ವಿರಾಜಪೇಟೆ -ಕಣ್ಣೂರು ಅಂತಾರಾಜ್ಯ ಹೆದ್ದಾರಿಯಲ್ಲಿ  ವೇಗಕ್ಕೆ ಕಡಿವಾಣ


Team Udayavani, Mar 17, 2019, 4:17 AM IST

humps.png

ಗೋಣಿಕೊಪ್ಪಲು: ನಾಗರಹೊಳೆ ರಾಜೀವ್‌ ಗಾಂಧಿ ರಾಷ್ಟ್ರೀಯ ಉದ್ಯಾನವನದೊಳಗೆ ಹಾದು ಹೋಗಿರುವ ಹುಣಸೂರು, ವಿರಾಜಪೇಟೆ ಕಣ್ಣೂರು ಅಂತಾರಾಜ್ಯ ಹೆದ್ದಾರಿಯಲ್ಲಿನ ವಾಹನಗಳ ಅತಿಯಾದ ವೇಗಕ್ಕೆ ಈಗ ಬ್ರೇಕ್‌ ಬಿದ್ದಿದೆ.

 ಅರಣ್ಯದೊಳಗಿನ ಆನೆಚೌಕೂರು ಭಾಗದಲ್ಲಿ 5 ಕಿಮೀ ಉದ್ದದ ರಸ್ತೆಗೆ 10 ಉಬ್ಬುಗಳು ನಿರ್ಮಾಣವಾಗಿವೆ. ಪ್ರತಿ 500 ಮೀಟರ್‌ಗೆ ಒಂದು ಉಬ್ಬನ್ನು ನಿರ್ಮಿಸಲಾಗಿದೆ.ಈ ಬಗ್ಗೆ ರಸ್ತೆ ಬದಿಯಲ್ಲಿ ನಾಮಫ‌ಲಕ ಅಳವಡಿಸಿ ವಾಹನ ಚಾಲಕರಿಗೆ ಸೂಚನೆ ನೀಡಲಾಗಿದೆ. 500 ಮೀಟರ್‌ ಗೆ ಒಂದೊಂದು ಉಬ್ಬುಗಳಿರುವುದರಿಂದ ಅರಣ್ಯ ಕಳೆಯುವವರೆಗೂ ಉಬ್ಬುಗಳಿದ್ದೇ ಇರುತ್ತವೆ ಎಂಬುದು ಹೊಸದಾಗಿ ಸಂಚರಿಸುವ ವಾಹನ ಚಾಲಕರಿಗೂ ಮನವರಿಕೆಯಾಗಲಿದೆ. ಹೀಗಾಗಿ ಚಾಲಕರು ಎಚ್ಚರವಹಿಸಿ ವಾಹನಗಳ ವೇಗವನ್ನು ಸಹಜವಾಗಿಯೇ ನಿಯಂತ್ರಣದಲ್ಲಿ ಇಡಲಿದ್ದಾರೆ. ಇದರಿಂದ ಮನಸೊ ಇಚ್ಚೆ ವಾಹನಗಳನ್ನು ಓಡಿಸಿ ವನ್ಯಜೀವಿಗಳ ಪ್ರಾಣಕ್ಕೆ ಕಂಟಕವಾಗಿದ್ದ ಸ್ಥಿತಿ ನಿವಾರಣೆಯಾಗಲಿದೆ.

6ತಿಂಗಳ ಹಿಂದೆ ಕೇರಳದ  ಖಾಸಗಿ ಬಸ್‌ ಒಂದು ಆನೆಚೌಕೂರು ಬಳಿಯ ಮತ್ತಿಗೋಡು ಸಾಕಾನೆ ಶಿಬಿರದ ಬಳಿ ರಂಗ ಎಂಬ ಹೆಸರಿನ ಸಾಕಾನೆಯೊಂದಕ್ಕೆ ಡಿಕ್ಕಿ ಹೊಡೆದು ಅದರ ಸಾವಿಗೆ ಕಾರಣವಾಗಿತ್ತು. ಅರಣ್ಯದೊಳಗಿನ ಹೆದ್ದಾರಿಯಲ್ಲಿ ವಾಹನಗಳ ಅತಿಯಾದ ವೇಗವೇ ಆನೆ ಸಾವಿಗೆ ಕಾರಣ ಎಂದು ಇವುಗಳ ನಿಯಂತ್ರಣಕ್ಕೆ ವನ್ಯ ಜೀವಿಪ್ರಿಯರು ಸುಪ್ರೀಂಕೋರ್‌r ಮೊರೆ ಹೋಗಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಕೋರ್‌r ಹೆದ್ದಾರಿಯಲ್ಲಿನ ವಾಹನಗಳ ವೇಗವನ್ನು ನಿಯಂತ್ರಿಸಲು ಕಟ್ಟು ನಿಟ್ಟಾಗಿ ಆದೇಶಿಸಿತ್ತು.

