ಬುಟ್ಟಿಯಿಂದ ಬೆಟ್ಟಕ್ಕೆ ಹಸಿರು ಹೊದಿಕೆ


Team Udayavani, Jul 26, 2018, 12:39 PM IST

Crime-Bus-Accident.jpg

ಕೋಲಾರ: ಪರಿಸರ ಸಂರಕ್ಷಣೆಯ ಜತೆಗೆ ಸ್ವತ್ಛತಾ ಅಭಿಯಾನದ ಮೂಲಕ ಗ್ರಾಮಗಳನ್ನು ಸ್ವತ್ಛವಾಗಿಟ್ಟುಕೊಳ್ಳಲು ಪಣ ತೊಡಬೇಕೆಂದು ವಿದ್ಯಾರ್ಥಿ ಹಾಗೂ ಯುವಜನತೆಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲತಾಕುಮಾರಿ ಸಲಹೆ ನೀಡಿದರು.

ನಗರದ ಜಿಪಂ,ಅರಣ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಸ್ಕೌಟ್ಸ್‌, ಗೆ„ಡ್ಸ್‌ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಸೂಲೂರು ಗ್ರಾಪಂ ವ್ಯಾಪ್ತಿಯ ನುಗ್ಗಲಾಪುರ ವೀರಭದ್ರಸ್ವಾಮಿ ದೇವಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ “ಬುಟ್ಟಿಯಿಂದ ಬೆಟ್ಟಕ್ಕೆ ಹಸಿರು ಹೊದಿಕೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.

ಗ್ರಾಮ ಸ್ವತ್ಛತೆ ಕುರಿತು ಅಧ್ಯಯನ ನಡೆಸಲು ಕೇಂದ್ರ ಸರ್ಕಾರದ ಸಮಿತಿ ಜಿಲ್ಲೆಗೆ ಬರುತ್ತಿದ್ದು, ನಾವು ಪ್ರತಿ ಗ್ರಾಮದಲ್ಲೂ ಸ್ವತ್ಛತೆಯ ಪರಿಕಲ್ಪನೆಯೊಂದಿಗೆ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.

ಯುವಕ ಸಂಘ ಬಳಸಿಕೊಳ್ಳಲು ಸಲಹೆ: ಹಿಂದೆ ದೊಡ್ಡ ಕಾಡು ಇತ್ತು. ಈಗ ಮರಗಳೂ ಇಲ್ಲವಾಗುತ್ತಿವೆ. ಇದರಿಂದ ಪರಿಸರ ನಾಶವಾಗುತ್ತಿದ್ದು, ಆತಂಕ ಎದುರಾಗಿದೆ. ಅಹಂ, ಮೇಲು, ಕೀಳು ಇಲ್ಲದೇ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಕಾಣಿಕೆ ನೀಡೋಣ.

ಗ್ರಾಮೀಣ ಯುವಕ ಸಂಘಗಳನ್ನು ಬಳಸಿಕೊಂಡು “ಬುಟ್ಟಿಯಿಂದ ಬೆಟ್ಟಕ್ಕೆ ಹಸಿರು ಹೊದಿಕೆ’ ಅಭಿಯಾನವನ್ನು ಮತ್ತಷ್ಟು ಯಶಸ್ವಿಗೊಳಿಸಬೇಕೆಂದು ಸಲಹೆ ನೀಡಿದರು. ಪ್ರತಿ ಗ್ರಾಪಂನಲ್ಲೂ ಇಂತಹ ಕಾರ್ಯಕ್ರಮ ನಡೆಯುವಂತಾಗಬೇಕು. ಈ ಸಂಬಂಧ ಎಲ್ಲಾ ಗ್ರಾಪಂ ಅಧ್ಯಕ್ಷರು, ಸದಸ್ಯರು ಗಮನ ಹರಿಸಬೇಕು ಎಂದು ಕೋರಿದರು.

ಸಂಸ್ಕರಿತ ಬೀಜ: ನಿವೃತ್ತ ಅರಣ್ಯಾಧಿಕಾರಿ ಮುಕುಂದರಾವ್‌ ಮಾತನಾಡಿ, ತಾವು ಹಸಿರಿನ ಕಾಳಜಿಯಿಂದ ಈಗಾಗಲೇ ರಾಜ್ಯದಲ್ಲಿ 1.72ಲಕ್ಷ ವಿದ್ಯಾರ್ಥಿಗಳನ್ನು ಬಳಸಿಕೊಂಡು 2 ಕೋಟಿಗೂ ಅಧಿಕ ಬೀಜ ನೆಟ್ಟಿದ್ದೆವು. ಇದೀಗ 60 ಸಾವಿರ ಬೀಜ ನೀಡಿದ್ದು, ಈ ಬೀಜಗಳನ್ನು ಜೀವಾಮೃತದಲ್ಲಿ ಸಂಸ್ಕರಿಸಿ ನೀಡಲಾಗಿದೆ. ಇದನ್ನು ಕ್ರಿಮಿಕೀಟಗಳು ತಿನ್ನಲ್ಲ. 15ದಿನ ಮಳೆ ಬಾರದಿದ್ದರೂ ಬೀಜಕ್ಕೆ ಹಾನಿಯಾಗದು. ಆದ್ದರಿಂದ, ಇದರ ಸದುಪಯೋಗ ಮಾಡಿಕೊಳ್ಳಬೇಕೆಂದರು.

