ಬರಿ  ಮನೆಯಲ್ಲ ಮುಚ್ಚಳದ ಮನೆ!


Team Udayavani, Aug 2, 2018, 11:50 AM IST

bari-maneyalla.jpg

ಮನೆ ಎಂದರೆ ಸಿಮೆಂಟು, ಕಲ್ಲು, ಮಣ್ಣು  ಇಟ್ಟಿಗೆಗಳಿಂದ ಮಾಡಿರಲೇಬೇಕೆಂಬ ನಿಯಮ ಎಲ್ಲೂ ಇಲ್ಲ. ಮನೆ ಎಂದರೆ ಗೋಡೆ, ಕಾಂಪೌಂಡುಗಳಿಗೆ ಸುಣ್ಣ ಬಣ್ಣ ಬಳಿದಿರಬೇಕೆಂದೂ ಇಲ್ಲ. ಅದಕ್ಕೆ ಉದಾಹರಣೆ ಈ ಮುಚ್ಚಳದ ಮನೆ. ಅರ್ಥಾತ್‌ ಬಾಟಲಿ ಮುಚ್ಚಳಗಳಿಂದ ತಯಾರಾದ ಮನೆ!

ಈ ಪುಟ್ಟ ಮನೆಯ ಗೋಡೆಗಳಿಗೆ ಸುಣ್ಣ, ಬಣ್ಣ ಬಳಿದಿಲ್ಲ. ಮೊಸಾಯಿಕ್‌ ಹೆಂಚುಗಳನ್ನು ಜೋಡಿಸಿಲ್ಲ. ಆದರೂ ಈ ಮನೆ, ಮನ ಸೆಳೆಯುವ ಬಣ್ಣಗಳಿಂದ ಆಕರ್ಷಕವಾಗಿದೆ. ನೇಯ್ಗೆಯ ಕೌಶಲ ಬಳಸಿರುವ ಚಿತ್ರಗಳೂ ಇವೆ.

ಅಚ್ಚರಿಯ ವಿಷಯವೆಂದರೆ ಈ ಕಲೆ ಸೃಷ್ಟಿಯಾಗಿರುವುದು ಸೋಡಾ, ನೀರು ಮತ್ತು ಕಿತ್ತಳೆಯ ಜ್ಯೂಸ್‌ ತುಂಬಿಡುವ ಬಾಟಲಿಗಳ ನಿರುಪಯುಕ್ತ ಮುಚ್ಚಳಗಳಿಂದ. ನಾವೆಲ್ಲಾ ಬಳಸಿ ಬಿಸಾಡುವ ಮುಚ್ಚಳಗಳಿಂದ ಈ ಕಲೆ ಸೃಷ್ಟಿಯಾಗಿದ್ದು, ಒಟ್ಟು ಮೂವತ್ತು ಸಾವಿರ ಮುಚ್ಚಳಗಳ ಬಳಕೆಯಾಗಿದೆ.

ಎಲ್ಲಿದೆ ಮುಚ್ಚಳದ ಮನೆ?: ಇಂಥ ಚಂದದ ಮನೆ ಇರುವುದು ರಷ್ಯಾದ ಕಮರ್ಚಾಗಾ ಗ್ರಾಮದಲ್ಲಿ. ಕ್ರಸ್ನೋಯಾರ್ಕ್‌ ನಗರದಿಂದ ಆಗ್ನೇಯಕ್ಕೆ ಎಂಬತ್ತು ಕಿಲೊಮೀಟರ್‌ ದೂರದಲ್ಲಿರುವ ಈ ಗ್ರಾಮದಲ್ಲಿ ಜನಸಂಖ್ಯೆ ಬಹು ವಿರಳವಾಗಿದೆ. ಚದರ ಕಿಲೋಮೀಟರ್‌ಗೆ ಮೂರು ಜನರಿದ್ದಾರೆ. ಇಂಥ ಊರಿನಲ್ಲಿ ಅಪರೂಪದ ಮನೆಯೊಂದನ್ನು ಸೃಷ್ಟಿಸಿರುವುದು ಓಲ್ಗಾ ಕೋಸ್ಟಿನಾ ಎಂಬ ಮಹಿಳೆ. 

ಉದ್ಯೋಗದಿಂದ ನಿವೃತ್ತರಾಗಿರುವ ಓಲ್ಗಾ, ಒಮ್ಮೆ ಸಮೀಪದ ಟೈಗಾದ ಕಾಡುಪ್ರದೇಶಕ್ಕೆ ಹೋಗಿದ್ದರು. ಅಲ್ಲಿ ವಿಹಾರಕ್ಕೆ ಬರುವ ಪ್ರವಾಸಿಗರು ಎಸೆದುಹೋದ ಸಾವಿರಾರು ಪ್ಲಾಸ್ಟಿಕ್‌ ಬಾಟಲಿಗಳತ್ತ ಅವರ ಲಕ್ಷÂ ಹರಿಯಿತು. ಪರಿಸರವನ್ನು ಕೆಡಿಸುವ ಈ ಬಾಟಲಿಗಳ ರಾಶಿಯನ್ನು ಕಂಡು ದುಃಖವೂ ಆಯಿತು. ಅವುಗಳನ್ನು ಬಳಸಿಕೊಂಡು ಏನಾದರೂ ಮಾಡಬೇಕು ಎಂದವರು ಯೋಚಿಸಿದರು.

ಕಸದಿಂದ ರಸ: ಓಲ್ಗಾ ಈ ಮುಚ್ಚಳಗಳನ್ನು ಸಂಗ್ರಹಿಸಲೆಂದೇ ಕಾಡಿನಲ್ಲಿ ಹಲವು ತಿಂಗಳು ತಿರುಗಾಟ ನಡೆಸಿದರು. ಮೂವತ್ತು ಸಾವಿರ ವರ್ಣರಂಜಿತ ಮುಚ್ಚಳಗಳು ಸಂಗ್ರಹವಾದಾಗ, ಇದರಿಂದ ಏನು ಮಾಡಬಹುದೆಂದು ಯೋಚಿಸಿದರು.

ಈ ಮುಚ್ಚಳಗಳನ್ನು ಬಳಸಿ, ತನ್ನ ಚಿಕ್ಕ ಮನೆಯ ಗೋಡೆಗಳನ್ನು ಕಲಾತ್ಮಕಗೊಳಿಸುವ ಯೋಚನೆ ಮೂಡಿತು. ಮರದಿಂದ ನಿರ್ಮಾಣವಾದ ಅವರ ಸರಳವಾದ ಮನೆಗೆ ಈ ಕಲಾತ್ಮಕ ವಿನ್ಯಾಸ ಅಚ್ಚಳಿಯದ ಶೋಭೆ ತಂದಿದೆ. ಸಾಂಪ್ರದಾಯಿಕ ಶೈಲಿಯ ಚಿತ್ರಗಳಿರುವ ಈ ಮನೆಯ ಗೋಡೆ ಇಂದು ಪ್ರವಾಸಿಗರ ದಂಡನ್ನು ಆಕರ್ಷಿಸುತ್ತಿದೆ. 

* ಪ.ರಾಮಕೃಷ್ಣ ಶಾಸ್ತ್ರಿ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.