ಬ್ರಿಟಿಷರು ಕದಲಿಸಲೆತ್ನಿಸಿದ ಬಂಡೆ!


Team Udayavani, Jun 14, 2018, 6:00 AM IST

m-9.jpg

ಮಾನವನ ವಾಸವಿರುವ ಈ ಭೂಮಿಯು ಅತ್ಯಾಕರ್ಷಕ ಪ್ರಕೃತಿಯನ್ನು ಹೊಂದಿದೆ. ಅದರಂತೆ ಪ್ರಕೃತಿಯು ಅದೆಷ್ಟೊ ಅಗಾಧವಾದ ವಿಸ್ಮಯಗಳನ್ನು ತನ್ನ ಒಡಲಿನಲ್ಲಿ ಇಟ್ಟುಕೊಂಡಿದೆ. ಜಗತ್ತಿನೆಲ್ಲೆಡೆ ಕಂಡುಬರುವಂತೆ ಭಾರತದಲ್ಲೂ ಸಹ ಕೆಲವು ನಯನ ಮನೋಹರವಾದ ಪ್ರಾಕೃತಿಕ ವಿಸ್ಮಯ ತಾಣಗಳಿವೆ. ಅಂಥ ಕೆಲ ನಿಸರ್ಗ ನಿರ್ಮಿತ ಆಕರ್ಷಣೆಗಳಲ್ಲಿ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯಲ್ಲಿರುವ ಮಹಾಬಲಿಪುರಂ ಅಥವಾ ಮಾಮಲ್ಲಪುರಂನ ಕೃಷ್ಣನ ಬೆಣ್ಣೆಯ ಚೆಂಡು ಎಂಬ ಬೃಹತ್‌ ಬಂಡೆಯೂ ಒಂದು. ರಾಜಧಾನಿ ಚೆನ್ನೆಗೆ ಹತ್ತಿರವಿರುವ ಸಮುದ್ರ ತಟದ ಮಾಮಲ್ಲಪುರಂ ಅಥವಾ ಮಹಾಬಲಿಪುರಂ ತನ್ನಲ್ಲಿರುವ ಕಡಲ ತೀರ ತಟದ ದೇವಾಲಯಕ್ಕಾಗಿ ಸಾಕಷ್ಟು ಪ್ರಸಿದ್ಧಿ ಪಡೆದಿರುವ ತಾಣ. ಆದರೆ ಇಲ್ಲಿ ಒಂದು ವಿಶೇಷವಿದೆ. ಅದುವೇ ಸಮತೋಲನದ ಬಂಡೆ. ಇದಕ್ಕೆ “ಕೃಷ್ಣನ ಬೆಣ್ಣೆಯ ಚೆಂಡು’ ಎಂದು ಕರೆಯುತ್ತಾರೆ. ಈ ಬಂಡೆಯು ಸುಮಾರು 1200 ವರ್ಷಗಳ ಇತಿಹಾಸವನ್ನು ಹೊಂದಿದ್ದು ಇಳಿಜಾರಿನ ಕಲ್ಲು ಹಾಸಿಗೆಯ ಮೇಲೆ ಉರುಳದೆ ಚಿಕ್ಕದಾದ ಸ್ಥಳದಲ್ಲಿ ಹಾಗೆ ತನ್ನ ಸಮತೋಲನವನ್ನು ಕಾಯ್ದುಕೊಂಡು ನಿಂತಿರುವುದನ್ನು ನೋಡಿದಾಗ ಅಚ್ಚರಿಯಾಗದೆ ಇರಲಾರದು. ಸುಮಾರು 20 ಅಡಿ ಎತ್ತರ, 5 ಮೀಟರ್‌ ಅಗಲವಿರುವ ಈ ಬಂಡೆಯು 250 ಟನ್‌ ತೂಕವಿದೆಯೆಂದು ಅಂದಾಜಿಸಲಾಗಿದೆ. ಈ ಬಂಡೆ ಕೇವಲ 4 ಅಡಿಗಿಂತ ಕಡಿಮೆ ಜಾಗದಲ್ಲಿ ಇಳಿಜಾರಿನ ಪ್ರದೇಶದಲ್ಲಿ ಭದ್ರವಾಗಿ ನಿಂತಿರುವುದು ಎಲ್ಲರ ಅಚ್ಚರಿಗೆ ಕಾರಣ. 1908ರಲ್ಲಿ ಬ್ರಿಟಿಷ್‌ ಅಧಿಕಾರಿಯೊಬ್ಬರು ಈ ಬಂಡೆಯನ್ನು ಅಲ್ಲಿಂದ ತೆಗೆದುಹಾಕಲು ನಿರ್ಧರಿಸಿ ಸುಮಾರು 7 ಆನೆಗಳನ್ನು ಬಳಸಿ ಈ ಬೃಹತ್‌ ಬಂಡೆಯನ್ನು ಉರುಳಿಸಲು ಪ್ರಯತ್ನ ಪಟ್ಟಿದ್ದರು. ಆದರೆ ಬಂಡೆ ಒಂದು ಇಂಚೂ ಕದಲಲಿಲ್ಲವಂತೆ. ಹಾಗಾಗಿ ತಮ್ಮ ಪ್ರಯತ್ನವನ್ನು ಅಲ್ಲಿಗೇ ನಿಲ್ಲಿಸುತ್ತಾರೆ. ಇತಿಹಾಸದಲ್ಲಿ ಎಷ್ಟೋ ಜನರು ಈ ಬಂಡೆಯನ್ನು ಕದಲಿಸಲು ತಮ್ಮ ಶಕ್ತಿ ಮೀರಿ ಪ್ರಯತ್ನಿಸಿದ್ದಾರೆ, ಆದರೆ ಆಗಿಲ್ಲ. ಈ ಬಂಡೆಯು ಪ್ರವಾಸಿಗರ ಮೆಚ್ಚಿನ ತಾಣಗಳಲ್ಲಿ ಒಂದಾಗಿದೆ.

ಪುರುಷೋತ್ತಮ್‌

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.