ಸ್ನೇಹ ಪರೀಕ್ಷೆ


Team Udayavani, Feb 14, 2019, 12:30 AM IST

f-5.jpg

ಸುದೀಪ್‌ ಒಂಭತ್ತನೇ ತರಗತಿಯಲ್ಲಿ ಕಲಿಯುತ್ತಿದ್ದ ಹುಡುಗ. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲೂ ಮುಂದಿದ್ದ. ತನಗೆ ಶಿಕ್ಷಕರಿಂದ ಸಿಗುವ ಗೌರವವನ್ನು ಕಂಡು ಅವನಲ್ಲಿ ಅಹಂ ಮನೆ ಮಾಡಿತು. ಗೆಳೆಯರೆಲ್ಲರೂ ತನಗೆ ಗೌರವ ಕೊಡಬೇಕೆಂದು ಅಪೇಕ್ಷಿಸಿದ. ಕಲಿಕೆಯಲ್ಲಿ ಜಾಣರಾದವರು, ಶ್ರೀಮಂತ ಕುಟುಂಬದಿಂದ ಬಂದವರ ಬಳಿ ಮಾತ್ರ ಅವನು ಸ್ನೇಹದಿಂದಿರುತ್ತಿದ್ದ. ಉಳಿದವರನ್ನೆಲ್ಲಾ ತಾತ್ಸಾರದಿಂದ ನೋಡುತ್ತಿದ್ದ. ಅವರೊಂದಿಗೆ ಮಾತನ್ನೂ ಆಡುತ್ತಿರಲಿಲ್ಲ. ತರಗತಿಯಲ್ಲಿ ಸುದೀಪನಿಗೆ ಸುಮಂತನನ್ನು ಕಂಡರೆ ಆಗುತ್ತಿರಲಿಲ್ಲ, ಸುಮಂತ್‌ ಬಡತನದ ಹಿನ್ನೆಲೆಯಿಂದ ಬಂದವನಾಗಿದ್ದನು. ಕಲಿಕೆಯಲ್ಲೂ ಸಾಮಾನ್ಯನಾಗಿದ್ದ. ಆದರೆ ಸುದೀಪನಿಗಿಂತ ಹೆಚ್ಚಿನ  ಗೆಳೆಯರು ಸುಮಂತನಿಗಿದ್ದರು. ಅವನ ಪರೋಪಕಾರಿ ಗುಣ, ಸ್ನೇಹಕ್ಕೆ ಮಾರು ಹೋದ ಅನೇಕರು ಸುಮಂತನ ಗೆಳೆಯರಾಗಿದ್ದರು. 

ಒಂದು ದಿನ ಮಳೆ ಜೋರಾಗಿ ಸುರಿದಿತ್ತು. ಶಾಲೆಯಿಂದ ಸ್ವಲ್ಪ ದೂರದಲ್ಲಿರುವ ಹಳ್ಳ ತುಂಬಿ ಹರಿಯುತ್ತಿತ್ತು. ಸಂಜೆ ಶಾಲೆ ಬಿಟ್ಟಾಗ ಸುದೀಪ್‌ ಹಾಗೂ ಇನ್ನು ಕೆಲವು ಹುಡುಗರು ನೀರು ನೋಡಲು ಹೋದರು. ನೀರು ನೋಡುವ ಉತ್ಸಾಹದಲ್ಲಿ ಮುಂದಕ್ಕೆ ಬಾಗಿದ ಸುದೀಪ್‌ ಆಯತಪ್ಪಿ ನೀರಿಗೆ ಬಿದ್ದು ಬಿಟ್ಟ. ಅವನ ಗೆಳೆಯರು ಭಯದಿಂದ ಓಟಕಿತ್ತರೇ ವಿನಃ ಯಾರೊಬ್ಬರೂ ಆತನನ್ನು ರಕ್ಷಿಸಲು ಮುಂದಾಗಲಿಲ್ಲ. ಅಷ್ಟರಲ್ಲಿ ಯಾರೋ ಒಬ್ಬರು ಓಡಿ ಬಂದು ನೀರಿಗೆ ಧುಮುಕಿದರು. ಸುದೀಪನನ್ನು ಎಳೆದು ದಡಕ್ಕೆ ತಂದರು. ಅದು ಬೇರಾರೂ ಅಲ್ಲ ಸುಮಂತ್‌. ವಿಜ್ಞಾನ ಶಿಕ್ಷಕರು ತರಗತಿಯಲ್ಲಿ ಹೇಳಿಕೊಟ್ಟಿದ್ದ ಪ್ರಥಮ ಚಿಕಿತ್ಸೆ  ಸುಮಂತ್‌ಗೆ ನೆನಪಿತ್ತು. ಅದರ ಸಹಾಯದಿಂದ ಉಸಿರಾಡಲು ಕಷ್ಟ ಪಡುತ್ತಿದ್ದ ಸುದೀಪನಿಗೆ ಕೃತಕ ಉಸಿರಾಟ ನೀಡಿದ. ನಿಧಾನವಾಗಿ ಸುದೀಪ್‌ ಕಣ್ತೆರೆದ. ಅವನ ಕಣ್ಣಿಂದ ಪಶ್ಚಾತ್ತಾಪದ ಹನಿಗಳು ಉರುಳಿದವು. ಸುಮಂತನನ್ನು ಆತ್ಮೀಯತೆಯಿಂದ ಅಪ್ಪಿಕೊಂಡ. ಗೆಳೆತನಕ್ಕೆ ಯಾವ ಸಂಕೋಲೆಗಳೂ ಇರಬಾರದು ಎನ್ನುವುದು ಸುದೀಪನಿಗೆ ಅರ್ಥವಾಗಿತ್ತು.

ಜೆಸ್ಸಿ ಪಿ.ವಿ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.