ಅಡೂರು ಬಳಿ ಆನೆ ಹಾವಳಿ
Team Udayavani, Mar 21, 2019, 1:00 AM IST
ಅಡೂರು: ಇಲ್ಲಿನ ಪೊಯೆಮಜಲು ನಿವಾಸಿ ದೇವಪ್ಪ ಗೌಡ ಅವರ ತೋಟಕ್ಕೆ ಮಂಗಳವಾರ ತಡರಾತ್ರಿ ಕಾಡಾನೆಗಳು ನುಗ್ಗಿ ದಾಂಧಲೆ ನಡೆಸಿದ್ದು, ಅಪಾರ ಕೃಷಿ ನಾಶ ಮಾಡಿದೆ.
ಆನೆಗಳು 100ರಷ್ಟು ಬಾಳೆ ಗಿಡಗಳು, 10 ಅಡಿಕೆ ಮರ, 5 ತೆಂಗಿನ ಸಸಿಗಳನ್ನು ನಾಶಗೊಳಿಸಿವೆ.
ತಡರಾತ್ರಿ 1 ಗಂಟೆ ವೇಳೆಗೆ ತೋಟದಲ್ಲಿ ಸದ್ದು ಕೇಳಿ ಬಂದ ಹಿನ್ನೆಲೆಯಲ್ಲಿ ನೋಡಿದಾಗ ಆನೆಗಳು ವ್ಯಾಪಕ ಕೃಷಿ ನಾಶದಲ್ಲಿ ತೊಡಗಿರುವುದು ಕಂಡು ಬಂತು. ಗಂಟೆ ಬಾರಿಸಿ ಶಬ್ದ ಮಾಡಿದರೂ ಆನೆಗಳು ಮುಂಜಾನೆ 4 ಗಂಟೆ ವರೆಗೂ ತೋಟದಲ್ಲೇ ಇದ್ದು ಹಾನಿ ನಡೆಸಿದವು. ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಕೆಲವು ತಿಂಗಳ ಹಿಂದೆಯಷ್ಟೇ ಅಡೂರು ಮತ್ತು ಪಾಂಡಿಯ ಹಲವೆಡೆಗಳಲ್ಲಿ ಕಾಡಾನೆ ದಾಳಿ ನಡೆಸಿತ್ತು. ಕಾಡಾನೆ ಹಾವಳಿ ತಡೆಗಟ್ಟಲು ಸೂಕ್ತ ಕ್ರಮ ತೆಗೆದು ಕೊಳ್ಳಬೇಕೆಂದು ಕೃಷಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