ಕೂದಲು ಉದುರಿದ್ದಕ್ಕೆ ಆತ್ಮಹತ್ಯೆ
Team Udayavani, Sep 3, 2018, 6:00 AM IST
ಮಡಿಕೇರಿ: ದಕ್ಷಿಣ ಕೊಡಗಿನ ನಿಟ್ಟೂರು ಗ್ರಾಮದಲ್ಲಿ ಹೇರ್ ಸ್ಟ್ರೈಟನಿಂಗ್ ಮಾಡಿಸಿಕೊಂಡ ಬಳಿಕ ಕೂದಲು ಉದುರಿತು ಎಂದು ಮನನೊಂದು ಕಾಲೇಜು ವಿದ್ಯಾರ್ಥಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಿಟ್ಟೂರು ಗಾಂಡಂಗಡ ಪ್ರಭಾ ಹಾಗೂ ಶೈಲಾ ದಂಪತಿ ಪುತ್ರಿ ನೇಹಾ ಗಂಗಮ್ಮ (19) ಆತ್ಯಹತ್ಯೆ ಮಾಡಿಕೊಂಡ ವ ರು. ಮೈಸೂರು ಸೈಂಟ್ ಜೋಸೆಫ್ ಕಾಲೇಜಿನಲ್ಲಿ ಬಿಬಿಎ ಕಲಿಯುತ್ತಿದ್ದ ನೇಹಾ, ಅಲ್ಲಿನ ಗೋಕುಲಂನಲ್ಲಿರುವ ಪಿ.ಜಿ. ಯಲ್ಲಿದ್ದರು. ಇತ್ತೀಚೆಗೆ ಮೈಸೂರಿನ ಬ್ಯೂಟಿ ಸೆಂಟರ್ವೊಂದರಲ್ಲಿ ಹೇರ್ ಸ್ಟ್ರೈಟ ನಿಂಗ್ ಮಾಡಿಸಿಕೊಂಡ ಬಳಿಕ, ಆಕೆಯ ಕೂದಲು ಉದುರಲು ಆರಂಭಿಸಿತು ಎನ್ನಲಾಗಿದೆ. ಇದೇ ಕಾರಣಕ್ಕೆ ನೊಂದು ಕಾಲೇಜಿಗೆ ಹೋಗುವುದಿಲ್ಲ ಎಂದು ಮನೆಯಲ್ಲಿ ಹೇಳಿದ್ದಳು.
ಹೆತ್ತವರು ಆಕೆಯನ್ನು ಸಮಾಧಾನಪಡಿಸಿ, ಕಾಲೇಜಿಗೆ ಹೋಗುವಂತೆ ಮಾಡಿದ್ದರು. ಆದರೆ ಆ.28ರಂದು ಪಿಜಿಯಿಂದ ಕಾಲೇಜಿಗೆಂದು ಹೋಗಿದ್ದ ನೇಹಾ, ಬಳಿಕ ನಾಪತ್ತೆಯಾಗಿದ್ದಳು. ಈ ಸಂಬಂಧ ಪಿ.ಜಿ.ಮಾಲೀಕ ಕಾರ್ಯಪ್ಪ ಪೊಲೀಸರಿಗೆ ದೂರು ನೀಡಿದ್ದರು. ಈ ಮಧ್ಯೆ, ಶನಿವಾರ ಕೆಲವರು ಗಾಳ ಹಾಕಲೆಂದು ಲಕ್ಷ್ಮಣತೀರ್ಥ ನದಿಗೆ ತೆರಳಿದ್ದರು. ಆಗ ನದಿಯಲ್ಲಿ ಮೃತದೇಹವೊಂದು ಪತ್ತೆಯಾಯಿತು. ಅವರು ಆದೇಂಗಡ ಕುಟುಂಬಸ್ಥರಿಗೆ ತಿಳಿಸಿದ್ದು, ಗ್ರಾಮಸ್ಥರು ಸ್ಥಳಕ್ಕೆ ತೆರಳಿ ಮೃತದೇಹವನ್ನು ಹೊರತೆಗೆದು ನೋಡಿದಾಗ ಅದು ಸಂಪೂರ್ಣವಾಗಿ ಊದಿಕೊಂಡು ಗುರುತು ಸಿಗಲಾರದ ಸ್ಥಿತಿಯಲ್ಲಿತ್ತು. ಆದರೆ, ಮೃತದೇಹದ ಬೆರಳಿನಲ್ಲಿದ್ದ ಉಂಗುರ ಹಾಗೂ ಧರಿಸಿದ್ದ ಬಟ್ಟೆಯ ಆಧಾರದಲ್ಲಿ ಅದು ನೇಹಾಳದ್ದು ಎಂದು ಕುಟುಂಬಸ್ಥರು ದೃಢಪಡಿಸಿದರು.
ನೇಹಾ, ಮೈಸೂರಿನಿಂದ ಊರಿಗೆ ಬಂದು ಆ.28ರಂದೇ ನಿಟ್ಟೂರು ಸೇತುವೆಯಿಂದ ಲಕ್ಷ್ಮಣತೀರ್ಥ ನದಿಗೆ ಹಾರಿ ಆತ್ಮಹತ್ಯೆ ಡಿಕೊಂಡಿರಬೇಕೆಂದು ಶಂಕಿಸಲಾಗಿದೆ. ಪೊನ್ನಂಪೇಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನೇಹಾಳ ಹೆತ್ತ ವರು ಆಕೆ ಕೂದಲು ಸ್ಟ್ರೈಟನಿಂಗ್ ಮಾಡಿ ಸಿಕೊಂಡಿರುವ ಮೈಸೂರಿನ ಬ್ಯೂಟಿ ಸೆಂಟರ್ ವಿರುದ್ಧವೂ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…