ನೇರಳೆ ಮರದ ಮಾಲೀಕರು ಯಾರು?


Team Udayavani, Aug 23, 2018, 6:00 AM IST

s-9.jpg

ಬೆಜ್ಜಿಹಳ್ಳಿ ಎಂಬ ಊರಿನಲ್ಲಿ ಕೆಂಚಪ್ಪ ಎನ್ನುವ ಜಿಪುಣನಿದ್ದನು. ಊರಿನಲ್ಲಿ ಅವನಿಗೆ ಮೂರು ಎಕರೆ ಜಮೀನಿತ್ತು. ಜಮೀನಿನ ತುಂಬಾ ತೆಂಗಿನ ಮರಗಳಿದ್ದವು. ಮರಗಳ ಪಕ್ಕದಲ್ಲಿ, ಬದುವಿನ ಮೇಲೆ ಒಂದು ನೇರಳೆ ಮರವೂ ಇತ್ತು. ಹಣ್ಣು ಬಿಡುವ ಕಾಲವಾದ್ದರಿಂದ ಮರದ ತುಂಬೆಲ್ಲಾ ಹಣ್ಣುಗಳು ತುಂಬಿಕೊಂಡಿದ್ದವು. ವರ್ಷಗಳಿಂದ ಆ ಮರಕ್ಕೆ ಅನೇಕ ಪಕ್ಷಿಗಳು ಬರುತ್ತಿದ್ದವು. ಅದರ ಹಣ್ಣುಗಳನ್ನು ತಿಂದು ಖುಷಿಯಾಗಿದ್ದವು. ಅದು ಕೆಂಚಪ್ಪನ ಗಮನಕ್ಕೆ ಬಂತು. ಅವನಿಗೆ ಹಣ್ಣುಗಳನ್ನು ಕಿತ್ತು ಪೇಟೆಯಲ್ಲಿ ಮಾರಿ ಹಣ ಗಳಿಸುವ ಆಸೆಯಾಯಿತು. ಹೇಗಾದರೂ ಮಾಡಿ ತನ್ನ ಮರದ ಹಣ್ಣುಗಳನ್ನು ಪಕ್ಷಿಗಳಿಂದ ರಕ್ಷಿಸಬೇಕೆಂದು ನಿಶ್ಚಯಿಸಿದನು. ಆದ್ದರಿಂದ ದಿನನಿತ್ಯ ಹಣ್ಣು ತಿನ್ನಲು ಬರುತ್ತಿದ್ದ ಪಕ್ಷಿಗಳನ್ನು ಓಡಿಸಲು  ಕಲ್ಲು ತೂರತೊಡಗಿದನು, ಬಲೆಯನ್ನು ಹಾಕಿದನು. ಹೀಗೆ ನಾನಾ ಕಸರತ್ತುಗಳನ್ನು ಮಾಡಿದನು.

ಕೆಂಚಪ್ಪನ ಜಮೀನಿನ ಪಕ್ಕದಲ್ಲಿಯೆ ಒಂದು ಕಾಲುದಾರಿಯಿತ್ತು. ದಿನನಿತ್ಯ ಈ ದಾರಿಯಲ್ಲಿ ಶಾಲಾ ಮಕ್ಕಳು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದರು. ಕೆಂಚಪ್ಪ ದಿನನಿತ್ಯ ಕಿರುಚುತ್ತಾ, ಪಕ್ಷಿಗಳತ್ತ ಕಲ್ಲು ತೂರುತ್ತಿರುವುದನ್ನು  ಶಾಲಾ ಬಾಲಕನೊಬ್ಬ ನೋಡಿದ. ಆ ಹುಡುಗ ಕೆಂಚಪ್ಪನ ಹತ್ತಿರ ಹೋಗಿ “ಆ ಪಕ್ಷಿಗಳಿಗೆ ಕಲ್ಲನ್ನು ಯಾಕೆ ಎಸೆಯುತ್ತಿದ್ದೀರಿ? ಅವುಗಳು ಏನು ತಪ್ಪು ಮಾಡಿವೆ?’ ಎಂದು ಕೇಳಿದ. ಸಿಟ್ಟಿನಿಂದ ಕೆಂಚಪ್ಪ “ಈ ಪಕ್ಷಿಗಳು ನನ್ನ ಹೊಲದಲ್ಲಿರುವ ನೇರಳೆ ಮರದ ಹಣ್ಣುಗಳನ್ನೆಲ್ಲ ತಿನ್ನುತ್ತಿವೆ. ಅವನ್ನು ಮಾರುಕಟ್ಟೆಯಲ್ಲಿ ಮಾರಬೇಕೆಂದಿದ್ದೆ’ ಎಂದನು.

