ಮದ್ಯ ಮಾರಾಟ ಪ್ರಶ್ನಿಸಿದ್ದಕ್ಕೆ ನಾಲ್ವರಿಗೆ ಥಳಿತ


Team Udayavani, Apr 12, 2018, 4:45 PM IST

KOL-1.jpg

ಚಿಂತಾಮಣಿ: ಗ್ರಾಮದಲ್ಲಿ ಮದ್ಯ ಮಾರಬೇಡಿ, ನಮ್ಮ ಪತಿ ಹಾಗೂ ಯುವಕರು ಮದ್ಯದ ದಾಸಕ್ಕೆ ಬಲಿಯಾಗುತ್ತಿದ್ದಾರೆಂದು ಹೇಳಿದ್ದಕ್ಕೆ ಅಂಗಡಿ ಮಾಲಿಕ ಹಾಗೂ ಅವರ ಕುಟುಂಬದವರು ಓರ್ವ ಮಹಿಳೆ ಸೇರಿದಂತೆ ನಾಲ್ವರ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ರಾಮಪುರದಲ್ಲಿ ನಡೆದಿದೆ.

ತಾಲೂಕಿನ ಕಸಬಾ ಹೋಬಳಿ ರಾಮಪುರ ಗ್ರಾಮದಲ್ಲಿ ಹಲವು ವರ್ಷಗಳಿಂದ ನಾರಾಯಣಸ್ವಾಮಿ ಎಂಬುವವರು ತಮ್ಮ ಚಿಲ್ಲರೆ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಗ್ರಾಮದಲ್ಲಿ ಬೋವಿ ಸಮುದಾಯದವರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿದ್ದಾರೆ.
 
ಮದ್ಯ ಮಾರಾಟ ಮುಂದುವರಿಕೆ: ಗ್ರಾಮದಲ್ಲಿ ಕುಡಿತದ ದಾಸರಾಗಿ ಹೆಂಡತಿ ಮಕ್ಕಳನ್ನು ಬೀದಿಗೆ ತಳ್ಳಿದ್ದರಿಂದ ಗ್ರಾಮದ ಕೆಲ ಮಹಿಳೆಯರು ಮದ್ಯ ಮಾರಾಟ ಮಾಡಬೇಡಿ ಎಂದು ಹಲವು ಬಾರಿ ನಾರಾಯಣಸ್ವಾಮಿಗೆ ಮನವಿ ಮಾಡಿದ್ದರು ಎನ್ನಲಾಗಿದೆ. ಆದರೆ, ಮಹಿಳೆಯರ ಮಾತಿಗೆ ಬೆಲೆ ಕೊಡದ ನಾರಾಯಣಸ್ವಾಮಿ ಮದ್ಯ ಮಾರಾಟ ಮುಂದುವರಿಸುತ್ತೇಂದು ಏರುಧ್ವನಿಯಲ್ಲಿ ಹೇಳಿದರು ಎಂದು ತಿಳಿದು ಬಂದಿದೆ. 

ದೂರು ನೀಡುತ್ತೇನೆ ಎಂದಿದ್ದೇ ಕಾರಣ: ಆದರೆ, ಸೋಮವಾರ ರಾತ್ರಿ ಕುಡಿದು ಮನೆಗೆ ಬಂದ ತನ್ನ ಪತಿಯ ಕಾಟ ತಾಳಲಾರದೇ ಗೌತಮಿ ಎಂಬ ಮಹಿಳೆಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ನಾರಾಯಣಸ್ವಾಮಿ ಅಂಗಡಿ ಬಳಿ ಬಂದು ಅಕ್ರಮವಾಗಿ ಮದ್ಯ ಮರಾಟ ಮಾಡಬೇಡಿ, ಇದರಿಂದ ನಮ್ಮ ಸಂಸಾರ ಹಾಳಾಗುತ್ತಿದೆ. ಗ್ರಾಮದಲ್ಲಿ ಅನೇಕರು ಕುಡಿತದ ಚಟಕ್ಕೆ ಒಳಗಾಗಿದ್ದಾರೆ, ತಾವು ಮದ್ಯ ಮಾರಾಟ ಮಾಡುವುದನ್ನು ನಿಲ್ಲಿಸದಿದ್ದರೆ ಪೊಲೀಸರಿಗೆ ದೂರು ನೀಡುತ್ತೇನೆ ಎಂದಿದ್ದೇ ಘಟನೆಗೆ ಪ್ರಮುಖ ಕಾರಣ ಎಂದು ಹೇಳಲಾಗಿದೆ.

