ನೌಕರರ ವೇತನ ಹೆಚ ಸಿಬ್ಬಂದಿ ನೇಮಕಕ್ಕೆ ಆಗ್ರಹ ಹೆಚ್ಚಳಕ್ಕೆ ಒತ್ತಾಯ


Team Udayavani, Oct 4, 2018, 2:48 PM IST

kol-2.jpg

ಕೋಲಾರ: ರಾಜ್ಯದ ಅಕ್ಷರ ದಾಸೋಹ (ಬಿಸಿಯೂಟ) ನೌಕರರನ್ನು ಖಾಯಂ ಮಾಡಬೇಕು. ಅಲ್ಲಿಯತನಕ ಯಾವುದೇ ಅಡುಗೆ ನೌಕರರನ್ನು ಕೆಲಸದಿಂದ ತೆಗೆಯದ ರೀತಿ ಆದೇಶ ಹೊರಡಿಸಬೇಕು ಹಾಗೂ ನೌಕರರಿಗೆ ಕನಿಷ್ಠ ವೇತನ 10,500 ರೂ. ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಕ್ಷೇಮಾಭಿವೃದ್ಧಿ ಸಮಿತಿ ಕಾರ್ಯಕರ್ತರು ನಗರದಲ್ಲಿ ಧರಣಿ ನಡೆಸಿದರು.

ಈ ವೇಳೆ ಮಾತನಾಡಿದ ಪ್ರಜಾಸೇವಾ ಸಮಿತಿ ಸಂಯೋಜಿತ ಮುಖಂಡ ಕಲ್ವ ಮಂಜಲಿ ಸಿ.ಶಿವಣ್ಣ, ಮುಖ್ಯಮಂತ್ರಿ ಎಚ್‌. ಡಿ.ಕುಮಾರಸ್ವಾಮಿ ಚುನಾವಣಾ ಪ್ರಣಾಳಿಕೆ ಯಲ್ಲಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಅಕ್ಷರ ದಾಸೋಹ ನೌಕರರನ್ನು ಖಾಯಂ ಮಾಡುವುದಾಗಿ ಹಾಗೂ ಕನಿಷ್ಠ ವೇತನ 10,500 ರೂ. ನೀಡುವುದಾಗಿ ತಿಳಿಸಿದ್ದರು. 

ಆದರೆ, ಸರ್ಕಾರ ಅಸ್ತಿತ್ವಕ್ಕೆ ಬಂದು 4 ತಿಂಗಳು ಕಳೆದರೂ ಇದುವರಿಗೂ ಅಕ್ಷರ ದಾಸೋಹ ನೌಕರರ ಬೇಡಿಕೆಗಳನ್ನು ಈಡೇರಿಸುವುದಾಗಲಿ, ಅವರ ಕಷ್ಟಗಳನ್ನು ನೀಗಿಸುವುದಾಗಲಿ ಮಾಡದಿರುವುದು ನೋವುಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸರ್ಕಾರಿ ಶಾಲೆ ಮುಚ್ಚಬೇಡಿ: ಸರ್ಕಾರಿ ಶಾಲೆಗಳಲ್ಲಿ ಸರ್ಕಾರಿ ನೌಕರರ ಮಕ್ಕಳನ್ನು ಓದಿಸುವ ಕಾನೂನನ್ನು ರೂಪಿಸಬೇಕು. ಮಕ್ಕಳ ಹಾಜರಾತಿ ಮತ್ತು ದಾಖಲಾತಿ ಇಲ್ಲವೆಂಬ ಕಾರಣಕ್ಕೆ ಯಾವುದೇ ಕಾರಣಕ್ಕೂ ಯಾವುದೇ ಅಡುಗೆಯವರನ್ನು ಕೆಲಸದಿಂದ ತೆಗೆಯುವುದಾಗಲಿ, ಸರ್ಕಾರಿ ಶಾಲೆ ಮುಚ್ಚು ವುದಾಗಲಿ ಮಾಡಬಾರದೆಂದು ಒತ್ತಾಯಿಸಿದರು.

ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಯನ್ನು ಕನ್ನಡದ ಜೊತೆಗೆ ಇಂಗ್ಲಿಷ್‌ ಮಾಧ್ಯಮ ದಲ್ಲಿ ತೆರೆಯಬೇಕು. ಸರ್ಕಾರಿ ಸೌಲಭ್ಯ ಪಡೆಯುವ ಪ್ರತಿಯೊಬ್ಬರೂ ಸರ್ಕಾರಿ ಶಾಲೆ ಗಳಿಗೆ ತಮ್ಮ ಮಕ್ಕಳನ್ನು ಸೇರಿಸಬೇಕು. ಶಾಲೆಗಳಲ್ಲಿ ಎಸ್‌ಡಿಯುಎಂಸಿ ಶಿಕ್ಷಕರಿಂದ ಗ್ರಾಮ ಪಂಚಾಯಿತಿ ಕೆಲವು ಸದಸ್ಯರಿಂದ ಬಿಸಿಯೂಟ ನೌಕರರ ಮೇಲೆ ಆಗುತ್ತಿರುವ
ದೌರ್ಜನ್ಯವನ್ನು ತಡೆಯಬೇಕು. ಅಂತಹವರ ವಿರುದ್ಧ ಕಾನೂನಿ ರೀತಿ ಕ್ರಮ ಕೈಗೊಳ್ಳಬೇಕು. 

