ಕೆ.ಸಿ.ವ್ಯಾಲಿ ನೀರಿನ ನೊರೆಗೆ ಕಾರಣ ನೀಡಿ


Team Udayavani, Jul 21, 2018, 3:08 PM IST

kol-1.jpg

ಕೋಲಾರ: ಶುದ್ಧೀಕರಿಸಿ ಬಿಡಬೇಕಾದ ಕೆ.ಸಿ.ವ್ಯಾಲಿ ನೀರಿನಲ್ಲಿ ನೊರೆ ಕಾಣಿಸಿಕೊಳ್ಳಲು ಸ್ಪಷ್ಟ ಕಾರಣದ ಜತೆಗೆ ಸಾರ್ವಜನಿಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಬೇಕೆಂದು ಸಣ್ಣ ನೀರಾವರಿ ಇಲಾಖೆ ಹಾಗೂ ಯೋಜನೆಯ ಕಾಮಗಾರಿ ನಡೆಸಿದ ಮೆಗಾ ಕಂಪನಿ ಅಧಿಕಾರಿಗಳನ್ನು ಪ್ರಭಾರ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್‌ ತರಾಟೆಗೆ ತೆಗೆದುಕೊಂಡರು.

ನಗರದ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಕೆ.ಸಿ.ವ್ಯಾಲಿ ಯೋಜನೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೀವು ನೀರನ್ನು ಎರಡು ಬಾರಿ ಶುದ್ಧೀಕರಿಸಿ ಹರಿಸಿದರೂ ನೊರೆ ಏಕೆ ಕಾಣಿಸಿಕೊಂಡಿದೆ ಎಂಬುದಕ್ಕೆ ಸೂಕ್ತ ಉತ್ತರ ನೀಡಬೇಕೆಂದು ತಾಕೀತು ಮಾಡಿದರು. 

ವೈರಲ್‌: ನೊರೆಯ ವಿಡಿಯೋಗಳು ವೈರಲ್‌ ಆಗಿದ್ದು, ಸುತ್ತಮುತ್ತಲಿನ ಜನ ಆತಂಕಗೊಂಡಿದ್ದಾರೆ. ನೀರನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟು ಪರೀಕ್ಷಿಸಬೇಕು. ಈ ಯೋಜನೆಯಡಿ ಬೆಂಗಳೂರಿನ ತ್ಯಾಜ್ಯ ನೀರನ್ನು ಎರಡು ಬಾರಿ ಶುದ್ಧೀಕರಿಸಿ ಬಿಡಬೇಕೆಂಬ ನಿಯಮವಿದ್ದರೂ, ನೀರಿನಲ್ಲಿ ನೊರೆ ಕಾಣಿಸಿಕೊಂಡಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದರು.

ಈ ಸಂಬಂಧ ಸಾರ್ವಜನಿಕರು, ಸಂಘಟನೆ ಗಳಿಗೆ ಉತ್ತರ ನೀಡಲು ಸಾಧ್ಯವಾಗುತ್ತಿಲ್ಲ. ಬೆಳ್ಳಂದೂರು ಸಮೀಪದ ಎಸ್‌ಟಿಪಿಯಿಂದ ಹರಿಯ ಬಿಡುವ ನೀರಿಗೆ ಕೆರೆ ನೀರು ಮಿಶ್ರಣಗೊಂಡಿ ರುವುದರಿಂದ ಲಕ್ಷ್ಮೀಸಾಗರ ಕೆರೆ ಬಳಿಯೂ ನೊರೆ ಕಾಣಿಸಿಕೊಂಡಿದೆ. ಈಗಾಗಲೇ ಈ ನೀರನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಸಣ್ಣ ನೀರಾವರಿ ಇಲಾಖೆ ಕಾರ್ಯಪಾಲಕ ಅಭಿಯಂತರ ಕೃಷ್ಣಪ್ಪ ಸಮಜಾಯಿಷಿ ನೀಡಿದರು.

