ಮಾಂಸಭಕ್ಷಕ ಸಸ್ಯಗಳು!


Team Udayavani, Aug 9, 2018, 6:00 AM IST

5.jpg

ಸಸ್ಯಗಳೇ ಮಾಂಸಾಹಾರಿಗಳಾದರೆ, ಅದನ್ನು ಸೇವಿಸುವ ಮನುಷ್ಯರನ್ನು ಸಸ್ಯಾಹಾರಿಗಳೆಂದು ಕರೆಯಬೇಕೋ, ಮಾಂಸಾಹಾರಿಗಳೆಂದು ಕರೆಯಬೇಕೋ? 

ನಮ್ಮಲ್ಲಿ ಸಸ್ಯಾಹಾರಿ ಮತ್ತು ಮಾಂಸಾಹಾರಿ ಎಂಬ ವಿಂಗಡನೆಯಿದೆ. ಹೋಟೆಲ್‌, ಸಭೆ ಸಮಾರಂಭಗಳಲ್ಲಿ ಇವೆರಡಕ್ಕೂ ಪ್ರತ್ಯೇಕ ಮೆನು ಅಥವಾ ಕೌಂಟರ್‌ ನೀಡಲಾಗುತ್ತದೆ. ಸಸ್ಯಗಳೇ ಮಾಂಸಾಹಾರಿಗಳಾದರೆ ಅದನ್ನು ಸೇವಿಸುವವರನ್ನು ಸಸ್ಯಾಹಾರಿಗಳೆಂದು ಕರೆಯಬೇಕೋ, ಮಾಂಸಾಹಾರಿಗಳೆಂದು ಕರೆಯಬೇಕೋ? ಈ ಪ್ರಶ್ನೆ ಬರುವುದಕ್ಕೆ ಕಾರಣ ಮಾಂಸಾಹಾರಿ ಸಸ್ಯಗಳು ನಿಜಕ್ಕೂ ಇರುವುದು. ಈ ಸಸ್ಯಗಳನ್ನು ಸದ್ಯದ ಮಟ್ಟಿಗೆ ಮನುಷ್ಯರು ಸೇವಿಸುವುದಿಲ್ಲವಾದ ಕಾರಣ ಮೇಲಿನ ಪ್ರಶ್ನೆಗೆ ಉತ್ತರಿಸುವ ಗೋಜಿಗೆ ಹೋಗಬೇಕಿಲ್ಲ.

ಇಬ್ಬನಿ ಗಿಡ (ಡ್ರಾಸೆರ)
ಇಬ್ಬನಿ ಗಿಡದ ಎಲೆಗಳ ಸುತ್ತಲೂ ತಂತಿಯಂಥ ಎಳೆಗಳು ಚಾಚಿಕೊಂಡಿದ್ದು, ಎಳೆಗಳ ತುದಿಯಲ್ಲಿ ದ್ರವರೂಪದ ಅಂಟು ಹನಿಯಿರುತ್ತದೆ. ಈ ಎಲೆಗಳು ಬಿಸಿಲಿನಲ್ಲಿ ಬಲುಸುಂದರವಾಗಿ ಹೊಳೆಯುತ್ತಿರುತ್ತವೆ. ಇಬ್ಬನಿಯ ಹನಿಯಂತೆ ಕಾಣುವ ಈ ಅಂಟನ್ನು ಮಕರಂದವೆಂದು ಭ್ರಮಿಸಿ ಕೀಟಗಳು ಕುಳಿತಾಗ ಅಂಟಿಕೊಳ್ಳುತ್ತವೆ. ಕೀಟಗಳು ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಅಲ್ಲೇ ಬಂಧಿಯಾಗಿ ಇಬ್ಬನಿ ಗಿಡದ ಆಹಾರವಾಗುತ್ತದೆ.

