ಸಂಪಾಜೆ : ಗುಂಡು ಹಾರಿಸಿಕೊಂಡು ವಕೀಲ ಆತ್ಮಹತ್ಯೆ
Team Udayavani, Dec 17, 2017, 3:16 PM IST
ಮಡಿಕೇರಿ: ಸಂಪಾಜೆಯಲ್ಲಿ ಉದ್ಯಮಿ, ವಕೀಲರೊಬ್ಬರು ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಗೆ ಶರಣಾದ ಘಟನೆ ಶನಿವಾರ ರಾತ್ರಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವಕೀಲ ದೇವಿಚರಣ್ (36) ಆಗಿದ್ದು, ಇವರುಚಿತ್ರ ನಿರ್ಮಾಪಕ, ಸಾಹಿತಿ ಸಂಪಾಜೆಯ ಪಂಚಲಿಂಗೇಶ್ವರ ದೇವಾಲಯದ ಆಡಳಿತಮೊಕ್ತೇಸರ ದೇವಿ ಪ್ರಸಾದ್ ಅವರ ಪುತ್ರ.
ಮನೆಯಲ್ಲಿ ಒಬ್ಬರೇ ಇದ್ದಾಗ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ಏನೆಂದು ಇನ್ನಷ್ಟೇ ತಿಳಿದು ಬರಬೇಕಿದೆ.
ದೇವಿಚರಣ್ ನಿವಾಸ ಸುಳ್ಯದಲ್ಲಿದ್ದು ಪತ್ನಿ ಮತ್ತು ಮಕ್ಕಳಿಬ್ಬರೊಂದಿಗೆ ವಾಸವಾಗಿದ್ದರು. ದೇವಿಪ್ರಸಾದ್ ಅವರು ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು.
ಭಾನುವಾರ ಬೆಳಗ್ಗೆ ಮನೆಕೆಲಸದ ವರು ಬಂದಾಗ ಶವ ಪತ್ತೆಯಾಗಿದೆ.
ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.
Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ
Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ
Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ
ಅತ್ತಿಮಂಗಲ: ಬೈಕ್ನಲ್ಲಿ ಹೋಗುತ್ತಿದ್ದಾಗ ಕಾಡಾನೆ ದಾಳಿ : ಸಹೋದರರು ಪ್ರಾಣಾಪಾಯದಿಂದ ಪಾರು