ಪ್ರೀತಿ ಪರೀಕ್ಷಿಸಿದ 3 ಸೇಬಿನ ಹಣ್ಣುಗಳು!


Team Udayavani, Jun 15, 2017, 12:41 PM IST

CHINNARY-4.jpg

ಬಾಗ್ಧಾದ್‌ನ ನಗರದಲ್ಲಿ ಜಾಫ‌ರ್‌- ಹಸೀನಾ ದಂಪತಿ ವಾಸಿಸುತ್ತಿದ್ದರು. ಹಸೀನಾ ಚೆಂದುಳ್ಳಿ ಚೆಲುವೆ. ಆಕೆಯ ಸೌಂದರ್ಯ ನೋಡಿ ಮನಸೋಲದವರೇ ಇಲ್ಲ. ಜಾಫ‌ರ್‌ಗಂತೂ ಪತ್ನಿ ಹಸೀನಾಳನ್ನು ಕಂಡರೆ ಪಂಚಪ್ರಾಣ. ಹಸೀನಾಗೂ ಅಷ್ಟೆ- ಜಾಫ‌ರ್‌ನಂಥ ಪತಿ ಸಿಕ್ಕಿದ್ದು ತನ್ನ ಪುಣ್ಯ ಎಂದೇ ಭಾವಿಸಿದ್ದಳು. ಇವರಿಬ್ಬರೂ ಅದೃಷ್ಟವಂತರು ಎಂದು ಇಡೀ ಊರಿಗೆ ಊರೇ ಹೇಳುತ್ತಿತ್ತು. ಪತ್ನಿ ಏನನ್ನು ಕೇಳಿದರೂ ಜಾಫ‌ರ್‌ ಇಲ್ಲ ಎನ್ನುತ್ತಿರಲಿಲ್ಲ. 

ಹೀಗೆ, ಒಂದು ದಿನ ಎಂದಿನಂತೆ ಜಾಫ‌ರ್‌ ಕೆಲಸಕ್ಕೆ ಹೊರಡುತ್ತಾ ಪತ್ನಿಯನ್ನು ಕರೆದು, “ನಿನಗೇನಾದರೂ ಬೇಕಾ?’ ಎಂದು ಕೇಳುತ್ತಾನೆ. ಅರೆಕ್ಷಣ ಹಿಂಜರಿದರೂ ಸಾವರಿಸಿಕೊಂಡ ಹಸೀನಾ, “ನೀನು ನನ್ನೆಲ್ಲ ಆಸೆಯನ್ನೂ ಈಡೇರಿಸಿದ್ದೀಯ. ನಾನೀಗ ಒಂದು ವಸ್ತುವನ್ನು ಕೇಳುತ್ತೇನೆ. ಅದನ್ನು ಎಷ್ಟು ಕಷ್ಟವಾದರೂ ತಂದುಕೊಡಬೇಕು’ ಎನ್ನುತ್ತಾಳೆ. ಅದಕ್ಕೆ ಒಪ್ಪಿದ ಜಾಫ‌ರ್‌, “ನನಗೆ ನಿನಗಿಂತ ಮುಖ್ಯವಾದದ್ದು ಯಾವುದೂ ಇಲ್ಲ. ನೀನು ಕೇಳುವ ವಸ್ತು ಸ್ವರ್ಗದಲ್ಲಿದ್ದರೂ ತಂದುಕೊಡುತ್ತೇನೆ’ ಎನ್ನುತ್ತಾನೆ. ಹಸೀನಾಗೆ ಖುಷಿಯಾಗುತ್ತದೆ. “ನನಗೆ ಮೂರು ಸೇಬುಹಣ್ಣುಗಳು ಬೇಕು. ಇದು ಸೇಬುಹಣ್ಣು ಸಿಗುವ ಕಾಲವಲ್ಲ. ಆದರೂ, ನನಗಾಗಿ ಅದನ್ನು ಎಲ್ಲಿಂದಾದರೂ ತರುತ್ತೀಯ ಎಂಬ ನಂಬಿಕೆಯಿದೆ,’ ಎನ್ನುತ್ತಾಳೆ.