ಹೂಜಿಗಿಡ
ಇದರ ಎಲೆಗಳು ನೋಡಲು ಕೊಳವೆಯಾಕಾರದ ಉದ್ದ ಕತ್ತಿನ ಮುಚ್ಚಳರುವ ಹೂಜಿಯಂತೆ ಕಾಣುತ್ತವೆ. ಈ ಸಸ್ಯವು ಹೂಜಿಯ ತೆರೆದ ಅಂಚಿನ ಆಸುಪಾಸಿನಿಂದ ಆಕರ್ಷಕ ದ್ರವ್ಯವನ್ನು ಹೊರಸೂಸುತ್ತದೆ. ಇದಕ್ಕೆ ಆಕರ್ಷಿತರಾಗಿ ಆ ದ್ರವವನ್ನು ಸವಿಯಲು ಬರುವ ಕೀಟಗಳು ಹೂಜಿಯಲ್ಲಿ ಸಿಕ್ಕಿಹಾಕಿಕೊಳ್ಳುತ್ತವೆ. ನಂತರ ಹೂಜಿ ತಂತಾನೇ ಮುಚ್ಚಿಕೊಂಡುಬಿಡುತ್ತದೆ. ಕಪ್ಪೆ ಹಾಗೂ ಹಲ್ಲಿಯನ್ನೂ ಜೀರ್ಣಿಸಿಕೊಳ್ಳುವ ಹೂಜಿ ಗಿಡಗಳಿವೆ. 

ನೊಣದ ಬೋನು (ವೀನಸ್‌ ಫ್ಲೈಟ್ರಾಪ್‌)
ಇದರ ಎಲೆಗಳು ಇಬ್ಟಾಗಗೊಂಡಂತಿದ್ದು, ಮಡಚಿಕೊಳ್ಳುವಂತಹ ವಿನ್ಯಾಸವನ್ನು ಹೊಂದಿರುತ್ತವೆ. ಪ್ರತಿ ಎಲೆಯ ಅಂಚಿನುದ್ದಕ್ಕೂ ಸೂಕ್ಷ್ಮ ಸಂವೇದಿ ತಂತುಗಳಿದ್ದು. ಕೀಟವೊಂದು ಈ ತಂತನ್ನು ಸ್ಪರ್ಶಿಸಿದಾಗ ಸಸ್ಯದಲ್ಲಿ ವಿದ್ಯುತ್‌ ವಿಸರ್ಜನೆಯಾಗಿ ಕ್ಷಣಾರ್ಧದಲ್ಲಿ ಎಲೆಗಳನ್ನು ಭದ್ರವಾಗಿ ಮಡಚಿಕೊಂಡು ಅದನ್ನು ಜೀರ್ಣಿಸಿಕೊಳ್ಳುತ್ತದೆ.

ಕೀಟಗಳನ್ನೇ ಏಕೆ ಹಿಡಿಯುತ್ತವೆ?
ಈ ಕೀಟಾಹಾರಿ ಸಸ್ಯಗಳು ಹೆಚ್ಚಾಗಿ ಜೌಗು ಪ್ರದೇಶಗಳಲ್ಲಿ ಕಂಡುಬರುತ್ತವೆ. ಆ ಪ್ರದೇಶದ ಮಣ್ಣಿನಲ್ಲಿ ಸಾರಜನಕ ಕಡಿಮೆ ಪ್ರಮಾಣದಲ್ಲಿರುವುದರಿಂದ ಮಾಂಸಾಹಾರಿ ಸಸ್ಯಗಳು ತಮ್ಮ ಪೋಷಣೆಗೆ ಅಗತ್ಯವಾದ ಸಾರಜನಕವನ್ನು ಪಡೆದುಕೊಳ್ಳಲು ಕೀಟಗಳನ್ನು ಭಕ್ಷಿಸುತ್ತವೆ. ದಕ್ಷಿಣ ಅಮೆರಿಕಾ, ಕ್ಯಾಲಿಫೋರ್ನಿಯಾ, ಕೆನಡಾ, ಆಸ್ಟ್ರೇಲಿಯಾಗಳಲ್ಲಿ ಮಾತ್ರ ಬೃಹತ್‌ ಪ್ರಮಾಣದಲ್ಲಿ ಕಂಡುಬರುವ ಈ ಸಸ್ಯಗಳ ಹಲವಾರು ಪ್ರಭೇಧಗಳು ಈಶಾನ್ಯ ಭಾರತದ ರಾಜ್ಯಗಳಲ್ಲೂ ಕಾಣುತ್ತವೆ. ಅಲಂಕಾರಿಕ ಸಸ್ಯಗಳನ್ನು ಬೆಳೆಸಿದಷ್ಟು ಸುಲಭವಾಗಿ ಇವುಗಳನ್ನು ಮನೆಯ ಕೈತೋಟಗಳಲ್ಲಿ ಬೆಳೆಸಲಾಗದು.

ಹರೀಶ್‌

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.