ದೇವರ ವಿರುದ್ಧ ಮುಷ್ಕರ


Team Udayavani, Oct 11, 2018, 6:00 AM IST

q-7.jpg

ಕಾಡಿನಲ್ಲಿ ಮಳೆಯಿಲ್ಲದೆ ಗಿಡಮರಗಳೆಲ್ಲ ಒಣಗಿದ್ದವು. ಹುಲ್ಲುಗಾವಲು ಕೂಡ ಇಲ್ಲವಾಗಿ ಮೊಲಗಳು ಬಳಲಿ ಬೆಂಡಾಗಿದ್ದವು. ಒಂದು ದಿನ ಪೊದೆಯೊಂದರಲ್ಲಿ ಮೊಲಗಳು ಸಭೆ ಸೇರಿದವು. ಹಿರಿಯ ಮೊಲವೊಂದು ಹೇಳಿತು- “ಗೆಳೆಯರೇ, ದೇವರು ನಮ್ಮ ಪಾಲಿಗೆ ಅತ್ಯಂತ ನಿರ್ದಯಿಯಾಗಿದ್ದಾನೆ. ಆಹಾರ ದೊರೆಯುತ್ತಿಲ್ಲ. ನಮ್ಮನ್ನು ಪುಟ್ಟದಾಗಿ ಸೃಷ್ಟಿಸಿರುವುದರಿಂದ ಶತ್ರುಗಳಿಂದ ರಕ್ಷಿಸಿಕೊಳ್ಳಲು ಆಗುತ್ತಿಲ್ಲ. ನಮಗೆಲ್ಲ ಹುಲಿಗಳಂತೆ ಪಂಜ, ಸಾರಂಗಗಳಂತೆ ಕೋಡು, ಆನೆಗಳ ಸೊಂಡಿಲು, ಮೊಸಳೆಗಳ ಬಾಯಿಯಂತೆ ಒಂದೂ ಆಯುಧವನ್ನು ಕೊಡದೇ ಮೋಸ ಮಾಡಿದ್ದಾನೆ. ಹಾಗಾಗಿ ಯಾವುದೇ ಪ್ರಾಣಿ ನಮ್ಮ ಮೇಲೆ ದಾಳಿ ಮಾಡಿದರೂ ಓಡಿ ಹೋಗಿ ತಪ್ಪಿಸಿಕೊಳ್ಳುವುದೇ ನಮ್ಮ ಹಣೆಬರಹವಾಗಿದೆ.’. ಮಿಕ್ಕ ಮೊಲಗಳೆಲ್ಲ ಹೂಂಗುಟ್ಟಿದವು.

ಅಂತಿಮವಾಗಿ ಅವೆಲ್ಲವೂ ದೇವರಿಗೆ ಪಾಠ ಕಲಿಸುವ ಸಲುವಾಗಿ ಮುಷ್ಕರ ಹೂಡಲು ನಿಶ್ಚಯಿಸಿದವು. ಮುದಿಮೊಲ ಎದ್ದು ನಿಂತು “ನನಗೂ ಹಾಗೇ ಅನಿಸಿದೆ. ಈ ಕೋಟಲೆಗಳನ್ನೆಲ್ಲ ಸಹಿಸಿ ಬಾಳಲು ನನ್ನಿಂದ ಸಾಧ್ಯವಿಲ್ಲ. ದೇವರನ್ನೇ ಪರಿಹಾರಕ್ಕಾಗಿ ಕೇಳಿಬಿಡೋಣ’ ಎಂದು ಕೆರೆಯ ಬಳಿ ಹೊರಟಿತು. ಉಳಿದೆಲ್ಲ ಮೊಲಗಳು ಅಹುದಹುದೆಂದು ತಲೆಯಲ್ಲಾಡಿಸುತ್ತಾ ಅದನ್ನು ಹಿಂಬಾಲಿಸಿದವು. 

ಕೆರೆಯ ದಂಡೆಯುದ್ದಕ್ಕೂ ಅನೇಕ ಕಪ್ಪೆಗಳು ಬಿಸಿಲು ಕಾಯಿಸುತ್ತಾ ಮಲಗಿದ್ದವು. ಮೊಲಗಳು ಗುಂಪು ಗುಂಪಾಗಿ ಕೆರೆಯ ಬಳಿ ಬರುತ್ತಿದ್ದಂತೆ ಅವೆಲ್ಲ ಬೆದರಿ ಪಟಪಟನೆ ಕೆರೆಗೆ ಹಾರಿದವು. ಆ ಒಂದು ಕ್ಷಣದಲ್ಲಿ ಮುದಿ ಮೊಲಕ್ಕೆ ಜ್ಞಾನೋದಯವಾಯಿತು. ಮುದಿ ಮೊಲ ತನ್ನವರನ್ನು ತಡೆದು ಹೇಳಿತು- “ನಿಲ್ಲಿ, ಸೋದರ, ಸೋದರಿಯರೇ… ದೇವರು ನಮಗೆ ಮೋಸ ಮಾಡಿಲ್ಲ. ನಮ್ಮನ್ನು ಕಂಡು ಬೆದರಿದ ಕಪ್ಪೆಗಳೆಲ್ಲ ನೀರಿಗೆ ಹಾರಿದವು. ಅಂದರೆ ಅವುಗಳಿಗೆ ನಮ್ಮನ್ನು ಕಂಡರೆ ಹೆದರಿಕೆ. ಅದೇ ಸುಮ್ಮನೆ ತನ್ನ ಪಾಡಿಗೆ ತಾನಿರುವಾಗ ನಾವೇಕೆ ನಿರಾಶಾವಾದಿಗಳಾಗಬೇಕು?’

ಮುದಿ ಮೊಲದ ಮಾತಿಗೆ ತಲೆದೂಗಿದ ಇತರೆ ಮೊಲಗಳೆಲ್ಲ ಸಂತಸದಿಂದ ಶಿಳ್ಳೆ ಹಾಕುತ್ತಾ ತಮ್ಮ ತಮ್ಮ ಪೊದೆಗಳೆಡೆಗೆ ದಾಂಗುಡಿಯಿಟ್ಟವು.

ಸಂಗ್ರಹ: ಕೆ. ಶ್ರೀನಿವಾಸರಾವ್‌

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.