ಬ್ರಿಟಿಷರು ಕದಲಿಸಲೆತ್ನಿಸಿದ ಬಂಡೆ!


Team Udayavani, Jun 14, 2018, 6:00 AM IST

m-9.jpg

ಮಾನವನ ವಾಸವಿರುವ ಈ ಭೂಮಿಯು ಅತ್ಯಾಕರ್ಷಕ ಪ್ರಕೃತಿಯನ್ನು ಹೊಂದಿದೆ. ಅದರಂತೆ ಪ್ರಕೃತಿಯು ಅದೆಷ್ಟೊ ಅಗಾಧವಾದ ವಿಸ್ಮಯಗಳನ್ನು ತನ್ನ ಒಡಲಿನಲ್ಲಿ ಇಟ್ಟುಕೊಂಡಿದೆ. ಜಗತ್ತಿನೆಲ್ಲೆಡೆ ಕಂಡುಬರುವಂತೆ ಭಾರತದಲ್ಲೂ ಸಹ ಕೆಲವು ನಯನ ಮನೋಹರವಾದ ಪ್ರಾಕೃತಿಕ ವಿಸ್ಮಯ ತಾಣಗಳಿವೆ. ಅಂಥ ಕೆಲ ನಿಸರ್ಗ ನಿರ್ಮಿತ ಆಕರ್ಷಣೆಗಳಲ್ಲಿ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯಲ್ಲಿರುವ ಮಹಾಬಲಿಪುರಂ ಅಥವಾ ಮಾಮಲ್ಲಪುರಂನ ಕೃಷ್ಣನ ಬೆಣ್ಣೆಯ ಚೆಂಡು ಎಂಬ ಬೃಹತ್‌ ಬಂಡೆಯೂ ಒಂದು. ರಾಜಧಾನಿ ಚೆನ್ನೆಗೆ ಹತ್ತಿರವಿರುವ ಸಮುದ್ರ ತಟದ ಮಾಮಲ್ಲಪುರಂ ಅಥವಾ ಮಹಾಬಲಿಪುರಂ ತನ್ನಲ್ಲಿರುವ ಕಡಲ ತೀರ ತಟದ ದೇವಾಲಯಕ್ಕಾಗಿ ಸಾಕಷ್ಟು ಪ್ರಸಿದ್ಧಿ ಪಡೆದಿರುವ ತಾಣ. ಆದರೆ ಇಲ್ಲಿ ಒಂದು ವಿಶೇಷವಿದೆ. ಅದುವೇ ಸಮತೋಲನದ ಬಂಡೆ. ಇದಕ್ಕೆ “ಕೃಷ್ಣನ ಬೆಣ್ಣೆಯ ಚೆಂಡು’ ಎಂದು ಕರೆಯುತ್ತಾರೆ. ಈ ಬಂಡೆಯು ಸುಮಾರು 1200 ವರ್ಷಗಳ ಇತಿಹಾಸವನ್ನು ಹೊಂದಿದ್ದು ಇಳಿಜಾರಿನ ಕಲ್ಲು ಹಾಸಿಗೆಯ ಮೇಲೆ ಉರುಳದೆ ಚಿಕ್ಕದಾದ ಸ್ಥಳದಲ್ಲಿ ಹಾಗೆ ತನ್ನ ಸಮತೋಲನವನ್ನು ಕಾಯ್ದುಕೊಂಡು ನಿಂತಿರುವುದನ್ನು ನೋಡಿದಾಗ ಅಚ್ಚರಿಯಾಗದೆ ಇರಲಾರದು. ಸುಮಾರು 20 ಅಡಿ ಎತ್ತರ, 5 ಮೀಟರ್‌ ಅಗಲವಿರುವ ಈ ಬಂಡೆಯು 250 ಟನ್‌ ತೂಕವಿದೆಯೆಂದು ಅಂದಾಜಿಸಲಾಗಿದೆ. ಈ ಬಂಡೆ ಕೇವಲ 4 ಅಡಿಗಿಂತ ಕಡಿಮೆ ಜಾಗದಲ್ಲಿ ಇಳಿಜಾರಿನ ಪ್ರದೇಶದಲ್ಲಿ ಭದ್ರವಾಗಿ ನಿಂತಿರುವುದು ಎಲ್ಲರ ಅಚ್ಚರಿಗೆ ಕಾರಣ. 1908ರಲ್ಲಿ ಬ್ರಿಟಿಷ್‌ ಅಧಿಕಾರಿಯೊಬ್ಬರು ಈ ಬಂಡೆಯನ್ನು ಅಲ್ಲಿಂದ ತೆಗೆದುಹಾಕಲು ನಿರ್ಧರಿಸಿ ಸುಮಾರು 7 ಆನೆಗಳನ್ನು ಬಳಸಿ ಈ ಬೃಹತ್‌ ಬಂಡೆಯನ್ನು ಉರುಳಿಸಲು ಪ್ರಯತ್ನ ಪಟ್ಟಿದ್ದರು. ಆದರೆ ಬಂಡೆ ಒಂದು ಇಂಚೂ ಕದಲಲಿಲ್ಲವಂತೆ. ಹಾಗಾಗಿ ತಮ್ಮ ಪ್ರಯತ್ನವನ್ನು ಅಲ್ಲಿಗೇ ನಿಲ್ಲಿಸುತ್ತಾರೆ. ಇತಿಹಾಸದಲ್ಲಿ ಎಷ್ಟೋ ಜನರು ಈ ಬಂಡೆಯನ್ನು ಕದಲಿಸಲು ತಮ್ಮ ಶಕ್ತಿ ಮೀರಿ ಪ್ರಯತ್ನಿಸಿದ್ದಾರೆ, ಆದರೆ ಆಗಿಲ್ಲ. ಈ ಬಂಡೆಯು ಪ್ರವಾಸಿಗರ ಮೆಚ್ಚಿನ ತಾಣಗಳಲ್ಲಿ ಒಂದಾಗಿದೆ.

ಪುರುಷೋತ್ತಮ್‌

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.