ಶೀಘ್ರ ಪರಿಷ್ಕೃತ ಮತದಾರರ ಪಟ್ಟಿ ನೀಡಿ


Team Udayavani, Aug 9, 2018, 3:46 PM IST

kol-2.jpg

ಕೋಲಾರ: ಮುಂದಿನ 2019ರ ಲೋಕಸಭೆ ಚುನಾವಣೆಯ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮತಗಟ್ಟೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದು, ಕೂಡಲೇ ನೀಡಬೇಕೆಂದು ಜಿಲ್ಲೆಯ ಎಲ್ಲಾ ತಾಲೂಕುಗಳ
ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಸೂಚನೆ ನೀಡಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ನಿರ್ಲಕ್ಷ್ಯ ಬೇಡ: ಈಗಾಗಲೇ ಚುನಾವಣಾ ಆಯೋಗ ನೀಡಿರುವ ಆದೇಶದ ಅನ್ವಯ ಮತ ಗಟ್ಟೆ ಅಧಿಕಾರಿಗಳು ಪ್ರತಿ ಮನೆಗೂ ತೆರಳಿ ಮತ ದಾರರ ಕುರಿತು ಸಮಗ್ರ ಮಾಹಿತಿ ಒದಗಿಸಬೇಕು. ನಿರ್ಲಕ್ಷ್ಯವಹಿಸಿದರೆ ಮುಲಾ ಜಿಲ್ಲದೇ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ನಕಲಿ ಮತದಾರರ ಚೀಟಿ ಬಗ್ಗೆ ಎಚ್ಚರ ವಹಿಸಿ: ಗುರುತಿನ ಚೀಟಿಗಳ ವಿತರಣೆಯಲ್ಲಿ ವಿಳಂಬ ಮಾಡುತ್ತಿರುವುದರಿಂದಾಗಿ ಅನೇಕ ಸಮಸ್ಯೆಗಳು ಉಂಟಾಗುತ್ತಿವೆ. ಆಗಿಂದಾಗ್ಗೆ ಮತದಾರರ ಗುರುತಿನ ಚೀಟಿಗಳು ವಿತರಣೆಯಾಗಬೇಕು. ನಕಲಿ ಮತದಾರರ ಚೀಟಿಗಳ ಬಗ್ಗೆ ಅಗತ್ಯ ಎಚ್ಚರ ವಹಿಸಬೇಕೆಂದು ಹೇಳಿದರು.

ಅಸಮರ್ಪಕ ಮಾಹಿತಿ ಬೇಡ: ಸಭೆಯಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವ ವಿಧಾನಸಭಾ ಕ್ಷೇತ್ರದಿಂದಲೂ ಸಮರ್ಪಕ ಮಾಹಿತಿ ಬರಲಿಲ್ಲ. ಇದರಿಂದ ಅಸಮಧಾನಗೊಂಡ ಜಿಲ್ಲಾಧಿಕಾರಿಗಳು, ಬೂತ್‌ ಮಟ್ಟದ ಅಧಿಕಾರಿಗಳ ಸಭೆಗಳನ್ನು ಏಕೆ ನಡೆಸುತ್ತಿಲ್ಲ. ಸಭೆಗಳನ್ನು ಆಗಿಂದಾಗ್ಗೆ ನಡೆಸುತ್ತಿದ್ದರೆ ಎಲ್ಲ ಮಾಹಿತಿಯೂ ತಮ್ಮ ಬಳಿ ಲಭ್ಯವಿರುತ್ತಿದ್ದವು. ತಾವು ಇಲ್ಲಿ ಸಭೆ ನಡೆಸಿದಂತೆ ಚುನಾವಣಾ ಆಯೋಗದವರು ಸಭೆ ನಡೆಸಿ ನಮ್ಮನ್ನು ಮಾಹಿತಿ ಕೇಳುತ್ತಾರೆ. ಇಂತಹ ಅಸಮರ್ಪಕ ಮಾಹಿತಿಯನ್ನು ಒದಗಿಸು ವುದಾದರೂ ಹೇಗೆ ಎಂದು ಕಿಡಿಕಾರಿದರು.

