾಗಲಿದ್ದು ಅನಗತ್ಯ ನೀರು ಪೋಲು ಮಾಡುವವರ ವಿರದ್ಧ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವೆಂಬುದಾಗಿ ಜಿಲ್ಲಾಧಿಕಾರಿ ಡಾಓ ಸಜಿತ್‌ ಬಾಬು ಅವರು ಎಚ್ಚರಿಕೆ ನೀಡಿದ್ದಾರೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.