ಅತ್ಯಾಚಾರಕ್ಕೆ ಯತ್ನ, ಬಾಲಕಿಯ ಕೊಲೆ:ಮಾಲೂರಿನಲ್ಲಿ ಭಾರೀ ಪ್ರತಿಭಟನೆ
Team Udayavani, Aug 2, 2018, 3:03 PM IST
ಮಾಲೂರು: ಶಾಲಾ ಬಾಲಕಿಯ ಮೇಲೆ ಅತ್ಯಾ ಚಾರಕ್ಕೆ ಯತ್ನಿಸಿ, ಆಕೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ದುಷ್ಕರ್ಮಿಯ ಶೀಘ್ರ ಬಂಧನಕ್ಕಾಗಿ ಆಗ್ರಹಿಸಿ ಗುರುವಾರ ಹಲವು ಸಂಘಟನೆಗಳ ಕಾರ್ಯಕರ್ತರು, ವಿದ್ಯಾರ್ಥಿಗಳು ಸೇರಿ ಸಾವಿರಾರು ಮಂದಿ ಮಾಲೂರು ಬಂದ್ ನಡೆಸಿ ಉಗ್ರ ಪ್ರತಿಭಟನೆ ನಡೆಸಿದ್ದಾರೆ.
ಬಸ್ಸ್ಟಾಂಡ್ನಲ್ಲಿ ಜಮಾವಣೆಗೊಂಡ ಸಾವಿರಾರು ಪ್ರತಿಭಟನಾಕಾರರು ಆರೋಪಿಯನ್ನು ಶೀಘ್ರ ಬಂಧಿಸಲು ಆಗ್ರಹಿಸಿದರು.
ಮಾಲೂರಿನ ಇಂದಿರಾ ನಗರದ ವಾಸಿ ಸ್ಥಳೀಯ ಕಾರ್ಖಾನೆಗಳಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ದಂಪತಿಯ 15 ರ ಹರೆಯದ ಪುತ್ರಿ ಪಟ್ಟಣದ ಬಿಜೆಎಸ್ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಳು.
ಶಾಲೆಯಲ್ಲಿ ನಡೆದ ಕ್ರೀಡೆಗಳಲ್ಲಿ ಭಾಗವಹಿಸಿ ಪಕ್ಕದ ಇಂದಿರಾ ನಗರಕ್ಕೆ ಕಾಲ್ನಡಿಗೆಯಲ್ಲಿ ತನ್ನ ಗೆಳತಿಯೊಂದಿಗೆ ನಡೆದು ಕೊಂಡು ಹೋಗುತ್ತಿದ್ದಳು. ಈ ವೇಳೆ ರೈಲ್ವೆ ಸೇತುವೆ ಬಳಿ ಬಾಲಕಿಯನ್ನು ಅಡ್ಡಗಟ್ಟಿದ ಅಪರಿಚಿತ ದುಷ್ಕರ್ಮಿ ಆಕೆಯ ಬಟ್ಟೆಗಳನ್ನು ಹರೆದು ದುಷ್ಕೃತ್ಯ ಎಸಗಿದ್ದಾನೆ. ಈ ವೇಳೆ ಜೊತೆಯಲ್ಲಿದ್ದ ಇನ್ನೊಬ್ಬವಿದ್ಯಾರ್ಥಿನಿ ಕಿರುಚಿಕೊಂಡು ಓಡಿಹೋಗಿದ್ದಾಳೆ. ಆಗ ತಾನು ಕೂಡ ಅರೆಬರೆ ಬಟ್ಟೆಯಲ್ಲಿ ಓಡಿ ಹೋಗಲು ಮುಂದಾದ ಬಾಲಕಿ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಪಾಪಿ ಆರೋಪಿ ತಲೆ ಮರೆಸಿಕೊಂಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