 10ರೊಳಗೆ ಮಾಹಿತಿ ಕಡ್ಡಾಯ: ವಿಧಾನಸಭಾ ಚುನಾವಣೆ ಮುಗಿದು ಮೂರು ತಿಂಗಳು ಕಳೆದಿದೆ. ಇನ್ನೂ ಚುನಾವಣಾ ವೆಚ್ಚದ ಬಗ್ಗೆ ಮಾಹಿತಿ ನೀಡಿಲ್ಲವೆಂದರೆ ಅರ್ಥವೇನು ಎಂದು ಪ್ರಶ್ನಿಸಿದ ಡೀಸಿ, ಆ.10ರ ಒಳಗಾಗಿ ಮಾಹಿತಿಯನ್ನು
ಪ್ರತಿಯೊಬ್ಬರೂ ಕಡ್ಡಾಯವಾಗಿ ಸಲ್ಲಿಸಲೇಬೇಕು. ಈಗಾಗಲೇ ಚುನಾವಣಾ ಆಯೋಗ ದಿನಾಂಕ ನಿಗಪಡಿಸಿದ್ದು, ಆ ವೇಳೆ ಮಾಹಿತಿ ನೀಡದಿದ್ದರೆ ನೋಟಿಸ್‌ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈಗಾಗಲೇ 18 ವರ್ಷ ತುಂಬಿದ್ದು, ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಫಾರಂ.6 ಅನ್ನು ಭರ್ತಿ ಮಾಡಿ ಬಿಎಲ್‌ಒ ಅಥವಾ ತಹಶೀಲ್ದಾರರಿಗೆ ನೀಡಬಹುದಾಗಿದೆ. ಕಾರಣಾಂತರಗಳಿಂದ ಮರಣ ಹೊಂದಿದ್ದರೆ ಅಥವಾ ಬೇರೆಡೆಗೆ ವರ್ಗಾವಣೆಯಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಅಥವಾ ತೆಗೆದು ಹಾಕುವುದಕ್ಕೆ ಫಾರಂ ನಮೂನೆ 7 ಅನ್ನು ಭರ್ತಿ ಮಾಡಿ ನೀಡಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಇದ್ದು, ಹುಟ್ಟಿದ ದಿನಾಂಕ, ತಂದೆ, ಗಂಡ ಹೆಸರು ಸೇರಿದಂತೆ ಯಾವುದೇ ತಿದ್ದುಪಡಿಗಳಿದ್ದರೆ ಫಾರಂ.8ರ ಮೂಲಕ ಸಲ್ಲಿಸಬೇಕಿದೆ.

ಒಂದೇ ವಿಧಾನಸಭಾ ಕ್ಷೇತ್ರದಲ್ಲಿದ್ದು, ಪಟ್ಟಿಯಲ್ಲಿ ಹೆಸರಿದ್ದು, ವಿಳಾಸ ಬದಲಾಗಿದ್ದರೆ ಅಂತಹವರು ಫಾರಂ 18 ಅನ್ನು ಭರ್ತಿ ಮಾಡಿ ನೀಡಬೇಕು. ಈ ಎಲ್ಲದಕ್ಕೂ ಅಕ್ಟೋಬರ್‌ 10ರವರೆಗೂ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಚುನಾವಣಾ ಶಾಖೆ ಚುರುಕುಗೊಳ್ಳಲಿ: ಅಪರ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಮಾತನಾಡಿ, ಚುನಾವಣಾ ಶಾಖೆಯವರು ಚುರುಕುಗೊಂಡು ಕೆಲಸ ಮಾಡಬೇಕಿದೆ. ಅದನ್ನು ಬಿಟ್ಟು, ಬರುವ ಮಾಹಿತಿಯನ್ನು ಮೂಟೆ ಕಟ್ಟಿ ಬಿಸಾಡಿಸದರೆ ಮುಲಾಜಿಲ್ಲದೇ ಮನೆಗೆ ಕಳುಹಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಉಪವಿಭಾಗಾಧಿಕಾರಿ ಶುಭಾ ಕಲ್ಯಾಣ್‌ ಮಾತನಾಡಿ, ಚುನಾವಣೆ, ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ದೂರುಗಳಿದ್ದು, ಸರಿಪಡಿಸಿಕೊಳ್ಳಬೇಕು ಎಂದು ತಹಶೀಲ್ದಾರರಿಗೆ ಸೂಚಿಸಿದರು. 