ಕೆಂಚಪ್ಪನ ಉತ್ತರವನ್ನು ಕೇಳಿದ ಬಾಲಕ “ಈ ಮರವನ್ನು ಇಲ್ಲಿ ನೆಟ್ಟಿದ್ದು ಯಾರು?’ ಎಂದು ಪ್ರಶ್ನಿಸಿದನು. ಆಗ ಕೆಂಚಪ್ಪ “ಯಾವುದೋ ಪಕ್ಷಿಯೊಂದು ನೇರಳೆ ಹಣ್ಣನ್ನು ತಿಂದು ಬೀಜವನ್ನು ಉದುರಿಸಿರಬಹುದು’ ಎಂದು ಉತ್ತರಿಸಿದನು.
ಬಾಲಕ “ಹಾಗಾದರೆ ಪಕ್ಷಿಗಳಿಲ್ಲದೇ ಇರುತ್ತಿದ್ದರೆ ನಿನ್ನ ಜಮೀನಿನಲ್ಲಿ ಈ ಮರವೂ ಇರುತ್ತಿರಲಿಲ್ಲ ಎಂದಾಯ್ತು. ಅಂದರೆ, ಈ ಮರ ನಿಜವಾಗಲೂ ಅವುಗಳಿಗೆ ಸೇರಬೇಕಲ್ಲವೆ?’ ಎಂದನು. ಬಾಲಕನ ಜಾಣ್ಮೆಗೆ ಕೆಂಚಪ್ಪ ತಲೆದೂಗಿದ. ಅಷ್ಟು ಹೇಳಿದ ಬಾಲಕ ಶಾಲೆಗೆ ಹೊತ್ತಾಯ್ತು ಎಂದು ಹೇಳಿ ಹೊರಟ. ಕೆಂಚಪ್ಪ ಯೋಚಿಸುತ್ತಾ ಕುಳಿತ. ಅವನಿಗೆ ಬಾಲಕ ಹೇಳಿದ್ದು ಸರಿ ಎನ್ನಿಸಿತು. ಹಿಂದಿನ ವರ್ಷ ಗದ್ದೆಗೆ ದಾಳಿಯಿಟ್ಟಿದ್ದ ಕೀಟಗಳನ್ನು ಪಕ್ಷಿಗಳೇ ತಿಂದು ಬೆಳೆಯನ್ನು ಉಳಿಸಿದ್ದವು. ಹೀಗಾಗಿ ಪಕ್ಷಿಗಳಿಂದಲೇ ತನಗೆ ಪ್ರಯೋಜನವಾಗುತ್ತಿದೆ ಎನ್ನುವುದನ್ನು ಮನಗಂಡ. ಪಕ್ಷಿಗಳನ್ನು ಓಡಿಸುವುದನ್ನು ಬಿಟ್ಟು ತನ್ನ ಪಾಡಿಗೆ ತಾನು ಮನೆಗೆ ಹಿಂದಿರುಗಿದ.

ಸಣ್ಣಮಾರಪ್ಪ, ಚಂಗಾವರ

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.