ಜಾಣ ಕಳ್ಳನಿಗಿತ್ತು ಜೇನು ತಿನ್ನುವ ಚಪಲ


Team Udayavani, Sep 6, 2018, 6:00 AM IST

2.jpg

ಅವನು ಅಂತಿಂಥ ಕಳ್ಳನಲ್ಲ. ಯಾರ ಕಣ್ಣಿಗೂ ಬೀಳದಂತೆ, ತನ್ನ ಕೆಲಸ ಮುಗಿಸಿಕೊಂಡು, ಪುಳಕ್ಕನೆ ಎಸ್ಕೇಪ್‌ ಆಗುವ ಚೋರ. ಆತ ಇರೋದು ದಕ್ಷಿಣ ಚೀನಾದಲ್ಲಿ. ಅಲ್ಲಿನ ಯುನ್ನಾನ್‌ ಪ್ರಾಂತ್ಯದಲ್ಲಿ ದಿನಪೂರ್ತಿ ದುಡಿದು ದಣಿದ ರೈತ, ಮನೆಗೆ ಹೋಗಿ ಮಲಗುವ ವೇಳೆಯೇ, ಈತ ಬಂದು ರಾತ್ರಿಯಿಡೀ ಕಳ್ಳತನ ಮಾಡ್ತಿದ್ದ. ಅವನು ಕದಿಯುವುದು ರೈತ ಕೂಡಿಟ್ಟ ಹಣವನ್ನೋ, ಅಡಗಿಸಿಟ್ಟ ಚಿನ್ನವನ್ನೋ ಅಲ್ಲ. ಅಲ್ಲಿನ ರೈತರ ಮೂಲಾಧಾರವೇ ಜೇನುಕೃಷಿ. ಆ ರುಚಿ ರುಚಿಯಾದ ತುಪ್ಪವನ್ನು ಕದಿಯಲೆಂದೇ ಬರುತ್ತಿದ್ದ ಈ ಕಳ್ಳ, ಅಪಾರ ನಷ್ಟ ಮಾಡಿಟ್ಟು ಹೋಗ್ತಿದ್ದ.

  ಈ ವಿಚಾರವಾಗಿ ರೈತರು ಪರಸ್ಪರ ಅನುಮಾನಿಸಿಕೊಂಡು, ಜಗಳವಾಡುತ್ತಿದ್ದರಂತೆ. ಕೆಲವರು ಪಕ್ಕದ ಮನೆಯವರ ಜೊತೆ ಫೈಟಿಂಗೂ ಮಾಡಿದ್ದರು. ಒಂದು ದಿನವಂತೂ ಊರಿನವರೆಲ್ಲ ನಿದ್ದೆಬಿಟ್ಟು, ಕಾದು ಕುಳಿತರು. ಹೇಗಾದರೂ ಮಾಡಿ ಅವನನ್ನು ಇವತ್ತು ಹಿಡಿಯಲೇಬೇಕು ಅಂತ. ಆದರೆ, ಅವತ್ತು ಜೇನು ಕಳವಾಯಿತೇ ವಿನಾ ಈ ಕಳ್ಳ ಸಿಕ್ಕಿಬೀಳಲಿಲ್ಲ. ಕೊನೆಗೆ ಈ ಪ್ರಕರಣ ಪೊಲೀಸ್‌ ಠಾಣೆಯ ಮೆಟ್ಟಿಲೇರಿತು. ಹತ್ತಾರು ಪೊಲೀಸರು ಬಂದು, ರಾತ್ರಿಯಿಡೀ ಜಮೀನು ಕಾದರು. ಅವತ್ತೂ ಜೇನು ಸ್ವಾಹವಾಗಿತ್ತು. ಕಳ್ಳ ಮಾತ್ರ ಕೈಗೆ ಸಿಗಲಿಲ್ಲ. 

  ಇದೆಲ್ಲ ನೋಡಿ ನೋಡಿ ಸಾಕಾಗಿ, ಕೊನೆಗೆ ಸರ್ಕಾರವೇ ಜಮೀನಿನ ಸುತ್ತ ಸಿಸಿ ಕ್ಯಾಮೆರಾ ಹಾಕಿತು. ಅದರ ಮರುದಿನ ಎಲ್ಲರಿಗೂ ಅಚ್ಚರಿಯ ಆಘಾತ ಆಯ್ತು. ಯಾಕೆ ಗೊತ್ತಾ? ಹಾಗೆ ಜೇನು ಕದಿಯುತ್ತಿದ್ದವನು, ರೈತರು ಅನುಮಾನಿಸಿದಂತೆ ಯಾವುದೇ ಮನುಷ್ಯ ಆಗಿರಲಿಲ್ಲ. ಒಂದು ಕಪ್ಪು ಆಕೃತಿ! ಹಾಗಾದರೆ, ಭೂತನಾ? ಅಲ್ಲ. ಝೂಮ್‌ ಮಾಡಿ ನೋಡಿದಾಗಲೇ ಗೊತ್ತಾಗಿದ್ದು, ಅದೊಂದು ಕರಡಿ ಅಂತ! ಈ ಚೋರನ ಮೇಲೆ ರೈತರೆಲ್ಲ ಈಗ ಸಿಟ್ಟಾಗಿದ್ದಾರೆ. ಊರಿನ ಸುತ್ತ ಬೆಂಕಿ ಹಾಕಿ, ಮನೆಗೆ ಒಬ್ಬೊಬ್ಬರಂತೆ ಈಗ ಕಾವಲು ನಿಲ್ಲುತ್ತಿದ್ದಾರಂತೆ. ವಾರವಾಯ್ತು. ಈ ಚೋರ, ಮತ್ತೆ ಜೇನಿನ ಆಸೆಗಾಗಿ, ಜಮೀನಿನತ್ತ ಬರಲಿಲ್ಲ!

 ಹುಷಾರು ಮಕ್ಕಳೇ, ಆ ಚೋರ ನಿಮ್ಮನೆ ತೋಟಕ್ಕೂ ಬಂದಾನು!!!

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.