ಗುರುವಿಗೇ ತಿರುಮಂತ್ರ ಹಾಕಿದ ಹುಲಿ


Team Udayavani, May 25, 2017, 10:55 AM IST

chinnari-page-1.jpg

ಅನೇಕ ವರ್ಷಗಳ ಹಿಂದೆ ಕಾಡಿನಲ್ಲಿ ಹುಲಿ ಇತ್ತು. ಅದು ಒಂಟಿಯಾಗಿ ಬೆಳೆದಿತ್ತು. ಅದಕ್ಕೆ ಜೊತೆಗಾರುರು ಯಾರೂ ಇರಲಿಲ್ಲ. ಎಲ್ಲರೂ ಪಕ್ಕದ ಕಾಡಿಗೆ ಇದೊಂದನ್ನು ಬಿಟ್ಟು ತೆರಳಿದ್ದರು. ಅದು ಸದಾ ಕಾಲ ಮರದಡಿ ನೆರಳಿನಲ್ಲಿ ಸೋಮಾರಿಯಾಗಿ ಮಲಗಿಕೊಂಡಿರುತ್ತಿತ್ತು. ಹೀಗೇ ಮಲಗಿರುವಾಗ ಅದರತ್ತ ಕಾಡುಬೆಕ್ಕೊಂದು ಬಂದಿತು.”ಏನು ಹುಲಿರಾಯರೇ, ಕ್ಷೇಮವೇ? ಹಾಯಾಗಿ ನಿದ್ದೆ ಮಾಡುತ್ತಿರುವಿರಲ್ಲಾ… ಈಗ ತಾನೇ ಭರ್ಜರಿ ಭೋಜನ ಮುಗಿಸಿರುವ ಹಾಗೆ ಕಾಣುತ್ತಿದೆ.’ 

