ದಕ್ಷಿಣಪಿನಾಕಿನಿ ನದಿ ಪುನಃಶ್ಚೇತನಕ್ಕೆ ಸಹಕರಿಸಿ


Team Udayavani, Nov 15, 2018, 2:52 PM IST

kol-2.jpg

ಕೋಲಾರ: ಜಿಲ್ಲೆಯಲ್ಲಿ ಹಾದು ಹೋಗಿರುವ ದಕ್ಷಿಣ ಪಿನಾಕಿನಿ ನದಿ ಪಾತ್ರವನ್ನು ಅಭಿವೃದ್ಧಿಪಡಿಸಲು ನಿವೃತ್ತ ಜಿಲ್ಲಾಧಿಕಾರಿ ವಿಶ್ವನಾಥ್‌ ಮುಂದಾಗಿದ್ದಾರೆ. ಬುಧವಾರ ಈ ಸಂಬಂಧ ಜಿಲ್ಲೆಗೆ ಆಗಮಿಸಿ ಹಾಲಿ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಸಭೆ ನಡೆಸಿದ ಅವರು, ನದಿ ಅಭಿವೃದ್ಧಿಗಾಗಿ ದಕ್ಷಿಣ ಪಿನಾಕಿನಿ ನದಿ ಪುನಃ ಶ್ಚೇತನ ಟ್ರಸ್ಟ್‌ ಮುಂದಾಗಿದ್ದು, ಇದಕ್ಕೆ ನೆರವು ನೀಡಬೇಕೆಂದು ಮನವಿ ಮಾಡಿಕೊಂಡರು.

ಯೋಜನೆ ಅನುಷ್ಠಾನಕ್ಕೆ ಸಹಕಾರ ನೀಡಿ: ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ 16 ತಾಲೂಕು ವ್ಯಾಪ್ತಿಯನ್ನು ಪಿನಾಕಿನಿ ನದಿ ಪ್ರದೇಶ ಒಳಗೊಂಡಿದೆ. ಕೋಲಾರ ಜಿಲ್ಲೆಯಲ್ಲಿ ಕೋಲಾರ, ಮಾಲೂರು ಮತ್ತು ಬಂಗಾರಪೇಟೆ ತಾಲೂಕುಗಳು ಸೇರುತ್ತವೆ. ಪಿನಾಕಿನಿ ನದಿ ಪುನಃಶ್ಚೇತನದ ಅನಿವಾರ್ಯತೆಯನ್ನು ಜಿಲ್ಲಾಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟ ಅವರು, ಟ್ರಸ್ಟ್‌ ತನ್ನ ಯೋಜನೆಗಳನ್ನು ಪೂರ್ಣಗೊಳಿಸಲು 3 ವರ್ಷಗಳ ಕಾಲಮಿತಿ ನಿಗದಿ ಮಾಡಲಾಗಿದೆ. ನದಿ ವ್ಯಾಪ್ತಿಯ ತಾಲೂಕುಗಳಲ್ಲಿನ ಕೆರೆಗಳ ಕುರಿತ ಸಮಗ್ರ ಚಿತ್ರಣವನ್ನು ಇಸ್ರೋ ಮೂಲಕ ಪಡೆಯಲಾಗಿದೆ. ಯೋಜನೆಗೆ ಕೋಟ್ಯಂತರ ರೂ. ಅವಶ್ಯಕತೆಯಿದೆ. ಆರ್ಥಿಕ ಸಂಪನ್ಮೂಲವನ್ನು ಟ್ರಸ್ಟ್‌ ಹೊಂದಿಸುತ್ತದೆ. ಯೋಜನೆ ಅನುಷ್ಠಾನಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಬೇಕೆಂದು ಕೋರಿದರು.

5 ಎಕರೆ ಜಮೀನು ಅಗತ್ಯ: ಇದಕ್ಕಾಗಿ ಮಾಲೂರಿನಲ್ಲಿ 5 ಎಕರೆ ಜಮೀನು ಅವಶ್ಯಕತೆಯಿದೆ. ಸರ್ಕಾರಿ ಜಮೀನು ಸಿಕ್ಕರೆ ಒಳ್ಳೆಯದು. ಇಲ್ಲವಾದಲ್ಲಿ ಯೋಗ್ಯ ಬೆಲೆಗೆ ಟ್ರಸ್ಟ್‌ ವತಿಯಿಂದಲೇ ಖರೀದಿಸಲಾಗುವುದು. ಇಲ್ಲಿ ಜಾಗ ಸಿಗದೇ ಹೋದಲ್ಲಿ ಚಿಕ್ಕಬಳ್ಳಾಪುರದಲ್ಲಿ ಸರ್ಕಾರಿ ಜಾಗ ಇರುವುದರಿಂದ ಆ ಬಗ್ಗೆ ಪರಿಶೀಲಿಸುವುದಾಗಿ ಹೇಳಿದರು.

