ಬಾಟಲಿಗಳಿಂದ ಬೌದ್ಧ ದೇವಾಲಯ


Team Udayavani, Aug 23, 2018, 6:00 AM IST

s-5.jpg

ಬಾಟಲಿಗಳಿಂದಲೇ ನಿರ್ಮಿಸಿರುವ ಈ ಬೌದ್ಧ ದೇವಾಲಯವನ್ನು ಪರಿಸರ ಸ್ನೇಹಿಯೆಂದು ಕರೆದರೂ ತಪ್ಪಿಲ್ಲ. ದೇವಾಲಯದ ನಿರ್ಮಾಣದ ಸಂದರ್ಭದಲ್ಲಿ ಭಕ್ತರು ಬಾಟಲಿಗಳನ್ನು ದಾನವಾಗಿ ನೀಡಿರುವುದು ವಿಶೇಷ. 

ಬೌದ್ಧ ಧರ್ಮದಲ್ಲಿ ಮದ್ಯಪಾನ ನಿಷಿದ್ಧ. ಅದೇ ಬಾಟಲಿಗಳನ್ನು ಬಳಸಿಕೊಂಡು ಭಿಕ್ಕುಗಳು ಬೌದ್ಧ ದೇವಾಲಯವನ್ನೇ ನಿರ್ಮಿಸಿಕೊಂಡಿದ್ದಾರೆ. ಥಾಯ್‌ಲೆಂಡಿನ ಈಶಾನ್ಯಕ್ಕೆ, ಬ್ಯಾಂಕಾಕಿನಿಂದ ಸುಮಾರು 400 ಮೈಲು ದೂರದ ಸಿಸಾಕೆಟ್‌ ಪ್ರಾಂತದಲ್ಲಿ ಕಾಂಬೋಡಿಯಾ ಗಡಿಯಲ್ಲಿ “ವ್ಯಾಟ್‌ ಪ ಮಹಾಚೇದಿ ಕೇವ್‌’ ಸಂಕೀರ್ಣದಲ್ಲಿ 20 ಕಟ್ಟಡಗಳಿವೆ. ಈ ಕಟ್ಟಡಗಳು ಮತ್ತು ಇದರಲ್ಲಿರುವ ಬೌದ್ಧ ದೇವಾಲಯವು ಬಹಳ ವಿಶಿಷ್ಟವಾದದ್ದು. ಇವುಗಳ ಗೋಡೆ, ಛಾವಣಿ ಎಲ್ಲದರಲ್ಲೂ ಬಾಟಲಿಗಳನ್ನೇ ಇಟ್ಟಿಗೆಯಾಗಿ ಬಳಸಿಕೊಳ್ಳಲಾಗಿದೆ. ಅಷ್ಟೇ ಯಾಕೆ? ನೆಲವನ್ನು ಬಾಟಲಿಗಳ ಮುಚ್ಚಳಗಳಿಂದ ಹಾಸಲಾಗಿದೆ. 

ಒಳಗೇನಿದೆ?
ದೇವಾಲಯದಲ್ಲಿ ಒಂದು ಪ್ರಾರ್ಥನಾ ಮಂದಿರ, ಸ್ನಾನಗೃಹ, ಶೌಚಾಲಯ, ಚಿತಾಗಾರ, ನೀರಿನ ಗೋಪುರ ಮತ್ತು ವಸತಿ ಕೊಠಡಿಗಳಿವೆ. ಶೌಚಾಲಯಕ್ಕೆ ಹಸಿರು ಮತ್ತು ಚಿತಾಗಾರಕ್ಕೆ ಕಂದುವರ್ಣದ ಬಾಟಲಿಗಳು ಬಳಕೆಯಾಗಿವೆ. ಇದರಿಂದಾಗಿ ಬೆಳಕಿನ ಪ್ರತಿಫ‌ಲನಕ್ಕೆ ಅನುಕೂಲವಾಗಿದೆ. ಸುಮಾರು ಹದಿನೈದು ಲಕ್ಷ ಮದ್ಯದ ಬಾಟಲಿಗಳನ್ನು ಬಳಸಲಾಗಿದೆಯಂತೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಬಾಟಲಿಗಳನ್ನು ಸಂಗ್ರಹಿಸಿದ್ದು ಬೌದ್ಧ ಸನ್ಯಾಸಿಗಳೇ. ಇದಕ್ಕಾಗಿ ತಗುಲಿದ ಸಮಯ ಸುಮಾರು ಮೂವತ್ತು ವರ್ಷಗಳು!  

ಬಾಟಲಿಯ ಭಿತ್ತಿಚಿತ್ರಗಳು
1984ರಲ್ಲಿ ಕೆಲಸ ಪ್ರಾರಂಭಗೊಂಡ ದೇವಾಲಯ ನಿರ್ಮಾಣ ಕೆಲಸ ಎರಡು ವರ್ಷಗಳಲ್ಲಿ ಪೂರ್ಣಗೊಂಡಿತು. ನಮ್ಮಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಅಥವಾ ಜೀರ್ಣೋದ್ಧಾರಕ್ಕೆ ಭಕ್ತಾದಿಗಳು ತಮ್ಮ ಕೈಲಾದಷ್ಟು ಧನವನ್ನು ನೀಡುತ್ತಾರೆ. ಈ ಬೌದ್ಧ ದೇವಾಲಯದ ನಿರ್ಮಾಣದ ಸಂದರ್ಭದಲ್ಲಿ ಭಕ್ತರು ಬಾಟಲಿಗಳನ್ನು ದಾನವಾಗಿ ನೀಡಿರುವುದು ವಿಶೇಷ. ಲೋಕಾರ್ಪಣೆಗೊಂಡ ನಂತರ ಈ ಮಂದಿರ ಬಾಟಲಿ ಮಂದಿರ ಎಂದೇ ಪ್ರಖ್ಯಾತವಾಗಿದೆ. ಬೇರೆ ಬೇರೆ ಬಣ್ಣದ ಬಾಟಲಿಗಳನ್ನು ಜೋಡಿಸಿ ರಚಿಸಿದ ಭಿತ್ತಿಚಿತ್ರಗಳನ್ನೂ ಒಳಗೆ ನೋಡಬಹುದು. 

– ಪ. ರಾಮಕೃಷ್ಣ ಶಾಸ್ತ್ರಿ

ಟಾಪ್ ನ್ಯೂಸ್

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.