ಅಣ್ಣ, ಅತ್ತಿಗೆಯನ್ನು ಕೊಂದು ಆತ್ಮಹತ್ಯೆ :ಆಸ್ತಿ ವಿವಾದ ಕಾರಣ


Team Udayavani, Feb 4, 2018, 10:21 AM IST

5-aa.jpg

ಮಡಿಕೇರಿ:  ಆಸ್ತಿ ಕಲಹದ ಹಿನ್ನೆಲೆಯಲ್ಲಿ ಅಣ್ಣ ಮತ್ತು  ಅತ್ತಿಗೆಯನ್ನು ಗುಂಡಿಕ್ಕಿ ಕೊಂದು ವ್ಯಕ್ತಿ ಯೋರ್ವ ಆತ್ಮಹತ್ಯೆ ಮಾಡಿಕೊಂಡ  ಆಘಾತಕಾರಿ ಘಟನೆ ಮೂರ್ನಾಡುವಿನ ಎಂ. ಬಾಡಗ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.

ಮೂರ್ನಾಡು ಎಂ.ಬಾಡಗ ನಿವಾಸಿ, ಪ್ರಸ್ತುತ  ಮೈಸೂರಿನಲ್ಲಿ ವಾಸವಿದ್ದ ಮಾಜಿ ಸೈನಿಕ ಪಳಂಗಿಯಂಡ ಉತ್ತಪ್ಪ (62)ನೇ ಹಂತಕನಾಗಿದ್ದು,  ಪಳಂಗಿಯಂಡ ದೇವಯ್ಯ (66) ಹಾಗೂ ಅವರ ಪತ್ನಿ ಪ್ರೇಮಾ ದೇಚಮ್ಮ (53) ಗುಂಡೇಟಿಗೆ ಬಲಿಯಾದವರು.

ವಿವರ
ಸಹೋದರರಾಗಿದ್ದ ಪಳಂಗಿಯಂಡ ದೇವಯ್ಯ ಮತ್ತು ಉತ್ತಪ್ಪ ನಡುವೆ ಕುಟುಂಬದ ಆಸ್ತಿ ವಿಚಾರಕ್ಕೆ ಸಂಬಂಧಿಸಿ  ಎಂಟು ವರ್ಷಗಳಿಂದ  ವಿವಾದವಿತ್ತು. ಈ  ಕುರಿತು ಸಹೋದರರು ನ್ಯಾಯಾಲಯದ ಮೊರೆ ಹೋಗಿದ್ದರು. ಈ ಹಿಂದೆಯೂ  ಹಲವು ಬಾರಿ ಇವರ ನಡುವೆ ಜಗಳ ನಡೆದಿತ್ತು. ಆಗ  ಕುಟುಂಬಸ್ಥರೇ  ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿದ್ದರು.

ಮೈಸೂರಿನಲ್ಲಿ ನೆಲೆಸಿದ್ದ ಉತ್ತಪ್ಪ ಕಾಫಿ, ಕರಿಮೆಣಸು ಕೊಯ್ಲು ಸಂದರ್ಭ ಮೂರ್ನಾಡಿಗೆ ಆಗಮಿಸಿ ಕೊಯ್ಲು  ಮುಗಿದ ಬಳಿಕ ಮೈಸೂರಿಗೆ ತೆರಳುತ್ತಿದ್ದರು.  

ಕೆಲವು ದಿನಗಳ ಹಿಂದೆ ಉತ್ತಪ್ಪ ಪತ್ನಿಯೊಂದಿಗೆ  ಮೂರ್ನಾಡಿಗೆ ಬಂದು ಕರಿಮೆಣಸು ಕೊಯ್ಲು ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ದೇವಯ್ಯ ಅವರ ಕಾಫಿ ತೋಟದ ಪಕ್ಕದಲ್ಲೇ ಸಹೋದರ ಉತ್ತಪ್ಪ ಅವರ ಕಾಫಿ ತೋಟವಿದ್ದು, ತೋಟಕ್ಕೆ  ಹೋಗುವ  ದಾರಿ ವಿಚಾರಕ್ಕೆ ಇಬ್ಬರ ನಡುವೆ ಮನಸ್ತಾಪವಿತ್ತು.  ಈ  ವಿವಾದದ ಕುರಿತು ದೇವಯ್ಯ ಅವರು ಜನವರಿ ಕೊನೆಯ ವಾರದಲ್ಲಿ  ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. 

