ಶೀಘ್ರ ಪರಿಷ್ಕೃತ ಮತದಾರರ ಪಟ್ಟಿ ನೀಡಿ


Team Udayavani, Aug 9, 2018, 3:46 PM IST

kol-2.jpg

ಕೋಲಾರ: ಮುಂದಿನ 2019ರ ಲೋಕಸಭೆ ಚುನಾವಣೆಯ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮತಗಟ್ಟೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದು, ಕೂಡಲೇ ನೀಡಬೇಕೆಂದು ಜಿಲ್ಲೆಯ ಎಲ್ಲಾ ತಾಲೂಕುಗಳ
ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಸೂಚನೆ ನೀಡಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ನಿರ್ಲಕ್ಷ್ಯ ಬೇಡ: ಈಗಾಗಲೇ ಚುನಾವಣಾ ಆಯೋಗ ನೀಡಿರುವ ಆದೇಶದ ಅನ್ವಯ ಮತ ಗಟ್ಟೆ ಅಧಿಕಾರಿಗಳು ಪ್ರತಿ ಮನೆಗೂ ತೆರಳಿ ಮತ ದಾರರ ಕುರಿತು ಸಮಗ್ರ ಮಾಹಿತಿ ಒದಗಿಸಬೇಕು. ನಿರ್ಲಕ್ಷ್ಯವಹಿಸಿದರೆ ಮುಲಾ ಜಿಲ್ಲದೇ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ನಕಲಿ ಮತದಾರರ ಚೀಟಿ ಬಗ್ಗೆ ಎಚ್ಚರ ವಹಿಸಿ: ಗುರುತಿನ ಚೀಟಿಗಳ ವಿತರಣೆಯಲ್ಲಿ ವಿಳಂಬ ಮಾಡುತ್ತಿರುವುದರಿಂದಾಗಿ ಅನೇಕ ಸಮಸ್ಯೆಗಳು ಉಂಟಾಗುತ್ತಿವೆ. ಆಗಿಂದಾಗ್ಗೆ ಮತದಾರರ ಗುರುತಿನ ಚೀಟಿಗಳು ವಿತರಣೆಯಾಗಬೇಕು. ನಕಲಿ ಮತದಾರರ ಚೀಟಿಗಳ ಬಗ್ಗೆ ಅಗತ್ಯ ಎಚ್ಚರ ವಹಿಸಬೇಕೆಂದು ಹೇಳಿದರು.

ಅಸಮರ್ಪಕ ಮಾಹಿತಿ ಬೇಡ: ಸಭೆಯಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವ ವಿಧಾನಸಭಾ ಕ್ಷೇತ್ರದಿಂದಲೂ ಸಮರ್ಪಕ ಮಾಹಿತಿ ಬರಲಿಲ್ಲ. ಇದರಿಂದ ಅಸಮಧಾನಗೊಂಡ ಜಿಲ್ಲಾಧಿಕಾರಿಗಳು, ಬೂತ್‌ ಮಟ್ಟದ ಅಧಿಕಾರಿಗಳ ಸಭೆಗಳನ್ನು ಏಕೆ ನಡೆಸುತ್ತಿಲ್ಲ. ಸಭೆಗಳನ್ನು ಆಗಿಂದಾಗ್ಗೆ ನಡೆಸುತ್ತಿದ್ದರೆ ಎಲ್ಲ ಮಾಹಿತಿಯೂ ತಮ್ಮ ಬಳಿ ಲಭ್ಯವಿರುತ್ತಿದ್ದವು. ತಾವು ಇಲ್ಲಿ ಸಭೆ ನಡೆಸಿದಂತೆ ಚುನಾವಣಾ ಆಯೋಗದವರು ಸಭೆ ನಡೆಸಿ ನಮ್ಮನ್ನು ಮಾಹಿತಿ ಕೇಳುತ್ತಾರೆ. ಇಂತಹ ಅಸಮರ್ಪಕ ಮಾಹಿತಿಯನ್ನು ಒದಗಿಸು ವುದಾದರೂ ಹೇಗೆ ಎಂದು ಕಿಡಿಕಾರಿದರು.