ಮಾರಣಾಂತಿಕ ಹಲ್ಲೆ: ಗೌತಮಿ ಹೇಳಿದ ಮಾತಿಗೆ ಕುಪಿತಗೊಂಡ ಅಂಗಡಿ ಮಾಲಿಕ ನಾರಾಯಣಸ್ವಾಮಿ, ಈತನ ಸಹೋದರ ಶ್ರೀನಿವಾಸ್‌, ವೆಂಕಟರವಣ, ಬಾಬು, ಮಮತಾ, ವೆಂಕಟರತ್ನಮ್ಮ, ರಾಮಕ್ಕ ಎಂಬುವವರೊಂದಿಗೆ ಗೌತಮಿ ಮೇಲೆ ಮನಸೋ ಇಚ್ಚೆ ದೊಣ್ಣೆ ಹಾಗೂ ಕಲ್ಲುಗಳಿಂದ ಹೊಡೆದು ಮಾರಣಾಂತಿಕವಾಗಿ ಗಾಯಗೊಳಿಸಿದ್ದಾರೆ. ಇದೇ ವೇಳೆ ಗೌತಮಿ ನೆರವಿಗೆ ಧಾವಿಸಿದ ಭಾವ ವೆಂಕಟರವಣಪ್ಪ, ಭಾವನ ಮಗ ನಿತಿನ್‌, ಮಾವ ಚಿಕ್ಕ ತಿರುಮಲ್ಲಪ್ಪ ಅವರ ಮೇಲೆಯೂ ಮಾರಾಣಾಂತಿಕವಾಗಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.  ಇನ್ನು ವಿಷಯ ತಿಳಿದ ಕೂಡಲೇ ಆಸ್ಪತ್ರೆಗೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಗಾಯಾಳುಗಳಿಂದ ಹೇಳಿಕೆ ಪಡೆದು ಪ್ರಕರಣ ದಾಖಲಿಸಿ ಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. 

ಅಬಕಾರಿ ಇಲಾಖೆ ನಿರ್ಲಕ್ಷ್ಯವೇ ಕಾರಣ: ಮದ್ಯ ಮಾರಾಟ ಮಾಡುವುದನ್ನು ನಿಲ್ಲಿಸದಿದ್ದರೆ ಪೊಲೀಸರಿಗೆ ದೂರು ನೀಡುತ್ತೇನೆ ಎಂದಿದ್ದೇ ಘಟನೆಗೆ ಪ್ರಮುಖ ಕಾರಣ. ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಅಬಕಾರಿ ಇಲಾಖೆಗೆ ಮಾಹಿತಿ ಇದ್ದರೂ ಕಳೆದ 5-6 ವರ್ಷಗಳಿಂದಲೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯವಹಿಸಲಾಗಿದೆ ಎಂದು ಗ್ರಾಮಸ್ಥರು ದೂರಿದರು.  ಕಲ್ಲುಗಳಿಂದ ತಲೆಗೆ ಹೊಡೆದರು ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದ್ದಕ್ಕೆ ಗಲಾಟೆ ಮಾಡಿದ ಅಂಗಡಿ ಮಾಲಿಕ ನಾರಾಯಣಸ್ವಾಮಿ, ಕಣ್ಣಿಗೆ ಮಣ್ಣು ಎರಚಿ ಕಲ್ಲುಗಳಿಂದ ತಲೆಗೆ ಹೊಡೆದರು ಎಂದು ಗಾಯಾಳು ಗೌತಮಿ ತಮ್ಮ ಅಳಲು ತೋಡಿಕೊಂಡರು. ಘಟನೆ ಬಳಿಕ ಸ್ಥಳೀಯರು ಕೂಡಲೇ ಗಾಯಾಳುಗಳನ್ನು ಚಿಂತಾಮಣಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಗೌತಮಿ ಎಂಬ ಮಹಿಳೆಗೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಗೆ ರವಾನಿಸಲಾಗಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.