ಗುರಪ್ಪ ಮಾವ ಬಂದ


Team Udayavani, Nov 15, 2018, 6:00 AM IST

q-2.jpg

ಭಟ್ರಳ್ಳಿ ಅನ್ನುವ ಪುಟ್ಟ ಹಳ್ಳಿಯಲ್ಲಿ ಒಂದು ಪುಟ್ಟ ಶಾಲೆ ಇತ್ತು. ಅನಾಥ ಮಕ್ಕಳ ಶಾಲೆ ಅದು. ಪ್ರಕಾಶಪ್ಪ ಅದರ ಮುಖ್ಯೋಪಾಧ್ಯಾಯರಾಗಿದ್ದರು. ಅವರು ಮಕ್ಕಳಿಗೆ ಪಾಠ ಹೇಳಿಕೊಡುವುದರ ಜೊತೆಗೆ ತೋಟದ ಕೆಲಸ, ಅಡುಗೆ ಕೆಲಸ ಎಲ್ಲಾನೂ ಹೇಳ್ಕೊಡ್ತಾ ಇದ್ದರು.

ಅಡುಗೆ ಮಾಡುವ ನಾರಣಪ್ಪ ಮತ್ತು ಲಕ್ಷ್ಮಮ್ಮ ರುಚಿಯಾಗಿ ಅಡುಗೆ ಮಾಡಿ ಮಕ್ಕಳಿಗೆಲ್ಲ ಪ್ರೀತಿಯಿಂದ ಬಡಿಸುತ್ತಿದ್ದರು.
ಮಕ್ಕಳಿಗೆ ತಾವು ಅನಾಥರೆಂಬ ಪ್ರಜ್ಞೆ ಕಾಡದಂತೆ ಮಕ್ಕಳನ್ನು ಬೆಳೆಸುತ್ತಿದ್ದರು. ನಾರಣಪ್ಪ ಮತ್ತು ಲಕ್ಷ್ಮಮ್ಮರಿಗೆ ಮಕ್ಕಳಿಲ್ಲದ ಕಾರಣ ಮಕ್ಕಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುತ್ತಿದ್ದರು. ಅವರ ಊಟ ವಸತಿಯನ್ನು ಸಹ ಪ್ರಕಾಶಪ್ಪನವರೆ ನೋಡಿಕೊಳ್ಳುತ್ತಿದ್ದರು. ಮೊದಮೊದಲು ದೇಣಿಗೆ ಎತ್ತಿ, ಕೈಯಿಂದ ಕಸೂತಿ ಕೆಲಸ ಮಾಡಿಸಿ ಅದರ ಮಾರಾಟದಿಂದ ಮಕ್ಕಳ ಊಟೋಪಚಾರ, ಬಟ್ಟೆ ಎಲ್ಲವನ್ನೂ ನಿಭಾಯಿಸುತ್ತಿದ್ದರು.

ಒಮ್ಮೆ ಒಬ್ಬ ಆಗಂತುಕ ಬಂದು ಪ್ರಕಾಶಪ್ಪನವರ ಹತ್ತಿರ ಸ್ವಾಮಿ ಇಲ್ಲಿ ಹತ್ತಿರದಲ್ಲೆಲ್ಲಾದರೂ ಭೋಜನ ಶಾಲೆ ಇದೆಯೇ ಎಂದು ಕೇಳಿದ. ನಂತರ ಪ್ರಕಾಶಪ್ಪ ಆತನನ್ನು ಕೈಕಾಲು ತೊಳೆದುಕೊಳ್ಳಲು ಹೇಳಿ ನಂತರ ಲಕ್ಷ್ಮಮ್ಮನನ್ನು ಕರೆದು ಊಟ ಕೊಡಿಸಿದರು. ಆಮೇಲೆ ಆಗಂತುಕ ತನ್ನ ಪರಿಚಯ ಹೇಳಿಕೊಂಡ. ಆಗಂತುಕನ ಹೆಸರು ಗುರಪ್ಪ. ಅವನು ಅಲೆಮಾರಿಯಾಗಿದ್ದ. ಕಾಡುಗಳನ್ನು ಸುತ್ತುವುದು, ಬೆಟ್ಟಗುಡ್ಡ ಹತ್ತುವುದು, ಹಳ್ಳಕೊಳ್ಳಗಳಲ್ಲಿಳಿದು ಅದರ ಅಂದಚೆಂದ ನೋಡುವುದು, ಕಷ್ಟದಲ್ಲಿರುವವರಿಗೆ ನೆರವು ನೀಡುವುದು, ಹಳ್ಳಿಗಳಲ್ಲಿ, ಕಾಡುಗಳಲ್ಲಿ ಸಿಕ್ಕಿದ ಕೆಲಸ ಮಾಡಿ ಅವರು ಕೊಟ್ಟಷ್ಟನ್ನು ಪಡೆದು ಹೊಟ್ಟೆ ಹೊರೆದುಕೊಳ್ಳುತ್ತಿದ್ದ.

ಗುರಪ್ಪನ ಪರಿಚಯದಿಂದ ಪ್ರಕಾಶಪ್ಪನಿಗೆ ತುಂಬಾ ಸಂತೋಷವಾಯಿತು. ಅವರು “ನಮ್ಮ ಶಾಲೆಯ ಮಕ್ಕಳಿಗೂ ಸಹ ಪ್ರಕೃತಿಯ ಸೌಂದರ್ಯದ ಅರಿವಾಗಬೇಕು. ಆದರೆ ಇದುವರೆಗೂ ಅಂತಹ ಯಾವುದೇ ಪ್ರಯತ್ನವನ್ನು ನಾನು ಮಾಡಿಲ್ಲ. ನೀನು ಒಪ್ಪಿ ದೊಡ್ಡ ಮನಸ್ಸು ಮಾಡಿದರೆ ನಮ್ಮ ಮಕ್ಕಳಿಗೆ ಅಂತಹ ಸೌಭಾಗ್ಯ ದೊರೆಯುತ್ತದೆ.’ ಎಂದು ಕೇಳಿಕೊಂಡರು. ಗುರಪ್ಪ “ಹಸಿದವನಿಗೆ ಊಟ ಕೊಟ್ಟಿರಿ, ಇರುವುದಕ್ಕೆ ಜಾಗ ಕೊಡುತ್ತೇನೆ ಎನ್ನುತ್ತಿದ್ದೀರ. ಇದಕ್ಕಿಂತ ನನಗಿನ್ನೇನು ಬೇಕು’ ಎಂದು ಸಂತೋಷದಿಂದ ಒಪ್ಪಿದನು. ಪ್ರಕಾಶಪ್ಪನಿಗೆ ಸ್ವರ್ಗವೇ ಕೈಗೆಟುಕಿದಷ್ಟು ಸಂತೋಷವಾಯಿತು. ಅಂದಿನಿಂದ ಗುರಪ್ಪ ಮಕ್ಕಳನ್ನು ಬೆಟ್ಟ ಗುಡ್ಡಗಳಿಗೆ ಕರೆದೊಯ್ದು, ನಿಸರ್ಗವನ್ನು ಪರಿಚಯಿಸಿ, ಹಳ್ಳ ತೊರೆಗಳಲ್ಲೆಲ್ಲಾ ನಡೆಸಿ ಮಕ್ಕಳಿಗೆ ಅಚ್ಚುಮೆಚ್ಚಿನ ಗುರಪ್ಪ ಮಾವನಾದ.

ತುಳಸಿ ವಿಜಯಕುಮಾರಿ

ಟಾಪ್ ನ್ಯೂಸ್

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.