ಡೆಮೋಹಟ್‌ನಲ್ಲಿ ಪ್ರಥಮ ಮತದಾನ ನಡೆಸಿದ ನಿಮ್ಮಿ


Team Udayavani, Mar 23, 2019, 12:40 AM IST

22ksde2.jpg

ಕಾಸರಗೋಡು: ಮತದಾರರಿಗೆ ಮತದಾನ ನಡೆಸುವ ವಿಧಾನ ಸುಗಮಗೊಳಿಸುವ, ವಿವಿಪಾಟ್‌ ಸೌಲಭ್ಯದ ಕುರಿತು ಮಾಹಿತಿ ನೀಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ “ಡೆಮೋಹಟ್‌’ಆರಂಭಗೊಂಡಿದೆ.

ಆತಂಕ ನಿವಾರಣೆಗಾಗಿ 
ಡೆಮೋಹಟ್‌

ಮತದಾರರು ಅದರಲ್ಲೂ ಪ್ರಥಮ ಬಾರಿಗೆ ನೂತನ ಸೌಲಭ್ಯಗಳೊಂದಿಗಿನ ಮತದಾನ ನಡೆಸುವ    ವೇಳೆ ಉಂಟಾಗಬಲ್ಲ ಆತಂಕ ಪರಿಹರಿಸುವ ನಿಟ್ಟಿನಲ್ಲಿ ಈ ಸೌಲಭ್ಯಗಳ ಕುರಿತು ಸರಳವಾಗಿ ಎಲ್ಲ ಮಾಹಿತಿಗಳನ್ನೂ ನೀಡಿ, ಪ್ರಾತ್ಯಕ್ಷಿಕೆ ನಡೆಸಿ ಮತದಾನಕ್ಕೆ ಪೂರಕವಾದ ತರಬೇತಿ ನೀಡುವ ನಿಟ್ಟಿನಲ್ಲಿ ಈ ಡೆಮೋಹಟ್‌ ಸ್ಥಾಪಿಸಲಾಗಿದೆ. ಬ್ಯಾಲೆಟ್‌ ಯೂನಿಟ್‌, ಕಂಟ್ರೋಲ್‌ ಯೂನಿಟ್‌, ವಿವಿಪಾಟ್‌ ಇತ್ಯಾದಿಗಳ ಕುರಿತು ಸಮಗ್ರ ಮಾಹಿತಿ ಇಲ್ಲಿ ನೀಡಲಾಗುತ್ತಿದೆ.

ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಅವರ ಸಮಕ್ಷದಲ್ಲಿ, ಈ ಸಲ ಪ್ರಥಮ ಬಾರಿಗೆ ಮತದಾನ ನಡೆಸುವ ಸಿದ್ಧತೆಯಲ್ಲಿರುವ ಚೆಮ್ನಾಡ್‌ ಕೋಳಿಯಡ್ಕ ನಿವಾಸಿ ನಿಮ್ಮಿ ಟಿ. ಅವರು ಡೆಮೋ ಹಟ್‌ ಉದ್ಘಾಟಿಸಿದರು ಜಿಲ್ಲಾಡಳಿತೆ ವತಿಯಿಂದ ಡೆಮೋಹಟ್‌ ಸ್ಥಾಪಿಸಲಾಗಿದ್ದು, ಜಿಲ್ಲಾ ಮಟ್ಟದ ಅ ಧಿಕಾರಿಗಳು, ಸಿಬ್ಬಂದಿ ಈ ವೇಳೆ ಜತೆಗಿದ್ದರು.

