ಗೋಮಾಳದಲ್ಲಿ ಕಾಮಗಾರಿಗೆ ತಡೆ


Team Udayavani, Jul 19, 2018, 3:31 PM IST

kol-1.jpg

ಬೇತಮಂಗಲ: ಗೋಮಾಳದಲ್ಲಿ ಚೆಕ್‌ ಡ್ಯಾಂ ನಿರ್ಮಾಣ ಮಾಡಲು ಮೀಸಲಿಟ್ಟಿದ್ದ 4 ಎಕರೆ ಜಮೀನನ್ನು ಜಿಪಂ ಮಾಜಿ
ಸದಸ್ಯರೊಬ್ಬರು ವಿಂಗಡಣೆ ಮಾಡುತ್ತಿದ್ದನ್ನು ತಡೆದ ಗ್ರಾಮಸ್ಥರು, ಆ ಜಾಗದಲ್ಲಿ ಗುಡಿಸಲುಗಳನ್ನು ನಿರ್ಮಾಣ ಮಾಡಿಕೊಂಡಿರುವ ಘಟನೆ ಟಿ.ಗೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪಟ್ಟಣದ ಬಳಿಯ ಟಿ.ಗೊಲ್ಲಹಳ್ಳಿ ಗ್ರಾಮದ ಗೋಮಾಳ ಜಮೀನಿನಲ್ಲಿ 4 ದಿನಗಳಿಂದ ವಿವಿಧ ಚಟುವಟಿಕೆಗಳು ಗರಿಗೆದರಿವೆ. ಆದರೂ, ಸಂಬಂಧಪಟ್ಟ ಕಂದಾಯ ಇಲಾಖೆ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸದಿರುವುದು ಚರ್ಚೆಗೆ ಗ್ರಾಸವಾಗಿದೆ.

ಏನಿದು ಪ್ರಕರಣ: ಚೆಕ್‌ ಡ್ಯಾಂ ನಿರ್ಮಿಸಲು ಅನುದಾನ ಬಿಡುಗಡೆ ಮಾಡಿಸಿಕೊಂಡು ಸರ್ಕಾರಿ ಜಮೀನು ಕಬಳಿಸುವ ಉದ್ದೇಶದಿಂದ ಸುಮಾರು 4.20ಎಕರೆ ಜಾಗದಲ್ಲಿ 2 ಎಕರೆಯಷ್ಟು ಜಮೀನನ್ನು ಜೆಸಿಬಿ ಮೂಲಕ ವಿಂಗಡಣೆ ಮಾಡುತ್ತಿದ್ದರು. ನಾಲ್ಕು ದಿನಗಳ ಹಿಂದೆ ವಿಗಂಡಣೆ ಮಾಡಲಾಗುತ್ತಿತ್ತು. 

ಇದನ್ನು ಗಮನಿಸಿದ ಗ್ರಾಮಸ್ಥರು ವಿಂಗಡಣೆ ಮಾಡದಂತೆ ತಡೆದರು. ಆಗ ಜಿಪಂ ಮಾಜಿ ಸದಸ್ಯರು ಗ್ರಾಮಸ್ಥರಿಗೆ ಅನುಕೂಲ ವಾಗಲೆಂದು ಚೆಕ್‌ ಡ್ಯಾಂ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿಸಿಕೊಂಡು ಬಂದಿದ್ದೇನೆ. ನಿಮಗೆ ತೊಂದರೆಯಾಗುತ್ತದೆ ಎಂದಾದರೆ ಬೇಡವೆಂದು ಹೇಳಿದರು.

ಬಿಗುವಿನ ವಾತಾವರಣ ಸೃಷ್ಟಿ: ಅಂದಾಜು 4.20 ಎಕರೆ ಜಾಗದಲ್ಲಿ ಸರ್ಕಾರ ಅರಣ್ಯ ಇಲಾಖೆಯಿಂದ ನೀಲಗಿರಿ ಮರಗಳನ್ನು ನೆಟ್ಟಿತ್ತು. ಇತ್ತೀಚೆಗೆ ಅವುಗಳನ್ನು ಕಟಾವು ಮಾಡಲಾಗಿತ್ತು. ಇದೇ ವೇಳೆಗೆ ಅಲ್ಲಿನ ರೈತರಿಗೆ ಅನುಕೂಲವಾಗುವಂತೆ ಚೆಕ್‌ ಡ್ಯಾಂ ನಿರ್ಮಾಣ ಮಾಡಲು 2 ಎಕರೆಯಷ್ಟು ಜಮೀನನ್ನು ವಿಂಗಡಣೆ ಮಾಡುತ್ತಿರುವುದನ್ನು ಕಂಡ ಗ್ರಾಮಸ್ಥರು ಜಿಸಿಬಿಯನ್ನು ತಡೆದರು. ಇದರಿಂದ, ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.

