ನವಿಲಿನ ಪ್ರತ್ಯುಪಕಾರ


Team Udayavani, Aug 30, 2018, 6:00 AM IST

chinnari-11.jpg

ಒಂದು ಊರಿನಲ್ಲಿ ಸುರೇಶ- ಸುಧಾ ಎಂಬ ದಂಪತಿ ಇದ್ದರು. ಅವರಿಗೆ ಒಂದು ಸುಂದರವಾದ ತೋಟವಿತ್ತು. ಅಲ್ಲಿ ಅವರು ಮನೆ ಕಟ್ಟಿಕೊಂಡು ವಾಸವಾಗಿದ್ದರು. ಅವರಿಗೆ ಒಂದು ಮುದ್ದಾದ ಹೆಣ್ಣು ಮಗುವಿತ್ತು. ಅವಳ ಹೆಸರು ಸವಿತಾ. ಸುರೇಶ – ಸುಧಾ ದಂಪತಿ ತಮ್ಮ ಮನೆಯಲ್ಲಿ ನಾಯಿ, ಬೆಕ್ಕು, ಕುರಿ, ಕೋಳಿ, ಆಕಳು, ಎಮ್ಮೆ ಇನ್ನಿತರೆ ಸಾಕುಪ್ರಾಣಿಗಳನ್ನು ಸಾಕಿದ್ದರು. ಸವಿತಾಳಿಗೆ ಪ್ರಾಣಿ- ಪಕ್ಷಿಗಳನ್ನು ಕಂಡರೆ ತುಂಬಾ ಪ್ರೀತಿ. ಅವಳು ಅವುಗಳೊಂದಿಗೆ ಪ್ರೀತಿಯಿಂದ ಆಟವಾಡುತ್ತಿದ್ದಳು.

ಒಂದು ದಿನ ಸವಿತಾ ಪುಟ್ಟಿ ಶಾಲೆಯಿಂದ ಮರಳುವಾಗ ದಾರಿಯಲ್ಲಿ ನವಿಲೊಂದನ್ನು ಕಂಡಳು. ಅದು ಬೇಟೆಗಾರನಿಂದ ತಪ್ಪಿಸಿಕೊಂಡು ನಡುಗುತ್ತಾ ರಸ್ತೆಯ ಪಕ್ಕದಲ್ಲಿ ನಿಂತಿತ್ತು. ಮೈಮೇಲೆ ಗಾಯಗಳಾಗಿದ್ದವು. ಸವಿತಾಳಿಗೆ ಅದರ ಮೇಲೆ ಕರುಣೆ ಬಂದು ಅದನ್ನು ಹಿಡಿದುಕೊಂಡು ಮನೆಗೆ ತಂದಳು. ಸವಿತಾಳ ಅಮ್ಮ ಸುಧಾ ಅದನ್ನು ನೋಡಿ ಒಳ್ಳೆಯ ಕೆಲಸ ಮಾಡಿದೆ ಎಂದು ಬೆನ್ನು ತಟ್ಟಿದಳು. 

ಅಮ್ಮ ಔಷಧಿ ಸಸ್ಯವೊಂದನ್ನು ತಂದು, ಕುಟ್ಟಿ ಅದರ ರಸವನ್ನು ನವಿಲಿನ ಗಾಯಕ್ಕೆ ಸವರಿದರು. ಸವಿತಾ ಪುಟ್ಟಿ ಸಾಯಂಕಾಲ ಅದಕ್ಕೆ ತಿನ್ನಲು ತುಪ್ಪದ ಅನ್ನವನ್ನು ಕೊಟ್ಟಳು. ಅದನ್ನು ತಿಂದ ನವಿಲು ಆ ರಾತ್ರಿ ವಿಶ್ರಾಂತಿ ಪಡೆಯಿತು. ಒಂದೆರಡು ದಿನಗಳು ಕಾಲ ಅವರ ಮನೆಯಲ್ಲಿ ಇದ್ದು ಶುಶ್ರೂಷೆ ಪಡೆದ ನಂತರ ನವಿಲು ಚೇತರಿಸಿಕೊಂಡಿತು. ನಂತರ ಸವಿತಾ ಪುಟ್ಟಿ ಅದನ್ನು ಎತ್ತಿಕೊಂಡು ಹೋಗಿ ಕಾಡಿನಲ್ಲಿ ಬಿಟ್ಟು ಬಂದಳು. ನವಿಲು ಬಹಳ ಹೊತ್ತು ಪ್ರೀತಿಯಿಂದ ಪುಟ್ಟಿಯನ್ನೇ ನೋಡುತ್ತಿತ್ತು.

ಇದಾದ ಕೆಲ ದಿನಗಳ ನಂತರ ಎಂದಿನಂತೆ ಶಾಲೆಗೆ ಹೋಗುತ್ತಿರುವಾಗ ಸವಿತಾ ಪುಟ್ಟಿ ಹಾವೊಂದನ್ನು ತುಳಿದುಬಿಟ್ಟಳು. ಹಾವು ಪುಟ್ಟಿಯನ್ನು ಅಟ್ಟಿಸಿಕೊಂಡು ಬರುತ್ತಿದ್ದಂತೆ ಅವಳು ಓಡತೊಡಗಿದಳು. ಇನ್ನೇನು ಹಾವು ಪುಟ್ಟಿಯ ಬಳಿ ಬಂದೇ ಬಿಟ್ಟಿತು ಎನ್ನುವಷ್ಟರಲ್ಲಿ ಅದೆಲ್ಲಿಂದಲೋ ನವಿಲು ಹಾರಿಬಂದಿತು. ಸವಿತಾ ಪುಟ್ಟಿಯನ್ನು ಕಚ್ಚಲು ಬರುತ್ತಿದ್ದ ಹಾವನ್ನು ನವಿಲು ಕುಕ್ಕಿ ಕುಕ್ಕಿ ಎತ್ತಿ ದೂರಕೆ ಬಿಸಾಕಿತು. ಸವಿತಾಳ ಉಪಕಾರವನ್ನು ನವಿಲು ತೀರಿಸಿತ್ತು. ಸವಿತಾ ನವಿಲನ್ನು ಅಪ್ಪಿಕೊಂಡು ಮುದ್ದಾಡಿದಳು. 

– ವೆಂಕಿ

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.