ಆನೆ ಮೃತಪಟ್ಟಂದಿನಿಂದ ಹೆದ್ದಾರಿ ಪಟ್ರೋಲ್‌ ಪೊಲೀಸ್‌ ವಾಹನ ಅರಣ್ಯದೊಳಗೆ ಗಸ್ತು ತಿರುಗುತ್ತಾ ಅತಿಯಾದ ವೇಗದ ಚಾಲಕರಿಗೆ ದಂಡ ವಿದಿಸಿ ವೇಗ ನಿಯಂತ್ರಣಕ್ಕೆ ಮುಂದಾಗಿತ್ತು. ಆದರೂ ಕೂಡ ಕೆಲವು ವಾಹನ ಚಾಲಕರು ವೇಗವನ್ನು ನಿಯಂತ್ರಿಸಿರಲಿಲ್ಲ. ಇದಕ್ಕೆ ಈಗ ಲೋಕೋಪಯೋಗಿ ಇಲಾಖೆಯೇ ಉಬ್ಬುಗಳನ್ನು ನಿರ್ಮಿಸುವ ಮೂಲಕ ಸುಪ್ರೀಂ ಕೋರ್‌r ನ ಆದೇಶ ಪಾಲನೆಗೆ ಮುಂದಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಸಹಾಯಕ ಎಂಜಿನಿಯರ್‌ ನವೀನ್‌ ಒಂದು ಉಬ್ಬು ನಿರ್ಮಾಣಕ್ಕೆ ರೂ 50 ಸಾವಿರ ವೆಚ್ಚವಾಗಲಿದೆ. ಆನೆಚೌಕೂರು ಭಾಗದಿಂದ ಮಜ್ಜಿಗೆಹಳ್ಳದ ವರೆಗೆ 10 ಉಬ್ಬುಗಳನ್ನು ನಿರಿ°ಸಲಾಗಿದೆ. ಇಷ್ಟೇ ಪ್ರಮಾಣದ ಉಬ್ಬುಗಳು ಅಳ್ಳೂರು ಕಡೆಗೂ ನಿರ್ಮಾಣಗೊಳ್ಳಲಿದೆ. ಅದು ಮೈಸೂರು ಜಿಲ್ಲಾ ವ್ಯಾಪ್ತಿಗೆ ಒಳಪಟ್ಟಿದೆ. ವಾಹನಕ್ಕೆ ಮತ್ತು ಚಾಲಕರಿಗೆ ತೊಂದರೆಯಾಗದ ರೀತಿಯಲ್ಲಿ ವೈಜ್ಞಾನಿಕವಾಗಿ ಉಬ್ಬು ನಿರ್ಮಿಸಲಾಗಿದೆ.

ಸಿಮೆಂಟ್‌, ಮರಳು ಇಂಟರ್‌ ಲಾಕ್‌ ಟೈಲ್ಸ್‌, ಡಾಂಬಾರ್‌ ಮೂಲಕ ಉಬ್ಬುಗಳನ್ನು ನಿರ್ಮಿಸಲಾಗಿದೆ ಎಂದರು.
ಈ ಹೆದ್ದಾರಿಯ ಒಂದು ಬದಿಯಲ್ಲಿ ನಾಗರಹೊಳೆ ರಾಷ್ಟ್ರೀಯ ಉದ್ಯಾನವನವಿದ್ದರೆ, ಮತ್ತೂಂದು ಬದಿಯಲ್ಲಿ ಪಿರಿಯಾಪಟ್ಟಣ, ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಗೆ ಒಳಪಟ್ಟ ಮೀಸಲು ಅರಣ್ಯವಿದೆ. ಬಂಡಿಪುರ ರಾಷ್ಟ್ರೀಯ ಉದ್ಯಾನ ವನದೊಳಗೆ ಸಂಜೆ 6 ಗಂಟೆ ಬಳಿಕ ವಾಹನ ಸಂಚಾರಕ್ಕೆ ನಿಷೇಧವಿರುವುದರಿಂದ ಕೇರಳದ ಮಾನಂದವಾಡಿ, ತೆಲಚೇರಿ ಭಾಗಗಳಿಗೆ ತೆರಳುವ ವಾಹನಗಳು ರಾತ್ರಿವೇಳೆ ಆನೆಚೌಕೂರು ಮಾರದಲ್ಲಿಯೇ ಚಲಿಸುತ್ತಿವೆ. ಹೀಗಾಗಿ ಈ ಭಾಗದಲ್ಲಿ ರಾತ್ರಿವೇಳೆ ಸಾವಿರಾರು ವಾಹನಗಳು ಎಡೆಬಿಡದೆ ಸಂಚರಿಸುತ್ತಿವೆ. ಇದರಿಂದ ಅರಣ್ಯದೊಳಗೆ ರಸ್ತೆದಾಟುವಾಗ ವಾಹನಗಳ ಜೀವಕ್ಕೆ ಕಂಟಕ ಎದುರಾಗಿತ್ತು. ಉಬ್ಬು ನಿರ್ಮಾಣದಿಂದ ಈ ಆತಂಕ ದೂರವಾಗಲಿದೆ. ಲೋಕೋಪ ಇಲಾಖೆಯ ಸಜಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.