ಪತ್ನಿಯ ಆಸೆ ಈಡೇರಿಸಲೆಂದು ಜಾಫ‌ರ್‌ ಮಾರುಕಟ್ಟೆಯಲ್ಲೆಲ್ಲಾ ಜಾಲಾಡುತ್ತಾನೆ. ಸೇಬು ಸಿಗುವುದಿಲ್ಲ. ಕೊನೆಗೆ, ಬಾಗ್ಧಾದ್‌ನ ಹೊರಗಿನ ಊರಿಗೆ ತೆರಳುತ್ತಾನೆ. ಅಲ್ಲಿ ತುಂಬಾ ಹುಡುಕಿದ ಬಳಿಕ ಒಂದು ಅಂಗಡಿಯಲ್ಲಿ ಸೇಬು ಕಾಣುತ್ತದೆ. ಜಾಫ‌ರ್‌ ಕೂಡಲೇ ಅದನ್ನು ಖರೀದಿಸಿ ಊರಿಗೆ ಮರಳುತ್ತಾನೆ. ಸೇಬನ್ನು ನೋಡಿದೊಡನೆ ಹಸೀನಾಳ ಮುಖ ಅರಳುತ್ತದೆ. “ಆಹಾ, ಎಷ್ಟೊಂದು ತಾಜಾ ಸೇಬುಗಳು. ನಾನು ಸ್ನಾನ ಮಾಡಿ ಬಂದು, ಇದನ್ನು ತಿನ್ನುತ್ತೇನೆ’ ಎನ್ನುತ್ತಾ ಅವುಗಳನ್ನು ಮೇಜಿನ ಮೇಲಿಟ್ಟು ಸ್ನಾನಕ್ಕೆ ತೆರಳುತ್ತಾಳೆ. ಜಾಫ‌ರ್‌ ತನ್ನ ಕೆಲಸಕ್ಕೆ ಮರಳುತ್ತಾನೆ.

ಅಷ್ಟರಲ್ಲಿ ಅವರ ಪುಟ್ಟ ಮಗ ಆಟವಾಡುತ್ತಾ ಮನೆಯೊಳಗೆ ಬಂದಾಗ, ಮೇಜಿನ ಮೇಲಿದ್ದ ಸೇಬು ಅವನ ಕಣ್ಣಿಗೆ ಬೀಳುತ್ತದೆ. ಮೂರೂ ಹಣ್ಣುಗಳನ್ನು ಬಾಚಿಕೊಂಡು, ತನ್ನ ಗೆಳೆಯರಿಗೆ ತೋರಿಸೋಣವೆಂದು ಹೊರಗೆ ಒಯ್ಯುತ್ತಾನೆ. ಓಡುವಾಗ ಕಲ್ಲು ತಾಗಿ ಎಡವಿ ಬೀಳುತ್ತಾನೆ. ಕೈಯ್ಯಲ್ಲಿದ್ದ ಸೇಬು ಹಣ್ಣುಗಳು ಚೆಲ್ಲಾಪಿಲ್ಲಿಯಾಗಿ ಬೀಳುತ್ತದೆ. ಕಷ್ಟಪಟ್ಟು ಎದ್ದ ಹುಡುಗ ಅವುಗಳನ್ನು ಎತ್ತಿಕೊಳ್ಳುತ್ತಿರುತ್ತಾನೆ. ಅಷ್ಟರಲ್ಲಿ, ಅದೇ ರಸ್ತೆಯಲ್ಲಿ ಹೋಗುತ್ತಿದ್ದ ದಾರಿಹೋಕನೊಬ್ಬ, ಮಗುವನ್ನು ತಳ್ಳಿ ಸೇಬುಹಣ್ಣನ್ನು ಕಿತ್ತುಕೊಂಡು ಓಡುತ್ತಾನೆ. ಈಗ ಸೇಬು ಸಿಗುವುದೇ ಅಪರೂಪ. ಅಂಥದ್ದರಲ್ಲಿ ಈ 3 ಹಣ್ಣುಗಳನ್ನು ಮಾರಿದರೆ, ಸಾಕಷ್ಟು ದುಡ್ಡು ಮಾಡಬಹುದು ಎಂಬ ಯೋಚನೆಯಿಂದ ಆತ ಮಾರುಕಟ್ಟೆಯತ್ತ ಧಾವಿಸುತ್ತಾನೆ.