ಕಾಡುಬೆಕ್ಕಿನ ಮಾತಿಗೆ ಹುಸಿನಕ್ಕ ಹುಲಿ “ಅಯ್ಯೋ ನನಗೆ ಬೇಟೆಯಾಡಲು ಬಂದರೆ ತಾನೇ ಭರ್ಜರಿ ಭೋಜನ ಮಾಡುವುದಕ್ಕೆ! ಹಸಿವಿನಿಂದ ಸುಸ್ತಾಗಿ ಇಲ್ಲಿ ಕುಳಿತಿದ್ದೇನೆ’ ಎಂದಿತು. ಆಶ್ಚರ್ಯಗೊಂಡ ಕಾಡುಬೆಕ್ಕಿಗೆ ಹುಲಿಯ ಸ್ಥಿತಿ ನೋಡಿ ಬೇಸರವಾಯಿತು. ಅದು ಬೇಟೆಯ ವಿದ್ಯೆಯನ್ನು ಕಲಿಸಿಕೊಡಲು ಮುಂದಾಯಿತು. ಆ ದಿನದಿಂದ ಹುಲಿಗೆ ಕಠಿಣ ತರಬೇತಿ ಪ್ರಾರಂಭವಾಯಿತು. ಅನೇಕ ತಂತ್ರಗಳನ್ನು ಕಾಡು ಬೆಕ್ಕು, ಹುಲಿಗೆ ಕಲಿಸಿತು. ದಿನೇ ದಿನೇ ಕಲಿತ ವಿದ್ಯೆಯನ್ನು ಅಬ್ಯಾಸ ಮಾಡುತ್ತಾ ಮಾಡುತ್ತಾ ಹುಲಿರಾಯ ಬೇಟೆಯಲ್ಲಿ ಪಳಗಿಬಿಟ್ಟಿತು. ಅದೊಂದು ದಿನ ಹುಲಿಗೆ ತೀವ್ರ ಹಸಿವು. ಅದು ತನ್ನ ಗುರು ಕಾಡು ಬೆಕ್ಕಿನ ಬಳಿಗೆ ತೆರಳಿ ತನಗೆ ಆಹಾರ ಬೇಕೆಂದು ಕೇಳಿತು. ಕಾಡುಬೆಕ್ಕು “ಹಾಗಾದರೆ ನಿನ್ನ ಬೇಟೆಯ ಸಾಮರ್ಥಯವನ್ನು ಪರೀಕ್ಷಿಸಲು ಇದೇ ಸುಸಂದರ್ಭ’ ಎಂದಿತು. ಗಹಗಹಿಸಿ ನಕ್ಕ ಹುಲಿ ಕಾಡು ಬೆಕ್ಕಿನತ್ತ ದಾವಿಸಿತು. ಗಾಬರಿಯಾಗ ಕಾಡುಬೆಕ್ಕು ತನ್ನ ಬಳಿ ಏಕೆ ಬರುತ್ತಿದ್ದೀಯೆಂದು ಕೇಳಿದಾಗ “ನನ್ನ ಮೊದಲ ಪ್ರಯೋಗ ನಿನ್ನ ಮೇಲೆ ಆಗಲಿ. ನಿನ್ನನ್ನೇ ಬೇಟೆಯಾಡಿ ಹಸಿವು ತೀರಿಸಿಕೊಳ್ಳುತ್ತೇನೆ’ ಎಂದಿತು ಹುಲಿ. ಭಯಗೊಂಡ ಕಾಡುಬೆಕ್ಕು “ಕಲಿತ ವಿದ್ಯೆಯನ್ನು ಗುರುವಿನ ಮೇಲೆ ಪ್ರಯೋಗಿಸುತ್ತಿರುವೆಯಲ್ಲಾ ಇದು ಸರಿಯೇ?’ ಎಂದು ಕೇಳಿತು. ಕಾಡುಬೆಕ್ಕಿನ ಯಾವ ಮಾತುಗಳನ್ನು ಕೇಳಿಸಿಕೊಳ್ಳುವ ಸಂಯಮ ಹುಲಿಗಿರಲಿಲ್ಲ. ನಿನ್ನ ಎಲ್ಲಾ ವಿದ್ಯೆಗಳೂ ನನಗೆ ಸಿದ್ಧಿಸಿದೆ ನೀನು ಏನೇ ಮಾಡಿದರೂ ನನ್ನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ದಾಳಿ ಮಾಡಲು ಮುಂದಾಯಿತು. “ಅಯ್ಯೋ ಹುಲಿರಾಯ, ನಿನಗೆ ನಾನು ಎಲ್ಲಾ ವಿದ್ಯೆಗಳನ್ನೂ ಕಲಿಸಿರುವೆ ಎಂದು ತಿಳಿದುಕೊಂಡಿರುವೆಯಲ್ಲಾ. ಅದು ತಪ್ಪು ಒಂದು ವಿದ್ಯೆಯನ್ನು ನಿನಗೆ ಕಲಿಸಿರಲಿಲ್ಲ. ಬೇಟೆಯಿಂದ ತಪ್ಪಿಸಿಕೊಳ್ಳುವ ವಿದ್ಯೆ  ನಿನಗಿನ್ನೂ ತಿಳಿದಿಲ್ಲ. ನನಗೆ ತಿಳಿದಿದೆ’ ಎಂದು ನಕ್ಕು ಒಡನೆಯೇ ಹತ್ತಿರವೇ ಇದ್ದ ಮರವನ್ನು ಸರಸರನೇ ಏರಿತು. ಹುಲಿರಾಯ ಪೆಚ್ಚಾಗಿ ತನ್ನನ್ನು ತಾನೇ ಹಳಿದುಕೊಳ್ಳುತ್ತಾ ಕಾಡಿನಲ್ಲಿ ಮರೆಯಾಯಿತು.

– ಅಮರಯ್ನಾ ಪತ್ರಿಮಠ, ಯಾದಗಿರಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.