ಭಾರತರತ್ನ ಪ್ರಶಸ್ತಿಗೆ ಜನರಲ್ ಕಾರಿಯಪ್ಪ ಸೂಕ್ತ ವ್ಯಕ್ತಿ; ರಾವತ್
Team Udayavani, Nov 4, 2017, 12:59 PM IST
ಕೊಡಗು/ವಿರಾಜಪೇಟೆ: ಫೀಲ್ಡ್ ಮಾರ್ಷಲ್ ಜನರಲ್ ಕಾರ್ಯಪ್ಪ ಅವರು ಭಾರತ ರತ್ನಕ್ಕೆ ಅರ್ಹರು. ಆ ನೆಲೆಯಲ್ಲಿ ಕಾರ್ಯಪ್ಪ ಅವರಿಗೆ ಭಾರತ ರತ್ನ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ತಿಳಿಸಿದ್ದಾರೆ.
ಕೊಡಗು ಜಿಲ್ಲೆ ವಿರಾಜಪೇಟೆಯ ಗೋಣಿಕೊಪ್ಪಲಿನಲ್ಲಿ ಜನರಲ್ ಕೆಎಸ್ ತಿಮ್ಮಯ್ಯ ಪ್ರತಿಮೆ ಅನಾವರಣದ ನಂತರ ಸುದ್ದಿಗಾರರ ಜತೆ ಮಾತನಾಡುತ್ತ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮದ ವರದಿ ಹೇಳಿದೆ.
ನಿವೃತ್ತ ಯೋಧರನ್ನು ಪ್ರತಿಯೊಬ್ಬರು ಗೌರವಿಸಬೇಕು. ಯೋಧರಿಗೆ ಗೌರವ ಕೊಡುವುದು ನಮ್ಮ ಕರ್ತವ್ಯ ಎಂದು ರಾವತ್ ಈ ಸಂದರ್ಭದಲ್ಲಿ ಹೇಳಿದರು.
ಸ್ವತಂತ್ರ ಭಾರತದ ಮೊದಲ ಸೇನಾ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ಫೀಲ್ಡ್ ಮಾರ್ಷಲ್ ಜನರಲ್ ಕಾರ್ಯಪ್ಪ ಅವರಿಗೆ ಭಾರತ ರತ್ನ ಕೊಡಬೇಕೆಂಬ ಬೇಡಿಕೆ ಬಹುವರ್ಷಗಳಿಂದ ಕೇಳುತ್ತಾ ಬಂದಿತ್ತು. ಇದೀಗ ದೇಶದ ಪ್ರತಿಷ್ಠಿತ ಪ್ರಶಸ್ತಿಯನ್ನು ಜನರಲ್ ಕಾರ್ಯಪ್ಪ ಅವರಿಗೆ ದೊರೆಯುವಂತೆ ಮಾಡಲು ಶ್ರಮಿಸುವುದಾಗಿ ಬಿಪಿನ್ ರಾವತ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?