ಅಗಲ್ಪಾಡಿ ಶಾಲೆಗೆ ಪ್ರಶಸ್ತಿಯ ಗರಿ
Team Udayavani, Mar 20, 2019, 1:00 AM IST
ಬದಿಯಡ್ಕ : ಗಡಿನಾಡಿನ ಅತ್ಯುತ್ತಮ ಕನ್ನಡ ಮಾಧ್ಯಮ ಶಾಲೆ ಪ್ರಶಸ್ತಿ ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಪ್ರೌಢಶಾಲೆಗೆ ಲಭಿಸಿದೆ. ನಿಟ್ಟೆ ಎಜುಕೇಶನ್ ಟ್ರಸ್ಟ್ ಕೊಡಮಾಡುವ ಡಾ| ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಅತ್ಯುತ್ತಮ ಶಾಲಾ ಪ್ರಶಸ್ತಿ ವಿತರಣೆ ಸಮಾರಂಭ ನಿಟ್ಟೆ ವಿಶ್ವವಿದ್ಯಾನಿಲಯ ಕ್ಯಾಂಪಸ್ನ ಕೆ.ಎಸ್. ಆಡಿಟೋರಿಯಂನಲ್ಲಿ ನಡೆಯಿತು. ಶಾಲಾ ಮುಖ್ಯಸ್ಥರು, ವಿದ್ಯಾರ್ಥಿಗಳೊಂದಿಗೆ ಮೂರು ಲಕ್ಷ ರೂ ನಗದು ಹಾಗೂ ವಿಶೇಷ ಪ್ರಶಸ್ತಿ ಪತ್ರವನ್ನು ಪಡೆದುಕೊಂಡರು. ನಿವೃತ್ತ ನ್ಯಾಯಮೂರ್ತಿ ಕರ್ನಾಟಕದ ಮಾಜಿ ಲೋಕಾಯುಕ್ತ ಎನ್.ಸಂತೋಷ್ ಹೆಗ್ಡೆ ಪ್ರಶಸ್ತಿ ವಿತರಿಸಿದರು. ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ವಿನಯ ಹೆಗ್ಡೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಾಲೆ ಆಯ್ಕೆ ಸಮಿತಿ ಸದಸ್ಯರಾದ ಕುದಿ ವಸಂತ ಶೆಟ್ಟಿ , ಪ್ರವೀಣ ಕುಮಾರಿ ಹಾಗೂ ಶಂಕರನಾರಾಯಣ ಅವರನ್ನು ಗೌರವಿಸಲಾಯಿತು. ಸಹ ಕುಲಾಧಿಪತಿ ಪ್ರೊಫೆಸರ್ ಡಾ| ಎಂ. ಶಾಂತಾರಾಮ ಶೆಟ್ಟಿ , ವಿವಿಯ ಆರ್ಥಿಕ ಹಾಗೂ ಅಭಿವೃದ್ಧಿ ನಿರ್ದೇಶಕ ಡಾ. ರಾಜೇಂದ್ರ ಎಂ. ನಿಟ್ಟೆ ವಿಶ್ವವಿದ್ಯಾಲಯದ ಆಡಳಿತ ಸಹ ಕುಲಾಧಿಪತಿ ಎನ್ ವಿಶಾಲ್ ಹೆಗ್ಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಗ್ರಾಮೀಣ ಕನ್ನಡ ಮಾಧ್ಯಮ ಶಾಲೆಗಳನ್ನು ಗುರುತಿಸುವ ನಿಟ್ಟಿನಲ್ಲಿ ನಿಟ್ಟೆ ವಿಶ್ವವಿದ್ಯಾಲಯ ಜಂಟಿಯಾಗಿ ದಕ್ಷಿಣ ಕನ್ನಡ ಕಾಸರಗೋಡು ಹಾಗೂ ಉಡುಪಿ ಜಿಲ್ಲೆಗಳ ಅರ್ಹ ಶಾಲೆಗಳನ್ನು ಗುರುತಿಸಿ, ಗಡಿನಾಡಿನ ಅತ್ಯುತ್ತಮ ಕನ್ನಡ ಶಾಲೆಯಾಗಿ ಅಗಲ್ಪಾಡಿ ಶ್ರೀ ಅನ್ನಪುರ್ಣೇಶ್ವರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಆಯ್ಕೆಗೊಂಡಿತು. ಶಾಲಾ ವ್ಯವಸ್ಥಾಪಕ ನಾರಾಯಣ ಶರ್ಮ ಬಳ್ಳಪದವು, ಮುಖ್ಯೋಪಾಧ್ಯಾಯರಾದ ಗಿರೀಶ ಎನ್, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶ್ರೀಪತಿ ಎಂ., ಎಂಪಿಟಿಎ ಅಧ್ಯಕ್ಷೆ ಜಯಂತಿ, ಶಾಲಾ ಅಧ್ಯಾಪಕರು, ವಿದ್ಯಾರ್ಥಿಗಳು ಜತೆಗಿದ್ದು ಪ್ರಶಸ್ತಿಯನ್ನು ಪಡೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