ಅತ್ಯಾಚಾರಕ್ಕೆ ಯತ್ನ, ಬಾಲಕಿಯ ಕೊಲೆ:ಮಾಲೂರಿನಲ್ಲಿ ಭಾರೀ ಪ್ರತಿಭಟನೆ
Team Udayavani, Aug 2, 2018, 3:03 PM IST
ಮಾಲೂರು: ಶಾಲಾ ಬಾಲಕಿಯ ಮೇಲೆ ಅತ್ಯಾ ಚಾರಕ್ಕೆ ಯತ್ನಿಸಿ, ಆಕೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ದುಷ್ಕರ್ಮಿಯ ಶೀಘ್ರ ಬಂಧನಕ್ಕಾಗಿ ಆಗ್ರಹಿಸಿ ಗುರುವಾರ ಹಲವು ಸಂಘಟನೆಗಳ ಕಾರ್ಯಕರ್ತರು, ವಿದ್ಯಾರ್ಥಿಗಳು ಸೇರಿ ಸಾವಿರಾರು ಮಂದಿ ಮಾಲೂರು ಬಂದ್ ನಡೆಸಿ ಉಗ್ರ ಪ್ರತಿಭಟನೆ ನಡೆಸಿದ್ದಾರೆ.
ಬಸ್ಸ್ಟಾಂಡ್ನಲ್ಲಿ ಜಮಾವಣೆಗೊಂಡ ಸಾವಿರಾರು ಪ್ರತಿಭಟನಾಕಾರರು ಆರೋಪಿಯನ್ನು ಶೀಘ್ರ ಬಂಧಿಸಲು ಆಗ್ರಹಿಸಿದರು.
ಮಾಲೂರಿನ ಇಂದಿರಾ ನಗರದ ವಾಸಿ ಸ್ಥಳೀಯ ಕಾರ್ಖಾನೆಗಳಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ದಂಪತಿಯ 15 ರ ಹರೆಯದ ಪುತ್ರಿ ಪಟ್ಟಣದ ಬಿಜೆಎಸ್ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಳು.
ಶಾಲೆಯಲ್ಲಿ ನಡೆದ ಕ್ರೀಡೆಗಳಲ್ಲಿ ಭಾಗವಹಿಸಿ ಪಕ್ಕದ ಇಂದಿರಾ ನಗರಕ್ಕೆ ಕಾಲ್ನಡಿಗೆಯಲ್ಲಿ ತನ್ನ ಗೆಳತಿಯೊಂದಿಗೆ ನಡೆದು ಕೊಂಡು ಹೋಗುತ್ತಿದ್ದಳು. ಈ ವೇಳೆ ರೈಲ್ವೆ ಸೇತುವೆ ಬಳಿ ಬಾಲಕಿಯನ್ನು ಅಡ್ಡಗಟ್ಟಿದ ಅಪರಿಚಿತ ದುಷ್ಕರ್ಮಿ ಆಕೆಯ ಬಟ್ಟೆಗಳನ್ನು ಹರೆದು ದುಷ್ಕೃತ್ಯ ಎಸಗಿದ್ದಾನೆ. ಈ ವೇಳೆ ಜೊತೆಯಲ್ಲಿದ್ದ ಇನ್ನೊಬ್ಬವಿದ್ಯಾರ್ಥಿನಿ ಕಿರುಚಿಕೊಂಡು ಓಡಿಹೋಗಿದ್ದಾಳೆ. ಆಗ ತಾನು ಕೂಡ ಅರೆಬರೆ ಬಟ್ಟೆಯಲ್ಲಿ ಓಡಿ ಹೋಗಲು ಮುಂದಾದ ಬಾಲಕಿ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಪಾಪಿ ಆರೋಪಿ ತಲೆ ಮರೆಸಿಕೊಂಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್ ಟವರ್ ಹತ್ತಿದ ಯುವಕ
ಯರಡಾಲ ಗ್ರಾಮ; ಇಲ್ಲಿ ಮೂಲ ಸೌಕರ್ಯಗಳದ್ದೇ ಕೊರತೆ
SS Rajamouli: ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್ನಲ್ಲಿ ಸುಳಿವು ಕೊಟ್ಟ ರಾಜಮೌಳಿ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