ಅನೈತಿಕ ಚಟುವಟಿಕೆ ತಾಣವಾದ ಪ್ರಯಾಣಿಕರ ತಂಗುದಾಣ


Team Udayavani, Jul 20, 2018, 12:29 PM IST

kol-2.jpg

ಮುಳಬಾಗಿಲು: ತಾಲೂಕಿನ ಕೆ.ಬೈಯಪಲ್ಲಿ ಮತ್ತು ತಾಯಲೂರು ಹೋಬಳಿಗಳ ವಿವಿಧ ಗ್ರಾಮಗಳ ಬಳಿ ಹಲವಾರು ವರ್ಷಗಳ ಹಿಂದೆ ನಿರ್ಮಿಸಿರುವ ತಂಗುದಾಣಗಳು ಶಿಥಿಲಗೊಂಡು ಪುಂಡಪೋಕರಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿವೆ ಎಂಬ ಕೂಗು ವ್ಯಾಪಕವಾಗಿ ಕೇಳಿಬರುತ್ತಿದೆ.

ಮುಳಬಾಗಿಲು ಕೇಂದ್ರದಿಂದ ಕೆ.ಬಯ್ಯಪಲ್ಲಿ ಮತ್ತು ತಾಯಲೂರು ರಸ್ತೆಗಳಲ್ಲಿ ಸಾಕಷ್ಟು ಗ್ರಾಮಗಳು ಮುಖ್ಯ ರಸ್ತೆಗೆ ಹೊಂದಿಕೊಂಡಿದ್ದು, ಸರ್ಕಾರ ಹಲವಾರು ವರ್ಷಗಳ ಹಿಂದೆ ಪ್ರತಿಯೊಂದು ಗೇಟ್‌ಗಳಲ್ಲಿ ಪ್ರಯಾಣಿಕರು ಗಾಳಿ, ಮಳೆ, ಬಿಸಿಲಿ ನಿಂದ ಯಾವುದೇ ತೊಂದರೆಗೆ ಈಡಾಗದಿರಲೆಂಬ ಉದ್ದೇಶ ದಿಂದ ತಂಗುದಾಣಗಳನ್ನು ನಿರ್ಮಿಸಿದೆ.

ತಂಗುದಾಣದಲ್ಲಿ ಮದ್ಯದ ಬಾಟಲಿ: ತಾಲೂಕಿನ ನೆರ್ನೆಹಳ್ಳಿ, ಮಿಟ್ಟಹಳ್ಳಿ, ಅಗ್ರಹಾರ, ಶೆಟ್ಟಿಕಲ್ಲು ಗ್ರಾಮಗಳಿಗೆ ಸಂಪರ್ಕಕಲ್ಪಿಸುವ ಗೇಟ್‌ನಲ್ಲಿ ನಿರ್ಮಿಸಲಾಗಿರುವ ತಂಗುದಾಣಗಳು ಶಿಥಿಲಾವಸ್ಥೆ ತಲುಪಿದ್ದು, ತಂಗುದಾಣದಲ್ಲಿ ಗಿಡಗಂಟಿಗಳು ಬೆಳೆದಿವೆ. ಗೋಡೆಗಳಲ್ಲಿನ ಸಿಮೆಂಟ್‌ ಕಿತ್ತು ಬಂದು ಬೀಳುವ ಸ್ಥಿತಿಯನ್ನು ತಲುಪಿದೆ. ಮತ್ತೂಂದು ತಂಗುದಾಣದಲ್ಲಿ ಕೆಲವರು ಮದ್ಯದ ಬಾಟಲಿಗಳ ಚೂರುಗಳನ್ನು ಬಿಸಾಕಿದ್ದಾರೆ. ಇದರಿಂದ ಜನರು ತಂಗುದಾಣದ ಬಳಿ ಹೋಗಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣ ವಾಗಿದೆ.