 10ರೊಳಗೆ ಮಾಹಿತಿ ಕಡ್ಡಾಯ: ವಿಧಾನಸಭಾ ಚುನಾವಣೆ ಮುಗಿದು ಮೂರು ತಿಂಗಳು ಕಳೆದಿದೆ. ಇನ್ನೂ ಚುನಾವಣಾ ವೆಚ್ಚದ ಬಗ್ಗೆ ಮಾಹಿತಿ ನೀಡಿಲ್ಲವೆಂದರೆ ಅರ್ಥವೇನು ಎಂದು ಪ್ರಶ್ನಿಸಿದ ಡೀಸಿ, ಆ.10ರ ಒಳಗಾಗಿ ಮಾಹಿತಿಯನ್ನು
ಪ್ರತಿಯೊಬ್ಬರೂ ಕಡ್ಡಾಯವಾಗಿ ಸಲ್ಲಿಸಲೇಬೇಕು. ಈಗಾಗಲೇ ಚುನಾವಣಾ ಆಯೋಗ ದಿನಾಂಕ ನಿಗಪಡಿಸಿದ್ದು, ಆ ವೇಳೆ ಮಾಹಿತಿ ನೀಡದಿದ್ದರೆ ನೋಟಿಸ್‌ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈಗಾಗಲೇ 18 ವರ್ಷ ತುಂಬಿದ್ದು, ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಫಾರಂ.6 ಅನ್ನು ಭರ್ತಿ ಮಾಡಿ ಬಿಎಲ್‌ಒ ಅಥವಾ ತಹಶೀಲ್ದಾರರಿಗೆ ನೀಡಬಹುದಾಗಿದೆ. ಕಾರಣಾಂತರಗಳಿಂದ ಮರಣ ಹೊಂದಿದ್ದರೆ ಅಥವಾ ಬೇರೆಡೆಗೆ ವರ್ಗಾವಣೆಯಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಅಥವಾ ತೆಗೆದು ಹಾಕುವುದಕ್ಕೆ ಫಾರಂ ನಮೂನೆ 7 ಅನ್ನು ಭರ್ತಿ ಮಾಡಿ ನೀಡಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಇದ್ದು, ಹುಟ್ಟಿದ ದಿನಾಂಕ, ತಂದೆ, ಗಂಡ ಹೆಸರು ಸೇರಿದಂತೆ ಯಾವುದೇ ತಿದ್ದುಪಡಿಗಳಿದ್ದರೆ ಫಾರಂ.8ರ ಮೂಲಕ ಸಲ್ಲಿಸಬೇಕಿದೆ.

ಒಂದೇ ವಿಧಾನಸಭಾ ಕ್ಷೇತ್ರದಲ್ಲಿದ್ದು, ಪಟ್ಟಿಯಲ್ಲಿ ಹೆಸರಿದ್ದು, ವಿಳಾಸ ಬದಲಾಗಿದ್ದರೆ ಅಂತಹವರು ಫಾರಂ 18 ಅನ್ನು ಭರ್ತಿ ಮಾಡಿ ನೀಡಬೇಕು. ಈ ಎಲ್ಲದಕ್ಕೂ ಅಕ್ಟೋಬರ್‌ 10ರವರೆಗೂ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಚುನಾವಣಾ ಶಾಖೆ ಚುರುಕುಗೊಳ್ಳಲಿ: ಅಪರ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಮಾತನಾಡಿ, ಚುನಾವಣಾ ಶಾಖೆಯವರು ಚುರುಕುಗೊಂಡು ಕೆಲಸ ಮಾಡಬೇಕಿದೆ. ಅದನ್ನು ಬಿಟ್ಟು, ಬರುವ ಮಾಹಿತಿಯನ್ನು ಮೂಟೆ ಕಟ್ಟಿ ಬಿಸಾಡಿಸದರೆ ಮುಲಾಜಿಲ್ಲದೇ ಮನೆಗೆ ಕಳುಹಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಉಪವಿಭಾಗಾಧಿಕಾರಿ ಶುಭಾ ಕಲ್ಯಾಣ್‌ ಮಾತನಾಡಿ, ಚುನಾವಣೆ, ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ದೂರುಗಳಿದ್ದು, ಸರಿಪಡಿಸಿಕೊಳ್ಳಬೇಕು ಎಂದು ತಹಶೀಲ್ದಾರರಿಗೆ ಸೂಚಿಸಿದರು. 

