ಮುಖ ತೋರಿಸಿದ್ದಕ್ಕೆ ಮರಣದಂಡನೆಯೇ?!


Team Udayavani, Aug 10, 2017, 8:40 AM IST

maranadandane.jpg

ಒಬ್ಬ ರಾಜ ಇದ್ದ. ಆತ ತನ್ನ ಬಾಲ್ಯದಿಂದಲೂ ಮೂಢನಂಬಿಕೆಗಳಿಗೆ ಪ್ರಾಶಸ್ತ್ಯ ನೀಡುತ್ತಿದ್ದ. ಬೆಳಗ್ಗೆ ಎದ್ದ ಕೂಡಲೆ ಉದ್ಯಾನದಲ್ಲಿ ನಿರ್ಮಿಸಿದ್ದ ಸೂರ್ಯದೇವನ ಮೂರ್ತಿಗೆ ನಮಸ್ಕರಿಸದೇ ಯಾರ ಮುಖವನ್ನೂ ಆತ ನೋಡುತ್ತಿರಲಿಲ್ಲ.ಸೂರ್ಯನನ್ನು ನೋಡಿದ ಮೇಲೆಯೇ ತನ್ನ ದೈನಂದಿನ ಕೆಲಸ ಆರಂಭಿಸುತ್ತಿದ್ದ. ಒಂದು ವೇಳೆ ಬೇರೆಯವರ ಮುಖ ನೋಡಿದರೆ ಅಂದಿನ ಕೆಲಸಗಳು ನಡೆಯುವುದಿಲ್ಲ ಎಂಬುದು ಆತನ ನಂಬಿಕೆಯಾಗಿತ್ತು.

ಹೀಗಿರುವಾಗ ಒಮ್ಮೆ ರಾಜ ತನ್ನ ಪರಿವಾರದೊಂದಿಗೆ ಬೇಟೆಗೆ ಕಾಡಿಗೆ ತೆರಳಿದ. ಅಂದು ಒಂದೇ ಒಂದು ಬೇಟೆಯೂ ಸಿಗಲಿಲ್ಲ. ಯಾಕೆ ಹೀಗಾಯೆ¤ಂದು ಯೋಚಿಸುತ್ತ ಕುಳಿತಿರುವಾಗ ಬೆಳಗ್ಗೆ ಎದ್ದ ತಕ್ಷಣ ರೈತನ ಮುಖ ನೋಡಿದ್ದು ನೆನಪಾಯಿತು. ಕೂಡಲೇ ರಾಜನು  ಕೋಪಗೊಂಡು, ಭಟರನ್ನು ಕರೆದು ಆ ರೈತನನ್ನು ಕರೆ ತರುವಂತೆ ಆದೇಶಿಸಿದ. ಮನೆಗೆ ಬಂದ ಭಟರಿಂದ ವಿಷಯ ತಿಳಿದ ರೈತನಿಗೂ ಒಂದು ಕ್ಷಣ ಭಯವಾಯಿತು. ಹೆದರಿಕೆಯಿಂದ ಕೈಕಾಲುಗಳೆಲ್ಲಾ ನಡುಗಿದವು. ಭಟರು ರೈತನನ್ನು ಕರೆತಂದು ರಾಜನ ಮುಂದೆ ನಿಲ್ಲಿಸಿದರು. 

“ಇಂದು ಬೆಳಗ್ಗೆ ನನ್ನ ಆರಾಧ್ಯ ದೈವವನ್ನು ನೋಡುವ ಮೊದಲೇ ನಿನ್ನ ಮುಖ ನೋಡಿದೆ. ಅದೇ ಕಾರಣದಿಂದ ಇಂದು ಹೋದ ಕೆಲಸ ಆಗಲಿಲ್ಲ. ಹಾಗಾಗಿ ನಿನಗೆ ಮರಣದಂಡನೆ ವಿಧಿಸುತ್ತಿದ್ದೇನೆ’ ಎಂದು ರಾಜ ಆದೇಶಿಸಿದ. ರೈತನಿಗೆ ಇದರಿಂದ ದುಃಖವಾಯಿತು. ಆತ ಥರಥರ ನಡುಗತೊಡಗಿದ. 

ನಂತರ ದೀನನಾಗಿ, “ಮಹಾಪ್ರಭು, ಈ ಬೆಳಗ್ಗೆ ಹೊಲದಲ್ಲಿ ಬೆಳೆದು ನಿಂತ ಬೆಳೆಯನ್ನು ನೋಡಲು ಹೊರಟಿದ್ದೆ. ನಾನು ಕೂಡ ಮೊದಲು ನಿಮ್ಮ ಮುಖವನ್ನೇ ನೋಡಿದ್ದು. ಅದರ ಫ‌ಲವಾಗಿ ಈಗ ನನಗೆ ಉಂಟಾಗಿರುವ ಪರಿಸ್ಥಿತಿಯನ್ನು ನೋಡಿ’ ಎಂದ. 

ಆಗ ಹತ್ತಿರದಲ್ಲಿದ್ದ ಅನುಭವಿ ಹಾಗೂ ಜ್ಞಾನವಂತನೂ ಆದ ಮಂತ್ರಿ ಧೈರ್ಯ ಮಾಡಿ ರಾಜನಿಗೆ ಹೀಗೆ ಸಲಹೆ ನೀಡಿದ – “ಪ್ರಭುಗಳೇ, ರೈತನ ಮಾತಿನಲ್ಲಿ ಸತ್ಯವಿದೆ. ನೀವು ಮೊದಲು ನೋಡಿದ್ದು ರೈತನನ್ನು. ರೈತನೂ ಮೊದಲು ನೋಡಿದ್ದು ನಿಮ್ಮನ್ನು. ನಿಮಗೆ ಬೇಟೆ ದೊರೆಯದಿದ್ದಕ್ಕೂ ನೀವು ರೈತನ ಮುಖ ನೋಡಿದ್ದಕ್ಕೂ ಸಂಬಂಧವಿಲ್ಲ. ರೈತನಿಗೆ ನೀವು ಶಿಕ್ಷೆ ವಿಧಿಸುವುದು ಸರಿಯಲ್ಲ. ಒಂದು ವೇಳೆ ಶಿಕ್ಷೆ ವಿಧಿಸಿದ್ದೇ ಆದರೆ, ರಾಜನ ಮುಖ ನೋಡಿದ್ದಕ್ಕೆ ರೈತನಿಗೆ ಶಿಕ್ಷೆಯಾಯಿತಂತೆ. ರಾಜನ ಮುಖ ನೋಡಿದ್ದಕ್ಕೆ ರೈತ ಸತ್ತು ಹೋದನಂತೆ ಎಂಬ ಮಾತುಗಳೆಲ್ಲ ಹುಟ್ಟಿಕೊಳ್ಳುತ್ತವೆ. ಅದರಿಂದ ನಿಮಗೆ ಕೆಟ್ಟ ಹೆಸರು ಬರುತ್ತದೆ’ ಎಂದ. ಮಂತ್ರಿಯ ಮಾತು ಕೇಳಿದ ರಾಜನಿಗೆ ತನ್ನ ತಪ್ಪಿನ ಅರಿವಾಯಿತು. ರೈತನ ಬಳಿ ಕ್ಷಮೆ ಕೋರಿ ಅವನನ್ನು ಊರಿಗೆ ಕಳಿಸಿಕೊಟ್ಟ.

– ಆದಿತ್ಯ ಹೆಚ್‌. ಎಸ್‌.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.