ಜಿಲ್ಲಾಡಳಿತದಿಂದ ಸಹಕಾರ: ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಮಾತನಾಡಿ, ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆಗೆ ಸೇರಿದ 1,328 ಹಾಗೂ ಜಿಪಂಗೆ ಸೇರಿದ 138 ಕೆರೆಗಳು ಸೇರಿ ಒಟ್ಟು 2,668 ಕೆರೆಗಳಿವೆ. ಈಗಾಗಲೇ ಕೆ.ಸಿ.ವ್ಯಾಲಿ ಯೋಜನೆಯಡಿ 126 ಕೆರೆಗಳಿಗೆ ನೀರು ಹರಿಸುವ ಸಂಬಂಧ ಕೆರೆಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಮಾರ್ಕಂಡೇಯ ಜಲಾಶಯ, ಯರಗೋಳ್‌ ಯೋಜನೆ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿಪಡಿಸಲಾಗುತ್ತಿದೆ. ಇಂತಹ ಸಂದರ್ಭ ದಲ್ಲಿ ಟ್ರಸ್ಟ್‌ ಕೆರೆ ಸಂರಕ್ಷಣೆಗೆ ಒತ್ತು ನೀಡುವುದು ಒಳ್ಳೆಯ ಕಾರ್ಯ. ಅವಶ್ಯವಿರುವ ಎಲ್ಲ ಸಹಕಾರವನ್ನು ಜಿಲ್ಲಾಡಳಿತದಿಂದ ಒದಗಿಸ ಲಾಗುವುದು ಎಂದು ಭರವಸೆ ನೀಡಿದರು.

ನರೇಗಾ ಯೋಜನೆ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳನ್ನು ಕೆರೆಗಳನ್ನು ಅಭಿವೃದ್ಧಿಪಡಿಸಲು ಅವಕಾಶವಿರುವ ಬಗ್ಗೆ ಮನವರಿಕೆ ಮಾಡಿಕೊಟ್ಟ ಅವರು, ನೀಲಗಿರಿ ನಿರ್ಮೂಲನೆ ಸಂಬಂಧ ಸರ್ಕಾರ ದಿಂದ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದರು. ಮಾಲೂರು ತಾಲೂಕಿನಲ್ಲಿ 5 ಎಕರೆ ಸರ್ಕಾರಿ ಜಮೀನು ಲಭ್ಯತೆ ಬಗ್ಗೆ ಪರಿಶೀಲನೆ ನಡೆ ಸುವಂತೆ ತೋಟಗಾರಿಕೆ ಅಧಿಕಾರಿಗೆ ಸೂಚಿಸಿದರು. ಪ್ರಗತಿಪರ ರೈತರಾದ ಅಶೋಕ್‌ ರಾಂಪುರ, ನೆನ ಮನಹಳ್ಳಿ ಚಂದ್ರಶೇಖರ್‌, ಸಂಪತ್‌ ಕುಮಾರ್‌, ಕಡಿಮೆ ನೀರಿನಲ್ಲಿ ಕೃಷಿ ಕ್ಷೇತ್ರದಲಾಗಿರುವ ಸಾಧನೆ ವಿವರಿಸಿದರು. ಜಿಪಂ ಯೋಜನಾ ನಿರ್ದೇಶಕ ರವಿಚಂದ್ರನ್‌, ಕೃಷಿ ಅಧಿ ಕಾರಿ ನಯೀಮ್‌ ಪಾಷ ಇತರರು ಹಾಜರಿದ್ದರು.

ಜಿಲ್ಲೆಯ ಕೆರೆ, ರಾಜಕಾಲುವೆಗಳ ಅಭಿವೃದ್ಧಿ ಸೇರಿದಂತೆ ಜಲಾನಯನ ಪ್ರದೇಶಗಳ ಅಭಿವೃದ್ಧಿ, ಮಳೆ ನೀರು ಸಂರಕ್ಷಣೆ,
ಸಾವಯವ ಕೃಷಿಗೆ ಒತ್ತು ನೀಡುವುದು, ನೀಲಗಿರಿ ನಿರ್ಮೂಲನೆ ಕೂಡ ದಕ್ಷಿಣ ಪಿನಾಕಿನಿ ನದಿ ಪುನಃಶ್ಚೇತನ ಟ್ರಸ್ಟ್‌ ಕಾರ್ಯಕ್ರಮಗಳಲ್ಲಿ ಒಳಪಟ್ಟಿವೆ. ರೈತ ಉತ್ಪಾದಕ ಸಂಸ್ಥೆಗಳನ್ನು ಆರಂಭಿಸುವ ಮೂಲಕ ರೈತರು ಬೆಳೆದ ಉತ್ಪನ್ನಗಳಿಗೆ ಯೋಗ್ಯ ಬೆಲೆ ಮತ್ತು ಮಾರುಕಟ್ಟೆಯನ್ನೂ ಟ್ರಸ್ಟ್‌ ಕಲ್ಪಿಸುತ್ತದೆ.
ವಿಶ್ವನಾಥ್‌, ನಿವೃತ್ತ ಐಎಎಸ್‌ ಅಧಿಕಾರಿ

ದಕ್ಷಿಣ ಪಿನಾಕಿನಿ ನದಿ ಪುನಃಶ್ಚೇತನ ಟ್ರಸ್ಟ್‌ ಯೋಜನೆ ಮೂರು ವರ್ಷಗಳ ಅವಧಿಯದ್ದು. ಆದರೆ, ಜಿಲ್ಲೆಯ ಜನರಿಗೆ
ಅನುಕೂಲದ ಬಗ್ಗೆ ಮನವರಿಕೆ ಮಾಡಿಕೊಟ್ಟ ನಂತರವಷ್ಟೇ ಯೋಜನೆಯ ಬಗ್ಗೆ ನಂಬಿಕೆ ಮೂಡಲು ಸಾಧ್ಯ. ಹೀಗಾಗಿ, ಆರಂಭದಲ್ಲಿ ಯಾವುದಾದರೂ ಒಂದು ಭಾಗದಲ್ಲಿ ಜಲಾನಯನ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಪ್ರಾತ್ಯಕ್ಷಿಕೆ ತೋರಿಸೋಣ.
ಜೆ.ಮಂಜುನಾಥ್‌,  ಜಿಲ್ಲಾಧಿಕಾರಿ 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.