ದೂರು ಬಂದರೆ ಗ್ರಹಚಾರ ಬಿಡಿಸ ಬೇಕಾಗುತ್ತೆ: ಡೀಸಿ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಕಾಟಾಚಾರಕ್ಕೆ
ಮನಬಂದಂತೆ ಬೂತ್‌ ಮಟ್ಟದ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸುವಂತಿಲ್ಲ. ಪ್ರತಿ ದಿನ ಮಾಹಿತಿ ಪಡೆದುಕೊಂಡರೆ ಅನುಕೂಲವಾಗುತ್ತದೆ ಎಂದು ಸಲಹೆ ನೀಡಿದ ಡೀಸಿ, ಹೊಸ ಮತದಾರರಿಗೆ ಸಂಬಂಧಿಸಿದಂತೆ ಮನೆ ಮನೆ ಭೇಟಿಗೂ ಮುನ್ನ ದ್ವಿತೀಯ ಪಿಯುಸಿ, ಐಟಿಐ, ಡಿಪ್ಲೋಮಾ ಪರೀಕ್ಷೆಗಳಿಗೆ ಎಷ್ಟು ಮಂದಿ ಹಾಜರಾಗುತ್ತಿದ್ದಾರೆ ಎಂಬ ಮಾಹಿತಿಯನ್ನು ಡಿಡಿಪಿಯು ಅವರಿಂದ ಪಡೆದುಕೊಂಡರೆ ಅಂದಾಜು ಸಂಖ್ಯೆಯಾದರೂ ಸಿಗುತ್ತದೆ. ಇಷ್ಟೆಲ್ಲಾ ಅವಕಾಶಗಳನ್ನು ನೀಡಿದ್ದರೂ ನಿರ್ಲಕ್ಷ್ಯವಹಿಸಿದ್ದೇ ಆದಲ್ಲಿ ಇಡೀ ರಾತ್ರಿ ಜಾಗರಣೆ ಮಾಡಿಸಿ ಕೆಲಸ ಮಾಡಿಸಬೇಕಾಗುತ್ತದೆ. ನಾನೂ ಅನಿರೀಕ್ಷಿತವಾಗಿ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳುತ್ತೇನೆ. ಯಾರಾದರೂ ತಮ್ಮ ಮನೆಗೆ ಅಧಿಕಾರಿಗಳು ಬಂದಿಲ್ಲ ಎಂದು ಹೇಳಿದರೆ ಸಂಬಂಧಪಟ್ಟ ಬಿಎಲ್‌ಒಗಳು ಸೇರಿದಂತೆ ಅಧಿಕಾರಿಗಳಿಗೆ ಗ್ರಹಚಾರ ಬಿಡಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಎಚ್ಚರಿಸಿದರು.

2019ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಬಿಎಲ್‌ಒಗಳು ಪ್ರತಿ ಮನೆಗೆ ತೆರಳಿ 2019ರ ಜ.1ಕ್ಕೆ 18 ವರ್ಷ ತುಂಬಿದವರ ಮಾಹಿತಿಯನ್ನು ಕಲೆ ಹಾಕಿ, ನೋಂದಣಿ ಮಾಡಬೇಕು.
 ಜೆ.ಮಂಜುನಾಥ್‌, ಜಿಲ್ಲಾಧಿಕಾರಿ 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.