ನವಜೀವನಕ್ಕೆ ಕಾಲಿಟ್ಟ ರಂಜಿತಾ-ರಂಜಿತ್
Team Udayavani, Sep 13, 2018, 1:04 PM IST
ಮಡಿಕೇರಿ: ಮಹಾಮಳೆಯಿಂದ ಹಾನಿಗೀಡಾದ ಮಕ್ಕಂದೂರು ಗ್ರಾಮದ ರಂಜಿತಾ ಹಾಗೂ ಕೇರಳದ ಕಣ್ಣೂರಿನ ರಂಜಿತ್ ವಿವಾಹ ಸಮಾರಂಭ ವಿವಿಧ ಸಂಘ – ಸಂಸ್ಥೆಗಳ ಸಹಕಾರದೊಂದಿಗೆ ನಡೆಯಿತು. ಪ್ರಕೃತಿ ವಿಕೋಪಕ್ಕೆ ಗ್ರಾಮ ಬಲಿಯಾದ ಕಾರಣ ನಿಗದಿಯಾಗಿದ್ದ ಮದುವೆ ನಡೆಯುತ್ತದೆಯೋ ಇಲ್ಲವೋ ಎನ್ನುವ ಆತಂಕ ಕುಟುಂಬದವರಿಗೆ ಮೂಡಿತ್ತು.
ರಂಜಿತಾ ಕುಟುಂಬ ಭೂ ಕುಸಿತದಿಂದ ಮನೆ ಕಳೆದುಕೊಂಡಿತ್ತು. ಅನಂತರ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿತ್ತು. ಆದರೆ ನೊಂದ ಕುಟುಂಬಕ್ಕೆ ನೆರವಿನ ಮಹಾಪೂರ ಹರಿದುಬರುವುದರೊಂದಿಗೆ ರಂಜಿತಾಳ ವಿವಾಹ ಭಾಗ್ಯ ಗಟ್ಟಿಯಾಯಿತು. ಬುಧವಾರ ಸೇವಾ ಭಾರತಿ ಹಾಗೂ ಲಯನ್ಸ್ ಕ್ಲಬ್ ನೇತೃತ್ವದಲ್ಲಿ ವಿವಾಹ ಸಮಾರಂಭ ನಡೆಯಿತು. ಬೆಳಗ್ಗೆ 10:30 ಗಂಟೆಗೆ ನಗರದ ಶ್ರೀಓಂಕಾರೇಶ್ವರ ದೇವಾಲಯದಲ್ಲಿ ರಂಜಿತಾ ಹಾಗೂ ರಂಜಿತ್ ಹೊಸ ಜೀವನಕ್ಕೆ ಕಾಲಿಟ್ಟರು. ಬ್ರಾಹ್ಮಣರ ಕಲ್ಯಾಣ ಮಂಟಪದಲ್ಲಿ ಆರತಕ್ಷತೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.
Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ
Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ
Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ
ಅತ್ತಿಮಂಗಲ: ಬೈಕ್ನಲ್ಲಿ ಹೋಗುತ್ತಿದ್ದಾಗ ಕಾಡಾನೆ ದಾಳಿ : ಸಹೋದರರು ಪ್ರಾಣಾಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