ರೈಲು ಹಳಿ ಮೇಲೆ ಗುಡ್ಡ ಕುಸಿತ


Team Udayavani, Aug 9, 2018, 3:15 PM IST

kol-1.jpg

ಸಕಲೇಶಪುರ: ಭಾರೀ ಮಳೆಯಿಂದಾಗಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಮಂಗಳೂರು-ಹಾಸನ ರೈಲು ಸಂಚಾರ ಸ್ಥಗಿತಗೊಂಡಿದೆ. ಕಳೆದ ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಎರಡು ದಿನಗಳಿಂದ ಸುರಿಯುತ್ತಿದ್ದು, ಸಮುದ್ರ ಮಟ್ಟದಿಂದ 3500 ಅಡಿ ಎತ್ತರದ ಪ್ರದೇಶದಲ್ಲಿರುವ ತಾಲೂಕಿನ ಎಡಕುಮೇರಿ ಶಿರುವಾಗಿಲು ಮಧ್ಯದ 73, 83 ಹಾಗೂ 79 ಮೈಲುಗಲ್ಲು ಸಮೀಪ ಒಟ್ಟು 3 ಕಡೆ ಹಳಿ ಮೇಲೆ ಗುಡ್ಡ ಕುಸಿತಗೊಂಡಿದ್ದು ಇದರಿಂದ ಬೆಂಗಳೂರು-ಮಂಗಳೂರು ರೈಲು ಸಂಚಾರವನ್ನು ಹಾಸನದ ನಿಲ್ದಾಣದಲ್ಲೇ ಸ್ಥಗಿತಗೊಳಿಸಲಾಯಿತು.

ಬೆಳಗ್ಗೆ 11 ಗಂಟೆಯ ಸಮಯದಲ್ಲಿ ನಿಲ್ದಾಣಕ್ಕೆ ರೈಲು ಬಂತಾದರೂ, ಸಂಚಾರ ಸ್ಥಗಿತಗೊಂಡಿದ್ದರಿಂದ ಹಾಸನ ನಿಲ್ದಾಣದಲ್ಲೇ ರೈಲು ನಿಲ್ಲಬೇಕಾಯಿತು. ಆದರೆ, ಮಧ್ಯಾಹ್ನ 3 ಗಂಟೆಯಾದರೂ ಸ್ಥಳಕ್ಕೆ ಯಾವೊಬ್ಬ ಸಂಬಂಧಪಟ್ಟ ಅಧಿಕಾರಿ ಬಂದು ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಇದ್ದಿದ್ದು ಆಕ್ರೋಶಕ್ಕೆ ಕಾರಣವಾಯಿತು.

ಕಾರ್ಯಾಚರಣೆಗೆ ಮಳೆ ಅಡ್ಡಿ: ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗಬೇಕಾಗಿದ್ದ ರೈಲನ್ನು ಸುಬ್ರಹ್ಮಣ್ಯ ರೈಲು ನಿಲ್ದಾಣದಲ್ಲಿ ತಡೆ ಹಿಡಿದು ಮಂಗಳೂರಿಗೆ ಹಿಂತಿರುಗಿ ಕಳುಹಿಸಲಾಯಿತು.

ಮಲೆನಾಡು ಭಾಗದಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ರೈಲು ಹಳಿ ಮೇಲೆ ಗುಡ್ಡ ಕುಸಿಯುವುದು ಸಾಮಾನ್ಯವಾಗಿದೆ. ಏತನ್ಮಧ್ಯೆ, ಸಂಚಾರಕ್ಕೆ ಅಡ್ಡಿಯಾಗಿದ್ದ ಗುಡ್ಡ ತೆರವುಗೊಳಿಸಲು ಸಕಲೇಶಪುರದಿಂದ ತಂಡ ಹೊರಟು, ತೆರವು ಕಾರ್ಯಾಚರಣೆಯಲ್ಲಿ ತೊಡಗಿದೆ ಯಾದರೂ ಜಿಟಿ ಜಿಟಿ ಮಳೆಯಿಂದ ಅಡಿಯುಂಟಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬಂದು ರೈಲು ಯಾವಾಗ ಹೊರಡುತ್ತದೆ ಎಂಬ ಮಾಹಿತಿ ನೀಡದ ಕಾರಣ ವಿವಿಧ ತುರ್ತು ಕಾರ್ಯ ನಿಮ್ಮಿತ್ತ ಮಂಗಳೂರು ತಲುಪಲು ರೈಲು ಹತ್ತಿದ ಪ್ರಯಾಣಿಕರು ರೈಲ್ವೆ ಇಲಾಖೆಗೆ ಹಿಡಿಶಾಪ ಹಾಕುತ್ತಿದ್ದ ದೃಶ್ಯ ಹಾಸನ ರೈಲು ನಿಲ್ದಾಣದಲ್ಲಿ ಸಾಮಾನ್ಯವಾಗಿತ್ತು. 

ಬಸ್‌ನಲ್ಲಿ ಸಂಚಾರ: ಅಂತಿಮವಾಗಿ ಸಂಚಾರ ಸ್ಥಗಿತ ದಿಂದ ರೈಲ್ವೆ ಇಲಾಖೆಯು ಪ್ರಯಾಣಿಕರನ್ನು ಹಾಸನ ದಿಂದ ರಸ್ತೆ ಮಾರ್ಗವಾಗಿ 60ಕ್ಕೂ ಹೆಚ್ಚು ಬಸ್ಸುಗಳ ಮೂಲಕ ಮಂಗಳೂರು, ಕುಕ್ಕೆ ಸುಬ್ರಹ್ಮಣ್ಯ ಮತ್ತಿತರ, ಕಡೆಗಳಿಗೆ ಕಳುಹಿಸಿತು.

11 ಬಾರಿ ಗುಡ್ಡ ಕುಸಿತ: ಕಳೆದ ಎರಡೂವರೆ ತಿಂಗಳಲ್ಲಿ 11ನೇ ಬಾರಿ ಗುಡ್ಡ ಕುಸಿದಿದ್ದು, ಮಳೆಯಿಂದ ಗುರುವಾರ ಸಂಜೆಯೊಳಗೆ ಗುಡ್ಡ ತೆರವುಗೊಳಿಸವ ಸಾಧ್ಯತೆ ಇದೆ. ಒಟ್ಟಿನಲ್ಲಿ ಹಾಸನ-ಮಂಗಳೂರು ಮಾರ್ಗದಲ್ಲಿ ಪದೇ ಪದೆ ಗುಡ್ಡ ಕುಸಿಯುತ್ತಿರುವುದು ರೈಲ್ವೆ ಇಲಾಖೆಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಪ್ರಯಾಣಿಕರಿಗೂ ಕಿರಿಕಿರಿಯನ್ನುಂಟು ಮಾಡಿದೆ.

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.