ಅಡುಗೆ ನೌಕರರ ಬೇಡಿಕೆ ಈಡೇರಿಸಿ: ಬಿಸಿಯೂಟ ನೌಕರರ ಮಕ್ಕಳ ಉನ್ನತ ವ್ಯಾಸಂಗಕ್ಕೆ ಸರ್ಕಾರ ಪ್ರತ್ಯೇಕ ಅನುದಾನವನ್ನು ನೀಡಬೇಕು. ಸರ್ಕಾರವೇ ಉನ್ನತ ವ್ಯಾಸಂಗದ ಮಕ್ಕಳ ಖರ್ಚು ವೆಚ್ಚಗಳನ್ನು ಭರಿಸಬೇಕು.
ಈಗಲಾದರೂ ತಮ್ಮ ಸರ್ಕಾರದ ಅವಧಿಯಲ್ಲಿ ಅಡುಗೆ ನೌಕರರ ಬೇಡಿಕೆಗಳನ್ನು ಈಡೇರಿಸ ಬೇಕೆಂದು ಆಗ್ರಹಿಸಿ ಜಿಪಂ ಸಿಇಒ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಧರಣಿಯಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ (ಬಿಸಿಯೂಟ) ನೌಕರರ ಕ್ಷೇಮಾಭಿ ವೃದ್ಧಿ ಸಮಿತಿ ಜಿಲ್ಲಾ ಅಧ್ಯಕ್ಷ ವಕ್ಕಲೇರಿ ನಾಗಮಣಿ, ಕೋಲಾರ ತಾಲೂಕು ಅಧ್ಯಕ್ಷೆ ಮಮತಾ, ಮಾಲೂರು ತಾಲೂಕು ಅಧ್ಯಕ್ಷೆ ಜ್ಯೋತಿ, ಮುಳಬಾಗಿಲು ಲಕ್ಷ್ಮೀ, ಜಯಮಂಗಲ ವನಿತಾ ಮತ್ತು ಲಕ್ಕೂರು ಮುನಿರತ್ನಾ, ಸುಗಟೂರು ಶೋಭಾ, ಕವಿತಾ,
ಮುಳಬಾಗಿಲು ಚಂದ್ರಮ್ಮ, ಲಕ್ಷ್ಮೀದೇವಿ, ರಾಧಮ್ಮ, ರತ್ನಮ್ಮ, ಸರಸ್ವತಮ್ಮ, ಚಲ್ದಿಗಾನಹಳ್ಳಿ ಕಾಂತಮ್ಮ, ಗಾಯಿತ್ರಿ, ವಸಂತಮ್ಮ, ಉಷಾರಾಣಿ, ಅಸಾಂಡಹಳ್ಳಿ ರತ್ನಮ್ಮ, ಸುಶೀಲಮ್ಮ, ಪುಷ್ಪಾವತಿ, ರಾಜಮ್ಮ, ನೇತ್ರವತಿ, ದಾಕ್ಷಾಯಣಿ, ಪುಷ್ಪಾ, ಸುಶೀಲಮ್ಮ, ಮಂಜುಳಾ, ನೀಲಮ್ಮ, ದೇವೀರಮ್ಮ, ಎಸ್‌.ಕೆ. ಶೋಭಾ, ಭಾಗ್ಯಮ್ಮ, ರೈತ ನಾಯಕ ಪ್ರೊ.ನಂಜುಂಡ ಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಕಲ್ವಮಂಜಲಿ
ರಾಮುಶಿವಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ನಾರಾಯಣಸ್ವಾಮಿ, ದೊಡ್ಡಕುರುಬರಹಳ್ಳಿ ಶಂಕರಪ್ಪ, ಮಾಗೊಂದಿ ಚಂದ್ರಣ್ಣ ಮುಂತಾದವರು ಭಾಗವಹಿಸಿದ್ದರು.

ಅಕ್ಷರ ದಾಸೋಹದ ಅಡುಗೆ ನೌಕರರು 2,700ರೂ.ಗೆ ಜೀವನ ನಡೆಸಲು, ಮಕ್ಕಳನ್ನು ಓದಿಸಲು ಆಗದೆ ತೊಂದೆಗೆ ಸಿಲುಕಿದ್ದಾರೆ. ಅವರ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು.
 ಕಲ್ವಮಂಜಲಿ ಸಿ.ಶಿವಣ್ಣ, ಪ್ರಜಾಸೇವಾ ಸಮಿತಿ ಸಂಯೋಜಿತ ಮುಖಂಡ 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.