ಕೋಡಿ ಬಿದ್ದ ಕೆರೆ ನೀರು ಮಿಶ್ರಣ: ಆರಂಭದಲ್ಲಿ ಒಂದು ಮೋಟಾರ್‌ ಪಂಪ್‌ ಮೂಲಕ 130 ಎಂಎಲ್‌ಡಿ ನೀರು ಹರಿಸಲಾಗುತ್ತಿತ್ತು. ಕಳೆದ ಭಾನುವಾರದಿಂಂದ 2 ಮೋಟಾರ್‌, ಪಂಪ್‌ ಚಾಲನೆ ಮಾಡಿ 70ಎಂಎಲ್‌ಡಿ ನೀರನ್ನು ಹೆಚ್ಚಿಸಲಾಯಿತು. ನೀರಿನ ಹರಿವನ್ನು ಹೆಚ್ಚಿಸಿದ ಸಂದರ್ಭದಲ್ಲಿ ನೀರಿನ ಶುದ್ಧೀಕರಿಸುವ ಎಸ್‌ಟಿಪಿ ಘಟಕಗಳು ಇರುವ ಕಡೆಯೇ ಕೆರೆಯ ಕೋಡಿಯೂ ಇದ್ದು, ಇದರ ಮೂಲಕವೇ ನೀರು ಹರಿದಿರುವುದರಿಂದ ಮಿಶ್ರಣಗೊಂಡಿದೆ ಎಂದು ಮಾಹಿತಿ ನೀಡಿದರು.

ಕೆ.ಸಿ.ವ್ಯಾಲಿ ಯೋಜನೆಯ ಮೂಲಕ ಜಿಲ್ಲೆಗೆ ಒಟ್ಟು 400 ಎಂಎಲ್‌ಡಿ ನೀರು ಲಭ್ಯವಾಗುತ್ತದೆ. ಸದ್ಯಕ್ಕೆ 200 ಎಂಎಲ್‌ಡಿ ಮಾತ್ರ ಹರಿದು ಬರುತ್ತಿದೆ. ಮುಂದಿನ ದಿನಗಳಲ್ಲಿ ಉಳಿದ 200 ಎಂಎಲ್‌ಡಿ ಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಲಕ್ಷ್ಮೀಸಾಗರ, ಜೋಡಿ ಕೃಷ್ಣಾಪುರ, ನರಸಾಪುರ ಕೆರೆಗಳಿಗೆ ನೀರು ಹರಿದಿದೆ ಎಂದು ಸ್ಪಷ್ಟನೆ ನೀಡಿದರು.

ಜನ ಜಿಲ್ಲಾಡಳಿತವನ್ನು ಪ್ರಶ್ನಿಸುತ್ತಾರೆ: ಯೋಜನೆ ಯಾವುದೇ ಇರಲಿ ಅದರ ಕಾಮಗಾರಿಯ ಜವಾಬ್ದಾರಿ ಯಾರೇ ವಹಿಸಿಕೊಂಡಿದ್ದರೂ ಅದರಿಂದ ಅನಾಹುತ ಸಂಭವಿಸಿದರೆ ಜನ ಮೊದಲು ಜಿಲ್ಲಾಡಳಿತವನ್ನು ಪ್ರಶ್ನಿಸುತ್ತಾರೆ. ಹೆಚ್ಚುವರಿಯಾಗಿ ನೀರು ಹರಿಸುವ ಬಗ್ಗೆ ನಮ್ಮ ಗಮನಕ್ಕೆ ಯಾಕೆ ತರಲಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
 