ಭಯದ ನೆರಳು: ರಾತ್ರಿ ವೇಳೆ ಪುಂಡಪೋಕರಿಗಳು ಇದೇ ತಂಗುದಾಣದಲ್ಲಿ ಕುಳಿತು ಮದ್ಯಪಾನ ಮಾಡಿ ಮದ್ಯದ ಬಾಟಲಿ, ತಿಂಡಿ ತಿನಿಸುಗಳ ಪೊಟ್ಟ ಣಗಳ ಪ್ಲಾಸಿಕ್ಟ್ ಕವರ್‌ಗಳನ್ನು ಬಿಸಾಡಿರುವುದರಿಂದ ದುರ್ವಾಸನೆ ಬೀರುತ್ತಿದೆ. ಕುಳಿತುಕೊಳ್ಳಲು ಹಾಕಲಾದ ಕಲ್ಲಿನ ಚಪ್ಪಡಿಗಳನ್ನು ಮುರಿದು ಹಾಕಿರುವು ದರಿಂದ ಪ್ರಯಾಣಿಕರು, ವಾಹನ ಸವಾರರಿಗೆ ಯಾವುದೇ ರೀತಿಯ ಪ್ರಯೋಜನ ಇಲ್ಲದಂತಾಗಿದೆ.

ಅಲ್ಲದೇ, ಇಲ್ಲಿನ ಮುಖ್ಯ ರಸ್ತೆಯಿಂದ ಗ್ರಾಮಗಳಿಗೆ ಹೋಗಲು ಸುಮಾರು 1 ರಿಂದ 2 ಕಿ.ಮೀ. ದೂರ ಆಗುತ್ತದೆ. ರಾತ್ರಿ ಸಮಯದಲ್ಲಿ ಗೇಟ್‌ ಬಳಿ ವಿದ್ಯುದ್ಧೀಪ ಇಲ್ಲದಿರುವುದರಿಂದ ವಿಷ ಜಂತುಗಳು, ಕಳ್ಳರು ಮತ್ತು ಕಿಡಿಗೇಡಿಗಳ ಕಾಟದಿಂದ ಪ್ರಯಾಣಿಕರು ಒಂಟಿಯಾಗಿ ತಮ್ಮ ಗ್ರಾಮಗಳಿಗೆ ಭಯದಿಂದ ತೆರಳುವಂತಾಗಿದೆ.

ವಿದ್ಯುದ್ದೀಪವಿಲ್ಲದ ತಂಗುದಾಣ: ತಾಯಲೂರು ರಸ್ತೆಯ ಕನ್ನತ್ತ ಗೇಟ್‌ ಬಳಿಯ ಮೇಲಾಗಾಣಿ ಮತ್ತು ಕನ್ನತ್ತ ಗ್ರಾಮಗಳ ಪ್ರಯಾಣಿಕರಿಗಾಗಿ ನಿರ್ಮಿಸಿರುವ ತಂಗುದಾಣ ಸಹ ಶಿಥಿಲಾವ್ಯವಸ್ಥೆ ತಲುಪಿದ್ದು, ಪುಂಡ‌ ಪೋಕರಿಗಳ ಅನೈತಿಕ ಚಟು ವಟಿಕೆ ತಾಣವಾಗಿದೆ. ರಾತ್ರಿ ಸಮಯದಲ್ಲಿ ಗೇಟ್‌ನಲ್ಲಿ ವಿದ್ಯುದ್ದೀಪ ಇಲ್ಲದ ಕಾರಣ ಈ ಗ್ರಾಮಗಳಿಗೆ ತೆರಳಲು ಪ್ರಯಾಣಿಕರು ತೊಂದರೆ ಅನುಭವಿಸಬೇಕಾಗಿದೆ ಎಂದು ಗ್ರಾಮದ ರಮೇಶ್‌ ಅಳಲು ತೋಡಿಕೊಂಡಿದ್ದಾರೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಂಗುದಾಣಗಳನ್ನು ನಿರ್ಮಾಣ ಮಾಡಬೇಕೆಂಬುದು ಸ್ಥಳೀಯರ ಒತ್ತಾಯವಾಗಿದೆ. 

ಮುಳಬಾಗಿಲು ತಾಲೂಕಿನ ವಿವಿಧ ಗ್ರಾಮಗಳ ಬಸ್‌ ನಿಲ್ದಾಣಗಳಲ್ಲಿ ಶಿಥಿಲಾವಸ್ಥೆಯಲ್ಲಿರುವ ತಂಗುದಾಣಗಳ ಕುರಿತು ಲೋಕೋಪಯೋಗಿ ಅಧಿಕಾರಿಗಳಿಂದ ಮಾಹಿತಿ ಪಡೆದು ವಿಶೇಷ ಅನುದಾನದಲ್ಲಿ ಹೊಸ ತಂಗುದಾಣಗಳನ್ನು ನಿರ್ಮಿಸಲಾಗುವುದು. 
 ಹೆಚ್‌.ನಾಗೇಶ್‌, ಶಾಸಕ

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.