ಕಣ್‌ ತೆರೆದು ನೋಡಿ


Team Udayavani, Mar 7, 2019, 12:30 AM IST

s-3.jpg

ಭೂಮಿ ಮೇಲಿನ ಜೀವಜಾಲದಲ್ಲಿ ನಮಗೆ ಗೊತ್ತಿಲ್ಲದ ಸಂಗತಿಗಳು ಹಲವಾರು! ಅಷ್ಟೇ ಯಾಕೆ… ನಮ್ಮ ಸುತ್ತಮುತ್ತಲೇ ಇರುವ, ನಿತ್ಯವೂ ಕಣ್ಣಿಗೆ ಕಾಣುವ ಜೀವಿಗಳು, ಹುಳ ಹುಪ್ಪಟೆಗಳನ್ನೇ ನಾವು ಸರಿಯಾಗಿ ತಿಳಿದುಕೊಂಡಿರುವುದಿಲ್ಲ. ಅಂಥ ಸೋಜಿಗದ ಜಗತ್ತಿನೊಳಗೊಂದು ಸುತ್ತು…

ಭಗ್ನಪ್ರೇಮಿ ಸೀಗಡಿ ತಲೆ ಕೆರೆದುಕೊಳ್ಳುವುದೇಕೆ?
ಹೃದಯ ಮತ್ತು ತಲೆ ಎರಡಕ್ಕೂ ನಾವು ಬಹಳ ಪ್ರಾಮುಖ್ಯತೆಯನ್ನು ಕೊಟ್ಟಿದ್ದೇವೆ. ಇದು ಇಂದು ನೆನ್ನೆಯಿಂದಲ್ಲ, ಪುರಾಣ ಕಾಲದಿಂದಲೂ ಇದು ಮುಂದುವರಿದಿದೆ. ಹೃದಯಕ್ಕೆ ಅಂತಃಕರಣದ ಲೇಬಲ್‌ಅನ್ನು ಹಚ್ಚಿಬಿಟ್ಟಿದ್ದೇವೆ. ತಲೆಗೆ ಬುದ್ಧಿವಂತಿಕೆಯ ಲೇಬಲ್‌ ಹಚ್ಚಿಬಿಟ್ಟಿದ್ದೇವೆ. ಇದೇ ಕಾರಣಕ್ಕೆ ಶಾಲೆಗಳಲ್ಲಿ ಟೀಚರ್‌ ಬೈಯುವಾಗ “ಲೆಕ್ಕ ಮಾಡೋವಾಗ ತಲೆ ಎಲ್ಲಿ ಬಿಟ್ಟಿದ್ದೆ?’ ಅನ್ನೋದು. ಮನುಷ್ಯನ ಸಮಸ್ಯೆಗಳ ಮೂಲ ಇರೋದೇ ಅಲ್ಲಿ. ತಲೆ ಓಡಿಸುವ ಸಮಯದಲ್ಲಿ ಹೃದಯದಿಂದ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದೇ ನಮ್ಮ ಬಹುತೇಕ ಸಮಸ್ಯೆಗಳಿಗೆ ಕಾರಣ. ಇದನ್ನು ಪದಗಳಲ್ಲಿ ವಿವರಿಸುವುದು ಸ್ವಲ್ಪ ಕಷ್ಟವೆ. ಅನುಭವ ಮಾತ್ರದಿಂದ ತಿಳಿದುಕೊಳ್ಳಬಹುದಷ್ಟೆ. ಅಂದಹಾಗೆ ತಲೆ ಮತ್ತು ಹೃದಯಗಳ ವಿಚಾರ ಬಂದಿದ್ದರ ಹಿಂದೆ ಒಂದು ಕಾರಣವಿದೆ. ಸಮುದ್ರದಲ್ಲಿ ವಾಸಿಸುವ ಸೀಗಡಿ ಗೊತ್ತಲ್ಲ. ಒಂದು ವೇಳೆ ಅವು ಭಗ್ನಪ್ರೇಮಿಗಳಾದರೆ ಹೃದಯವನ್ನು ಪರ ಪರ ಕೆರೆದುಕೊಳ್ಳುವುದಿಲ್ಲ, ತಲೆಯನ್ನು ಪರ ಪರ ಕೆರೆದುಕೊಳ್ಳುತ್ತದೆ. ಏಕೆಂದರೆ ಸೀಗಡಿಗಳ ಹೃದಯ ಅದರ ತಲೆಯಲ್ಲಿದೆ. ಹೀಗಾಗಿ ಸೀಗಡಿ ಯಾವತ್ತಾದರೂ ಪ್ರೀತಿಯಲ್ಲಿ ಬಿದ್ದರೆ, ತನ್ನ ಪ್ರೀತಿಯ ಆಳವನ್ನು ತೋರಿಸಲು ಹೃದಯ ಬಿಚ್ಚಿ ತೋರಿಸಬೇಕಿಲ್ಲ. ತಲೆ ತೋರಿಸಿದರೆ ಸಾಕಾಗುತ್ತದೆ. ಅಲ್ಲದೆ ತಲೆ ಮತ್ತು ಹೃದಯ ಎರಡೂ ಅಕ್ಕಪಕ್ಕದಲ್ಲೇ ಇರುವುದರಿಂದ ಅವೆರಡರ ನಡುವಿನ ಸಂವಹನವೂ ಸುಲಭವಾಗುವುದೇನೋ, ಆಗ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗಬಹುದೇನೋ ಎಂಬುದು ನಮ್ಮ ಊಹೆಯಷ್ಟೆ. 