ಕೆ.ಸಿ.ವ್ಯಾಲಿ ನೀರಿನಲ್ಲಿ ನೊರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನೀರಿನ ಗುಣಮಟ್ಟ ಪರಿಶೀಲಿಸಲು ಕಳುಹಿಸಿದ್ದೇವೆ. ಪ್ರತಿ ಹಂತದಲ್ಲಿ ಶುದ್ಧೀಕರಿಸಿದ ನೀರನ್ನು ಪರೀಕ್ಷಿಸಲಾಗುತ್ತಿದೆ. ಹಿಂದೆ ಯಾವುದೇ ಲೋಪ ಆಗಿಲ್ಲ. ಈಗ ಕೆರೆ ನೀರು ಮಿಶ್ರಣಗೊಂಡಿ ರುವುದರಿಂದ ನೊರೆ ಬಂದಿದೆ ಎಂದು ಮೆಗಾ ಕಂಪನಿ ತಾಂತ್ರಿಕಾ ವಿಭಾಗದ ಇಂಜಿನಿಯರ್‌ ವಿಜಯ್‌ ಸಮರ್ಥನೆ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ, ಸಹಾಯಕ ಪರಿಸರಾಧಿಕಾರಿ ಮೃತ್ಯುಂಜಯ್‌ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.

ಕೆ.ಸಿ.ವ್ಯಾಲಿ ಯೋಜನೆಯ ಪ್ರತಿಯೊಂದು ಬದಲಾವಣೆಯ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಬದಲಾವಣೆಯಿಂದ ಏನಾದರೂ ಸಮಸ್ಯೆ ಸಂಭವಿಸುವ ಸಾಧ್ಯತೆಯಿದ್ದರೆ ತಡೆಗಟ್ಟಲು ಕ್ರಮಕೈಗೊಳ್ಳಬೇಕು. ಈಗ ನೊರೆ ಕಾಣಿಸಿ ಕೊಂಡಿರುವುದಕ್ಕೆ ಸ್ಪಷ್ಟನೆ ನೀಡುವ ಮೂಲಕ ಜನರಲ್ಲಿನ ಆತಂಕ ನಿವಾರಿಸಬೇಕು.
  ಶುಭಾ ಕಲ್ಯಾಣ್‌, ಜಿಲ್ಲಾಧಿಕಾರಿ 

ಕೆ.ಸಿ.ವ್ಯಾಲಿ ಯೋಜನೆ ಮೂಲಕ ಜಿಲ್ಲೆಗೆ ನೀರು ಹರಿಸಿದ ಆರಂಭದಲ್ಲಿ ನೀರನ್ನು ಪರೀಕ್ಷೆಗೆ ಒಳಪ ಡಿಸಲಾಗಿದ್ದು, ಯಾವುದೇ ತೊಂದರೆಯಿಲ್ಲ.ಪೈಪ್‌ ಲೆ„ನ್‌ ಮೂಲಕ ಲಕ್ಷ್ಮೀಸಾಗರ ಕೆರೆಗೆ ಬಂದ ನೀರನ್ನು ಏಕಾಏಕಿಯಾಗಿ ಜಾನುವಾರುಗಳಿಗೆ ಕುಡಿಸಲು ಯೋಗ್ಯವಲ್ಲ. ಕೃಷಿ ಅಥವಾ ಕೈಗಾರಿಕೆ ಗಳಿಗೆ ಬಳಸಿಕೊಳ್ಳಬಹುದು. ಅಲ್ಲಿಂದ ಮತ್ತೂಂದು ಕೆರೆಗೆ ಹರಿದ ನೀರನ್ನು ಪರೀಕ್ಷಿಸಿದಾಗ ಜಾನುವಾರು, ಮೀನು ಸಾಕಾಣಿಕೆಗೆ ಉಪಯೋಗಿಸಿಕೊಳ್ಳ ಬಹುದು ಎಂದು ವರದಿ ಬಂದಿದೆ.
  ಸಿ.ಆರ್‌.ಮಂಜುನಾಥ್‌, ಜಿಲ್ಲಾ ಪರಿಸರ ಅಧಿಕಾರಿ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.