ಇತ್ತ ಹುಡುಗ ಅಳುತ್ತಾ ಮನೆಗೆ ಬಂದು, ತಾಯಿಯ ಬಳಿ ಎಲ್ಲ ವಿಷಯ ಹೇಳುತ್ತಾನೆ. ಹಸೀನಾ ಮಗುವನ್ನು ಸಮಾಧಾನಪಡಿಸಿ, “ಸೇಬಿಗಿಂತ ನಮಗೆ ನೀನು ಮುಖ್ಯ. ನಿನ್ನನ್ನು ಆತ ಒಯ್ಯಲಿಲ್ಲ ತಾನೇ. ಅದಕ್ಕೆ ಸಂತೋಷಪಡು’ ಎನ್ನುತ್ತಾಳೆ.

ಅಂದು ಸಂಜೆ ದಾರಿಹೋಕ ಮಾರುಕಟ್ಟೆಯಲ್ಲಿ ಸೇಬುಹಣ್ಣನ್ನು ಮಾರಲು ಯತ್ನಿಸುತ್ತಿರುವುದು ಜಾಫ‌ರ್‌ನ ಕಣ್ಣಿಗೆ ಬೀಳುತ್ತದೆ. “ಅರೆ, ಇದು ನಾನು ನನ್ನ ಪ್ರೀತಿಯ ಪತ್ನಿಗಾಗಿ ಕಷ್ಟಪಟ್ಟು ತಂದ ಸೇಬಲ್ಲವೇ? ಹಾಗಾದರೆ, ಆಕೆ ಅದನ್ನು ಬೇರೊಬ್ಬ ವ್ಯಕ್ತಿಗೆ ಕೊಟ್ಟು, ನನಗೆ ಮೋಸ ಮಾಡಿದಳೇ? ನನ್ನ ಪ್ರೀತಿಗೆ ದ್ರೋಹ ಎಸಗಿದವಳನ್ನು ಸುಮ್ಮನೆ ಬಿಡಲ್ಲ’ ಎನ್ನುತ್ತಾ ಜಾಫ‌ರ್‌ ಆವೇಶದಿಂದ ಮನೆಗೆ ಹೋಗಿ, ಚಾಕುವಿಂದ ಪತ್ನಿಗೆ ಇರಿಯಲು ಮುಂದಾಗುತ್ತಾನೆ. ಅಷ್ಟರಲ್ಲಿ ಅಡ್ಡ ಬರುವ ಮಗ, “ಅಪ್ಪಾ, ಬೆಳಗ್ಗೆ ಅಪರಿಚಿತನೊಬ್ಬ ನನ್ನ ಕೈಲಿದ್ದ ಸೇಬನ್ನು ಕಿತ್ತುಕೊಂಡು ಹೋದ. ಅವನನ್ನು ಹಿಡಿದು ಸೇಬನ್ನು ವಾಪಸ್‌ ತಂದುಕೊಡ್ತೀಯಾ’ ಎಂದು ಕೇಳುತ್ತಾನೆ. ಮಗನ ಮಾತು ಕೇಳುತ್ತಲೇ ಜಾಫ‌ರ್‌ಗೆ ತನ್ನ ತಪ್ಪಿನ ಅರಿವಾಗುತ್ತದೆ. ಪ್ರೀತಿಯ ಪತ್ನಿಯನ್ನೇ ಕೊಲ್ಲಲು ಹೊರಟೆಯಲ್ಲಾ ಎಂದು ನೊಂದುಕೊಂಡು, ಹಸೀನಾಳ ಕ್ಷಮೆಯಾಚಿಸುತ್ತಾನೆ. ಇದು ನಮ್ಮ ಪ್ರೀತಿಯ ಪರೀಕ್ಷೆ ಎನ್ನುತ್ತಾಳೆ ಹಸೀನಾ. ನಂತರ ಅವರಿಬ್ಬರೂ ಒಂದಾಗಿ ಬಾಳುತ್ತಾರೆ.

ಹಲೀಮತ್‌ ಸ ಅದಿಯ
 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.