ಕೈಕಟ್ಟಿ ಕುಳಿತ ಕಂದಾಯ ಅಧಿಕಾರಿಗಳು: ಈ ಸರ್ಕಾರಿ ಗೋಮಾಳದಲ್ಲಿ ಸುಮಾರು 100ಕ್ಕೂ ಹೆಚ್ಚು ಗುಡಿಸಲುಗಳನ್ನು ನಿರ್ಮಿಸಲಾಗಿದೆ. ಸಂಬಂಧಪಟ್ಟ ಕಂದಾಯ ಇಲಾಖೆ ಅಧಿಕಾರಿಗಳು ಕೈಕಟ್ಟಿ ಕೊಂಡು ಕುಳಿತಿರುವುದು ಚರ್ಚೆಗೆ ಗ್ರಾಸವಾಗಿದೆ. 

ಬೇತಮಂಗಲ- ಕೋಲಾರ ಮುಖ್ಯ ರಸ್ತೆಯಲ್ಲೇ ನಡೆಯುತ್ತಿದ್ದ ಈ ಘಟನೆಯನ್ನು ದಾರಿ ಹೋಕರು ನಿಂತು ನೋಡುತ್ತಿದ್ದುದು
ಸಾಮಾನ್ಯವಾಗಿತ್ತು.  

ಗ್ರಾಪಂ ಅಧಿಕಾರಿಗಳ ನಿರ್ಲಕ್ಷ್ಯ ಬೇತಮಂಗಲ ಬಳಿಯ ಟಿ.ಗೊಲ್ಲಹಳ್ಳಿ ಗ್ರಾಮಸ್ಥರು ತಮ್ಮ ನಿವೇಶನದ ಸಮಸ್ಯೆ ಬಗ್ಗೆ ಸಾಕಷ್ಟು ಬಾರಿ ಗ್ರಾಪಂ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಗಮನ ಹರಿಸಿಲ್ಲ. ಸ್ವಂತ ಮನೆಗಳಿಲ್ಲದ ತಾವು ಗುಡಿಸಲು ನಿರ್ಮಿಸಿಕೊಂಡು ಜೀನವ ನಡೆಸುತ್ತಿದ್ದೇವೆ. ಆದ್ದರಿಂದ, ತಮಗೆ ನಿವೇಶನಗಳನ್ನು ಹಂಚಿ ಮನೆಗಳನ್ನು ನಿರ್ಮಾಣ ಮಾಡಿಕೊಳ್ಳಲು ಅನುವು ಮಾಡಬೇಕೆಂದು ಸ್ಥಳಿಯ ಸೂರುರ

ಬಂಗಾರಪೇಟೆ ತಾಲೂಕು ಬೇತಮಂಗಲ ಬಳಿಯ ಟಿ.ಗೊಲ್ಲಹಳ್ಳಿ ಗ್ರಾಮದಲ್ಲಿ ಸರ್ಕಾರಿ ಗೋಮಾಳ ವನ್ನು ಜಿಪಂ ಮಾಜಿ ಸದಸ್ಯರು ಕಬಳಿಸುವ ಪ್ರಯತ್ನ ಮಾಡಿರುವುದು ಮತ್ತು ಗ್ರಾಮಸ್ಥರು ಗುಡಿಸಲು ನಿರ್ಮಿಸಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕೂಡಲೇ ಗ್ರಾಪಂ ಪಿಡಿಒರಿಂದ ಮಾಹಿತಿ ಪಡೆದುಕೊಂಡು ಅಗತ್ಯ ಕ್ರಮ ಜರುಗಿಸುತ್ತೇನೆ.
  ಸುಭಾನ್‌, ತಾಪಂ ಇಒ, ಬಂಗಾರಪೇಟೆ

ಕೆ.ಆರ್‌. ಪುರುಷೋತ್ತಮರೆಡ್ಡಿ

ಟಾಪ್ ನ್ಯೂಸ್

ಅಂಡಾಶಯದ ಕ್ಯಾನ್ಸರ್ ನಿಂದ 30 ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಂಡಾಶಯದ ಕ್ಯಾನ್ಸರ್ ನಿಂದ 30 ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.