ದೂರು ಬಂದರೆ ಗ್ರಹಚಾರ ಬಿಡಿಸ ಬೇಕಾಗುತ್ತೆ: ಡೀಸಿ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಕಾಟಾಚಾರಕ್ಕೆ
ಮನಬಂದಂತೆ ಬೂತ್‌ ಮಟ್ಟದ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸುವಂತಿಲ್ಲ. ಪ್ರತಿ ದಿನ ಮಾಹಿತಿ ಪಡೆದುಕೊಂಡರೆ ಅನುಕೂಲವಾಗುತ್ತದೆ ಎಂದು ಸಲಹೆ ನೀಡಿದ ಡೀಸಿ, ಹೊಸ ಮತದಾರರಿಗೆ ಸಂಬಂಧಿಸಿದಂತೆ ಮನೆ ಮನೆ ಭೇಟಿಗೂ ಮುನ್ನ ದ್ವಿತೀಯ ಪಿಯುಸಿ, ಐಟಿಐ, ಡಿಪ್ಲೋಮಾ ಪರೀಕ್ಷೆಗಳಿಗೆ ಎಷ್ಟು ಮಂದಿ ಹಾಜರಾಗುತ್ತಿದ್ದಾರೆ ಎಂಬ ಮಾಹಿತಿಯನ್ನು ಡಿಡಿಪಿಯು ಅವರಿಂದ ಪಡೆದುಕೊಂಡರೆ ಅಂದಾಜು ಸಂಖ್ಯೆಯಾದರೂ ಸಿಗುತ್ತದೆ. ಇಷ್ಟೆಲ್ಲಾ ಅವಕಾಶಗಳನ್ನು ನೀಡಿದ್ದರೂ ನಿರ್ಲಕ್ಷ್ಯವಹಿಸಿದ್ದೇ ಆದಲ್ಲಿ ಇಡೀ ರಾತ್ರಿ ಜಾಗರಣೆ ಮಾಡಿಸಿ ಕೆಲಸ ಮಾಡಿಸಬೇಕಾಗುತ್ತದೆ. ನಾನೂ ಅನಿರೀಕ್ಷಿತವಾಗಿ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳುತ್ತೇನೆ. ಯಾರಾದರೂ ತಮ್ಮ ಮನೆಗೆ ಅಧಿಕಾರಿಗಳು ಬಂದಿಲ್ಲ ಎಂದು ಹೇಳಿದರೆ ಸಂಬಂಧಪಟ್ಟ ಬಿಎಲ್‌ಒಗಳು ಸೇರಿದಂತೆ ಅಧಿಕಾರಿಗಳಿಗೆ ಗ್ರಹಚಾರ ಬಿಡಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಎಚ್ಚರಿಸಿದರು.

2019ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಬಿಎಲ್‌ಒಗಳು ಪ್ರತಿ ಮನೆಗೆ ತೆರಳಿ 2019ರ ಜ.1ಕ್ಕೆ 18 ವರ್ಷ ತುಂಬಿದವರ ಮಾಹಿತಿಯನ್ನು ಕಲೆ ಹಾಕಿ, ನೋಂದಣಿ ಮಾಡಬೇಕು.
 ಜೆ.ಮಂಜುನಾಥ್‌, ಜಿಲ್ಲಾಧಿಕಾರಿ 

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.