ನಮಾಜ್ ವೇಳೆ ಗಣಪತಿ ವಿಸರ್ಜನೆ ಬೇಡ : ಉದ್ವಿಗ್ನ ವಾತಾವರಣ
Team Udayavani, Aug 27, 2017, 3:56 PM IST
ಕೋಲಾರ : ಇಲ್ಲಿ ಭಾನುವಾರ ನಡೆಯುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭಿನ್ನ ಕೋಮುಗಳ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ.
ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಪಟಾಕಿಗಳನ್ನು ಸಿಡಿಸಲಾಗುತ್ತಿತ್ತು. ಮೆರವಣಿಗೆ ಸಾಗುವ ಮಾರ್ಗವಾದ ಕ್ಲಾಕ್ ಟವರ್ ಪ್ರದೇಶದಲ್ಲಿರುವ ಮಸೀದಿ ಬಳಿ ಪಟಾಕಿ ಸಿಡಿಸಬಾರುದು ಎಂಬ ತಕರಾರಿನ ಬಳಿಕ ಮಾತಿನ ಚಕಮಕಿ ಆರಂಭವಾಗಿದೆ.
ನಮಾಜ್ ನಡೆಯುವ ಸಂದರ್ಭ ಪಟಾಕಿ ಸಿಡಿಸಬಾರದು ಮತ್ತು ಮೆರವಣಿಗೆ ಸಾಗಬಾರದು ಎಂದು ಆಕ್ಷೇಪಿಸಲಾಗಿದೆ ಎಂದು ವರದಿಯಾಗಿದೆ.
ಮೆರವಣಿಗೆಯಲ್ಲಿ ತೆರಳುತ್ತಿದ್ದವರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಹೆಚ್ಚುವರಿ ಪೊಲೀಸರನ್ನು ಕರೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