ಡೆಮೋ ಹಟ್‌
ಕಾಸರಗೋಡು ಜಿಲ್ಲಾ ಧಿಕಾರಿ ಕಚೇರಿ ಆವರಣದಲ್ಲಿ ಸ್ಥಾಪಿಸಿದ ಡೆಮೋಹಟ್‌ನಲ್ಲಿ ಪ್ರಥಮ ಬಾರಿಗೆ ಮತದಾನ ನಡೆಸಿದ ಗುಂಗಿನಲ್ಲಿದ್ದಾರೆ   ಚೆಮ್ನಾಡ್‌ ನಿವಾಸಿ  ನಿಮ್ಮಿ ಟಿ.ಮತದಾನ ಯಂತ್ರ ಕುರಿತು ತರಬೇತಿ ನೀಡುವ ಕೇಂದ್ರದಲ್ಲಿ ಮತದಾನ ನಡೆಸುವ ತರಬೇತಿ ಪಡೆದರೆ ಲೋಕಸಭೆ ಚುನಾವಣೆಯ ಮತದಾನಕ್ಕೆ ಸುಲಭವಾದೀತು ಎಂಬ ಭಾವನೆಯಿಂದ ಬಂದಾಕೆ ಇವರು.
 
ಅನಿರೀಕ್ಷಿತ
ಆದರೆ ಅನಿರೀಕ್ಷಿತವಾಗಿ ಈ ಕೇಂದ್ರದ ಉದ್ಘಾಟನೆ ತಾವೇ ನಡೆಸಬೇಕಾಗಿ ಬಂದಾಗ ಸಂತೋಷ ಮತ್ತು ಸಂಕೋಚ ಜೊತೆಗೇ ಕಾಡಿತ್ತು. ಜಿಲ್ಲಾ ಧಿಕಾರಿ ಡಾ| ಡಿ. ಸಜಿತ್‌ ಬಾಬು ಅವರ ಒತ್ತಾಯದ ಮೇರೆಗೆ ತಾವು ಈ ಕರ್ತವ್ಯ ನಡೆಸಬೇಕಾಗಿ ಬಂದಿತ್ತು.

ತಾವಿಲ್ಲಿ ನಡೆಸಿದ ಮೋಕೊÌàಟಿಂಗ್‌ ಸಂತೋಷ ತಂದಿತ್ತಿದೆ ಎಂದವರು ಈ ವೇಳೆ ಅಭಿಪ್ರಾಯಪಟ್ಟರು. 

ಸರಳ ತರಬೇತಿ
ವಿವಿಪ್ಯಾಟ್‌ ಮೆಷಿನ್‌ ಕುರಿತು ಮಾಹಿತಿ ತಿಳಿಯಲು ಇಲ್ಲಿ ಅವಕಾಶ ಲಭಿಸಿದೆ. ಉಳಿದವರಿಗೂ ಸುಲಭ ರೀತಿ ಮತದಾನ ನಡೆಸಲು ಇಲ್ಲಿನ ಸರಳ ತರಬೇತಿ ಪೂರಕವಾಗಿದೆ ಎಂದವರು ನುಡಿದರು.

ಚೆಮ್ನಾಡ್‌ ಗ್ರಾಮ ಪಂಚಾಯತ್‌ನ ಕೋಳಿಯಡ್ಕ ನಿವಾಸಿ ದಾಮೋದರನ್‌-ಲೀಲಾ ದಂಪತಿ ಪುತ್ರಿ ನಿಮ್ಮಿ. ಬಿ.ಕಾಂ. ತೃತೀಯ ವರ್ಷ ಪರೀಕ್ಷೆ ಪೂರೈಸಿ, ಫಲಿತಾಂಶಕ್ಕಾಗಿ ಕಾಯುತ್ತಿರುವ ಈಕೆಗೆ ಈ ಬಾರಿ ಪ್ರಥಮ ಬಾರಿಗೆ ಮತದಾನ ನಡೆಸುವ ಅವಕಾಶವೂ ಲಭಿಸಿದೆ. 20 ವರ್ಷ ಪ್ರಾಯದ ಈಕೆಗೆ ಈ ಹಿಂದೆ ಮತದಾನಕ್ಕೆ ಗುರುತುಚೀಟಿ ಇಲ್ಲದೇ ಇದ್ದುದು ಕಾರಣವಾಗಿತ್ತು. ಈ ಬಾರಿ ಗುರುತುಚೀಟಿ ಲಭಿಸಿದ್ದು, ಮತದಾನಕ್ಕೆ ಹಾದಿ ಸುಗಮವಾಗಿದೆ ಎಂದವರು ನುಡಿದರು.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.