ಶನಿವಾರ ಬೆಳಗ್ಗೆ ದೇವಯ್ಯ ಮತ್ತು ಅವರ ಪತ್ನಿ ಪ್ರೇಮಾ ದೇಚಮ್ಮ  ಕಾರ್ಮಿಕರೊಂದಿಗೆ  ಕಾಫಿ ಮತ್ತು ಕರಿಮೆಣಸು ಕೊಯ್ಲು ಮಾಡುತ್ತಿದ್ದುದ್ದನ್ನು ಗಮನಿಸಿದ ಉತ್ತಪ್ಪ  ಸುಮಾರು 9.15 ಗಂಟೆಗೆ ಏಕಾಏಕಿ  ಅವರ ಮೇಲೆ ಡಬ್ಬಲ್‌ ಬ್ಯಾರಲ್‌ ಬಂದೂಕಿನಿಂದ ಗುಂಡು ಹಾರಿಸಿದ್ದಾರೆ. ದೇವಯ್ಯ ಅವರ ಹೊಟ್ಟೆಭಾಗಕ್ಕೆ ಮತ್ತು ಪ್ರೇಮಾ  ಅವರ ಬೆನ್ನಿಗೆ ಗುಂಡು ತಗುಲಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 

ಅಲ್ಲಿಂದ  ಬಂದೂಕಿನೊಂದಿಗೆ ತೆರಳಿದ ಉತ್ತಪ್ಪ ತನ್ನ ಮನೆಯ ಮುಂದಿನ ಕಾಫಿ ತೋಟದಲ್ಲಿ ಸ್ವಯಂ  ಎದೆಯ ಭಾಗಕ್ಕೆ ಗುಂಡು ಹಾರಿಸಿಕೊಂಡರು.  ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ  ಬಿದ್ದಿದ್ದ ಆತನನ್ನು  ತತ್‌ಕ್ಷಣವೇ  ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತಾದರೂ   ಜೀವ ಉಳಿಸಲಾಗಲಿಲ್ಲ.

ಮಡಿಕೇರಿ ಗ್ರಾಮಾಂತರ ಪೊಲೀಸ್‌ ವೃತ್ತ ನಿರೀಕ್ಷಕ ಪ್ರದೀಪ್‌, ಉಪನಿರೀಕ್ಷಕ ಭೋಜಪ್ಪ, ಎಎಸ್‌ಐ ಅಲೆಕ್ಸ್‌ ಮತ್ತು ಸಿಬಂದಿ ಸ್ಥಳಕ್ಕಾಗಮಿಸಿ ಮಹಜರು ನಡೆಸಿದರು. ಕೃತ್ಯಕ್ಕೆ ಬಳಸಿದ ಡಬ್ಬಲ್‌ ಬ್ಯಾರಲ್‌ ಬಂದೂಕು, 3 ಸಿಡಿದ ಕಾಡತೂಸು ಮತ್ತು ಒಂದು ಜೀವಂತ ಕಾಡತೂಸನ್ನು  ವಶಕ್ಕೆ ಪಡೆದಿದ್ದಾರೆ. 

ಮೃತ ದೇವಯ್ಯ -ಪ್ರೇಮಾ ದಂಪತಿ ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.  ಉತ್ತಪ್ಪ ಪತ್ನಿ, ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ. 

ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ  ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು.  

ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಟಾಪ್ ನ್ಯೂಸ್

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.