ಜಿಪಂ ಸದಸ್ಯ ಸಿ.ಎಸ್‌.ವೆಂಕಟೇಶ್‌ ಮಾತನಾಡಿ, ಇಡೀ ದೇಶಕ್ಕೆ ರೇಷ್ಮೆ, ಚಿನ್ನ, ಹಾಲು ನೀಡಿದ ಜಿಲ್ಲೆಯಲ್ಲಿ ಅಂತರ್ಜಲ 1500 ಅಡಿಗೆ ತಲುಪಿದೆ. ಇದರಿಂದ ಮಾರಕ ಪರಿಣಾಮಗಳನ್ನು ಅನುಭವಿಸುತ್ತಿದ್ದೇವೆ. ಎಲ್ಲರ ಸಹಕಾರದಿಂದ ಇಡೀ ಪರಿಸರವನ್ನು ಹಸಿರುಮಯವಾಗಿ ಮಾಡೋಣ ಎಂದರು. 

ಸೂಲೂರು ಸರಕಾರಿ ಪ್ರೌಢಶಾಲೆ, ಚೊಕ್ಕಹಳ್ಳಿ ಚಿನ್ಮಯ ವಿದ್ಯಾಲಯ, ಕೆಂದಟ್ಟಿ ಬಸವೇಶ್ವರ ಶಾಲೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ 400 ವಿದ್ಯಾರ್ಥಿಗಳು ಬುಟ್ಟಿಯಿಂದ ಬೆಟ್ಟಕ್ಕೆ ಹಸಿರು ಹೊದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಬೀಜಗಳನ್ನು ಇಡೀ ಬೆಟ್ಟದಲ್ಲಿ ನೆಟ್ಟರು.

ಇಡೀ ಕಾರ್ಯಕ್ರಮದ ಉಸ್ತುವಾರಿಯನ್ನು ತಾಪಂ ಇಒ ಮಂಜುನಾಥ್‌, ಸೂಲೂರು ಗ್ರಾಪಂ ಅಧ್ಯಕ್ಷ ಚನ್ನಪ್ಪ ಒಡೆಯರ್‌ ವಹಿಸಿದ್ದರು. ವಿದ್ಯಾರ್ಥಿಗಳ ರಕ್ಷಣೆಗಾಗಿ ಅರಣ್ಯ ಅಧಿಕಾರಿಗಳು, ಸಿಬ್ಬಂದಿ, ಗ್ರಾಪಂ ಸಿಬ್ಬಂದಿ ಕಾರ್ಯನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಶೇ.100 ಫಲಿತಾಂಶಕ್ಕೆ ಕಾರಣರಾದ ಸೂಲೂರು ಸರಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಚಂದ್ರಪ್ಪ ಅವರನ್ನು ಸನ್ಮಾನಿಸಲಾಯಿತು. 

ಕಾರ್ಯಕ್ರಮದಲ್ಲಿ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಿವಾಸರಾವ್‌, ವನ್ಯಜೀವಿ ಪರಿಪಾಲಕ ತ್ಯಾಗರಾಜ್‌, ಗ್ರಾಪಂ ಅಧ್ಯಕ್ಷರಾದ ಸವಿತಾ, ಶಶಿಕಲಾ, ಪ್ರಭಾವತಿ, ಸುಗುಣಮ್ಮ, ಸಿರಾಜ್‌, ಕ್ಷೇತ್ರ ಸಮನ್ವಯಾಧಿಕಾರಿ ರಾಮಕೃಷ್ಣಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಬಿ.ಎಂ.ಮುನಿರಾಜು, ರವಿ,ಬಾಲಾಜಿ, ಅರಣ್ಯಾಧಿಕಾರಿ ರಂಗನಾಥ್‌, ಶಾಲಿನಿ, ಪರಿಮಳಾ, ಮೋಹನ್‌ಕುಮಾರ್‌ ಮತ್ತಿತರರಿದ್ದರು. ಚಿನ್ಮಯ ಶಾಲೆ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಗ್ರಾಪಂ ಅಧ್ಯಕ್ಷ ಒಡೆಯರ್‌ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.