ಫ‌ಲಿಸದ ಮೊಸಳೆಯ ಉಪಾಯ


Team Udayavani, Jan 4, 2018, 11:11 AM IST

04-14.jpg

ಕಾಡಿನಲ್ಲಿ ಆಳವಾದ ನದಿಯೊಂದಿತ್ತು. ಆ ನದಿಯಲ್ಲಿ ಮೊಸಳೆಯೊಂದು ವಾಸವಾಗಿತ್ತು. ಅಲ್ಲಿಗೆ ನೀರು ಕುಡಿಯಲು ಬರುವ ಪ್ರಾಣಿಗಳನ್ನು  ಹೊಂಚು ಹಾಕಿ ಕಬಳಿಸುತ್ತಿತ್ತು. ಒಮ್ಮೆ ಮೊಸಳೆಯ ದುರಾದೃಷ್ಟಕ್ಕೆ ಎಂಟು ದಿನಗಳಾದರೂ ಒಂದು ಪ್ರಾಣಿಯೂ ನದಿಯತ್ತ ಸುಳಿಯಲಿಲ್ಲ. ಹಸಿವು ಹೆಚ್ಚಾಗಿ ಮೊಸಳೆ ತತ್ತರಿಸಿ ಹೋಯಿತು. ಒಂದು ಸಣ್ಣ ಮಾಂಸದ ತುಂಡಾದರೂ ಸಿಕ್ಕರೆ ಸಾಕು ಎಂದು ಆ ದಡದಿಂದ ಈ ದಡಕ್ಕೆ, ಈ ದಡದಿಂದ ಆ ದಡಕ್ಕೆ ಅಲೆದಾಡಿತು. ಅಷ್ಟರಲ್ಲಿ ಅಲ್ಲೇ ಹಾರಾಡುತ್ತಿದ್ದ ಕೊಕ್ಕರೆ ಅದರ ಕಣ್ಣಿಗೆ ಬಿತ್ತು. ಉಪಾಯ ಮಾಡಿ ಅದನ್ನು ಕಬಳಿಸಬೇಕೆಂದು ನಿರ್ಧರಿಸಿ ದಂಡೆಗೆ ಬಂದಿತು. ಕೊಕ್ಕರೆಯನ್ನು ಕರೆದು “ಗೆಳೆಯಾ, ನನ್ನ ದವಡೆ ಹಲ್ಲುಗಳಲ್ಲಿ ಆಹಾರದ ತುಂಡು ಸಿಕ್ಕಿಹಾಕಿಕೊಂಡಿದೆ. ಎಷ್ಟು ಪ್ರಯತ್ನಿಸಿದರೂ ಗಂಟಲಿಗೂ ಇಳಿಯದೇ ಹೊರಗೂ ಬಾರದೆ ಕಿರಿಕಿರಿಯೆನಿಸುತ್ತಿದೆ. ಅದನ್ನು ನಿನ್ನ ಉದ್ದನೆಯ ಕೊಕ್ಕಿನಿಂದ ಹೆಕ್ಕಿ ತಿಂದುಬಿಡು. ನಿನ್ನ ಹೊಟ್ಟೆಯೂ ತುಂಬುತ್ತದೆ; ನನ್ನ ಸಮಸ್ಯೆಯೂ ಬಗೆಹರಿಯುತ್ತದೆ. ದಯವಿಟ್ಟು ಸಹಾಯ ಮಾಡುವೆಯಾ?’ ಎಂದು ಪ್ರಾರ್ಥಿಸಿತು. 

ಕೊಕ್ಕರೆ ಸ್ವಲ್ಪ ಯೋಚಿಸಿ, “ಖಂಡಿತವಾಗಿಯೂ ನಿನಗೆ ಸಹಾಯ ಮಾಡುವ ಮನಸ್ಸಿದೆ. ಆದರೆ, ನನಗೆ ಎರಡು ದಿನಗಳಿಂದ ಕೊಕ್ಕಿನಲ್ಲಿ ಸಿಕ್ಕಾಪಟ್ಟೆ ನೋವಿದೆ. ಆದ್ದರಿಂದ ಬೇರೆ ಉಪಕರಣ ಬಳಸಿ ನಿನ್ನ ಬಾಯಿಯನ್ನು ಸ್ವತ್ಛಗೊಳಿಸುವೆ’ ಎಂದಿತು. ಹೇಗಾದರೂ ಸರಿ ಕೊಕ್ಕರೆ ತನ್ನ ಹತ್ತಿರ ಬಂದರೆ ಸಾಕೆಂದು ಮೊಸಳೆ ಕೊಕ್ಕರೆಯ ನಿಬಂಧನೆಗೆ ಒಪ್ಪಿತು.

ಕೊಕ್ಕರೆ ಮೊಸಳೆಯ ಬಳಿ ಬಂದು ಬಾಯಿ ಅಗಲಿಸಲು ಹೇಳಿತು. ಒಳಗೊಳಗೇ ನಗುತ್ತಾ ಮೊಸಳೆ ಬಾಯಿ ತೆರೆಯಿತು. ಕೊಕ್ಕರೆ ಬಾಯಿ ಹತ್ತಿರ ಬಂದ ಕೂಡಲೆ ಕಬಳಿಸಬೇಕೆಂದು ಮನಸ್ಸಿನಲ್ಲಿ ಲೆಕ್ಕ ಹಾಕಿತು. ಕೊಕ್ಕರೆ, ಮೊಸಳೆಗೆ ಇನ್ನೂ ದೊಡ್ಡದಾಗಿ ಬಾಯಿ ಅಗಲಿಸಲು ಹೇಳಿತು. ಮೊಸಳೆ ಕಷ್ಟಪಟ್ಟು ಬಾಯಿ ಹಿಗ್ಗಿಸಿದ ತಕ್ಷಣವೇ ಕೊಕ್ಕರೆ ತನ್ನೊಡನೆ ತಂದಿದ್ದ ಮರದ ಕೋಲನ್ನು ಮೊಸಳೆಯ ಬಾಯೊಳಗೆ ಉದ್ದಕ್ಕೆ ನಿಲ್ಲಿಸಿತು. ಈಗ ಮೊಸಳೆ ಏನು ಮಾಡಿದರೂ ಬಾಯಿ ಮುಚ್ಚಲು ಸಾಧ್ಯವಿರಲಿಲ್ಲ. ಮೊಸಳೆಯ ಹಲ್ಲುಗಳನ್ನು ಶುದ್ಧಗೊಳಿಸಿದ ಬಳಿಕ ಬುದ್ಧಿವಂತ ಕೊಕ್ಕರೆ ಕೋಲಿನೊಂದಿಗೆ ಹಾರಿ ಹೋಯಿತು. ಬೇಸ್ತು ಬಿದ್ದ ಮೊಸಳೆ ಹಾರಿ ಹೋಗುತ್ತಿದ್ದ ಕೊಕ್ಕರೆಯನ್ನೇ ಮಿಕ ಮಿಕ ನೋಡಿತು.

ಅಶೋಕ ವಿ ಬಳ್ಳಾ

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.