ಹಸು ಎಷ್ಟು ಗ್ಲಾಸ್‌ ಹಾಲು ಕೊಡುತ್ತೆ?
ದಿನಕ್ಕೆ ನೀವೆಷ್ಟು ಗ್ಲಾಸು ಹಾಲು ಕುಡಿಯುತ್ತೀರಿ? ಒಂದೆರಡು ಗ್ಲಾಸುಗಳಷ್ಟೆ ಅಲ್ಲವೇ? ಹಾಲು ಹಸುವಿನಿಂದ ಸಿಗುತ್ತದೆ ಎನ್ನುವ ಸಂಗತಿ ನಿಮಗೆಲ್ಲರಿಗೂ ಗೊತ್ತೇ ಇರುತ್ತದೆ. ನಗರ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳಾದರೆ  ಹಾಲು ಪ್ಯಾಕೆಟ್‌ನಿಂದ ಸಿಗುತ್ತದೆ ಎಂದು ಉತ್ತರಿಸಬಹುದೇನೋ. ಅದರಲ್ಲಿ ಅವರದೇನೂ ತಪ್ಪಿಲ್ಲ ಬಿಡಿ. ದಿನಬೆಳಗಾದರೆ ಮನೆ ಮುಂದೆಯೇ ಹಾಲು ಕರೆಯುವುದನ್ನು ನೋಡುವ ಗ್ರಾಮೀಣ ಮಕ್ಕಳ ಸೌಭಾಗ್ಯ ಅವರಿಗಿರುವುದಿಲ್ಲವಲ್ಲ. ಇರಲಿ, ಹೋಟೆಲ್‌ ಅಥವಾ ಮನೆಯಲ್ಲಾದರೆ ನೀವೆಷ್ಟು ಗ್ಲಾಸ್‌ ಹಾಲು ಕೇಳುತ್ತೀರೋ ಅಷ್ಟು ಗ್ಲಾಸ್‌ ಹಾಲನ್ನು ತಂದು ನಿಮ್ಮ ಮುಂದಿಡುತ್ತಾರೆ. ಹಸು ತನ್ನ ಜೀವಮಾನದಲ್ಲಿ ಎಷ್ಟು ಗ್ಲಾಸ್‌ ಹಾಲನ್ನು ನೀಡುತ್ತದೆ ಎಂದು ಯೋಚಿಸಿದ್ದೀರಾ? ಈ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ. ಸುಮಾರು 2 ಲಕ್ಷ ಗ್ಲಾಸ್‌ಗಳು!

ಹರ್ಷವರ್ಧನ್‌ ಸುಳ್ಯ

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.