ಚರ್ಚಿಸಿ ಸೂಕ್ತ ಅಭ್ಯರ್ಥಿ ಕಣಕ್ಕಿಳಿಸಲು ಬಿಜೆಪಿ ನಿರ್ಧಾರ


Team Udayavani, Jan 8, 2019, 11:16 AM IST

kol-1.jpg

ಮಾಲೂರು: ನಗರ ಬಿಜೆಪಿ ವತಿಯಿಂದ ಪುರಸಭಾ ಚುನಾವಣೆಗಳ ಪೂರ್ವ ಸಿದ್ಧತೆಗಳ ಚಿಂತನೆಗಳ ಸಮಾಲೋಚನೆ ಸಭೆ ಶಾಂತಿಯುತವಾಗಿ ನಡೆಯಿತು. ನಗರ ಘಟಕದ ಬಿಜೆಪಿ ಅಧ್ಯಕ್ಷ ಎಂ.ಸಿ.ರವಿ ಅವರ ಅಧ್ಯಕ್ಷತೆಯಲ್ಲಿ ಪಟ್ಟಣದ ಕುಂಭೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಬೆಂಬಲಿಸಲು ಮುಖಂಡರು ಮನವಿ ಮಾಡಿದರು.

ಆಕ್ರೋಶ ವ್ಯಕ್ತಪಡಿಸಿದರು: ಪಟ್ಟಣದ ಎಲ್ಲಾ 27 ವಾರ್ಡ್‌ಗಳಿಗೆ ಮುಂದಿನ ದಿನಗಳಲ್ಲಿ ನಡೆಯಲಿರುವ ಪುರಸಭೆ ಸಾರ್ವತ್ರಿಕ ಚುನಾವಣೆ ರೂಪುರೇಷಗಳನ್ನು ಸಿದ್ಧಪಡಿಸುವ ವಿಚಾರವಾಗಿ ಸಭೆ ಕರೆಯಲಾಗಿತ್ತು. ಇಂದಿನ ಸಭೆಗೆ ಕಳೆದ ವಿಧಾನ
ಸಭೆಯ ಚುನಾವಣೆ ವೇಳೆಯಲ್ಲಿ ಜೆಡಿಎಸ್‌ ಪರವಾಗಿ ನೇರವಾಗಿ ಪ್ರಚಾರಕ್ಕೆ ಇಳಿದ ಸದಸ್ಯರು ಹಾಜರಾಗಿದ್ದ ಕಾರಣ ಸಭೆಯಲ್ಲಿದ್ದ ಕೆಲವು ಯುವ ಕಾರ್ಯಕರ್ತರನ್ನು ಸಹಜವಾಗಿಯೇ ಕೆರಳಿಸಿ ತ್ತು. ಕಳೆದ ಪುರಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು ಗೆಲುವು ಸಾಧಿಸಿದ ಕೆಲವು ಸದಸ್ಯರು ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಬಿಟ್ಟು ಜೆಡಿಎಸ್‌ ಪಾಳೇಯದಲ್ಲಿ ಗುರುತಿಸಿಕೊಂಡಿದ್ದು ಕೆಲ ಯುವ ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು.

ಸಂಘಟಿತರಾಗಲು ಸಲಹೆ: ಸಭೆ ಆರಂಭದಿಂದಲೂ ಬಿಗುವಿನ ವಾತಾವರಣ ದಲ್ಲಿಯೇ ನಡೆದ ಸಭೆಯಲ್ಲಿ ಕೆಲವೇ ಕಾರ್ಯಕರ್ತರು ಪಕ್ಷದ ನಿಷ್ಟಾವಂತ ಕಾರ್ಯಕರ್ತರಿಗೆ ಮಾತ್ರ ಮನ್ನಣೆ ನೀಡುವಂತೆ ಒತ್ತಿ ಹೇಳುವ ಪ್ರಯತ್ನ ನಡೆಸಿದರು. ಅಲ್ಲದೇ, ಮಧ್ಯ ಪ್ರವೇಶ ಮಾಡಿದ ಬಿಜೆಪಿ ಜಿಲ್ಲಾ ಉಸ್ತುವಾರಿ ವಹಿಸಿದ್ದ ಸಚ್ಚಿದಾನಂದ ಮೂರ್ತಿ, ಪುರಸಭಾ ಚುನಾವಣೆ ಪೂರ್ವ ಸಿದ್ಧತಾ ಸಭೆಯಾಗಿ ದ್ದು ಇಲ್ಲಿ ಆಕ್ರೋಶವಾಗಿ ಮಾತನಾಡುವುದು ಬೇಡ. ಮುಂದಿನ ದಿನಗಳಲ್ಲಿಯೇ  ಪಟ್ಟಣದ ಕಾರ್ಯಕರ್ತರ ಸಭೆ ನಡೆಸಿಪ್ರತಿಯೊಬ್ಬರೂ ಮುಕ್ತವಾಗಿ ಮಾತನಾಡಿ ಸೂಕ್ತ ವ್ಯಕ್ತಿಯನ್ನು ಚುನಾವಣೆಗೆ ಇಳಿಸುವ ಕಾರ್ಯವಾಗಬೇ ಕಾಗಿದೆ. ಪಕ್ಷ ಸಂಘಟನೆ ಹಿತ ದೃಷ್ಟಿಯಿಂದ ಎಲ್ಲರೂ ಒಗ್ಗಟ್ಟಾಗಬೇಕೆಂದು ಮನವಿ ಮಾಡಿದರು.

ಮಾಜಿ ಶಾಸಕ ಎ.ನಾಗರಾಜು ಮಾತನಾಡಿ, ಪ್ರಸ್ತುತ ಚುನಾವಣೆಗಳ ಖರ್ಚು ವೆಚ್ಚ ಅಧಿಕವಾಗುತ್ತಿದ್ದು ಮುಖಂಡರು ಮತ್ತು ಪಕ್ಷವನ್ನು ಮಾತ್ರ ನಂಬಿ ಟಿಕೆಟ್‌ ಕೇಳುವ ಆಕಾಂಕ್ಷಿಗಳ ಬದಲಿಗೆ ಸ್ವಂತ ಶಕ್ತಿಯಿಂದ ಚುನಾವಣೆ ನಡೆಸುವ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಕಾರ್ಯವಾಗಬೇಕಾಗಿದೆ ಎಂದರು. 

 ಬಿಜೆಪಿ ನಗರ ಘಟಕದ ಅಧ್ಯಕ್ಷ ಎಂ.ಸಿ.ರವಿ ಮಾತನಾಡಿ, ಎಲ್ಲಾ ವಾರ್ಡ್‌ಗಳ ಸರ್ವೆ ನಡೆಸಿ ಸೂಕ್ತ ಅಭ್ಯರ್ಥಿಯನ್ನು ಜನಾಭಿಪ್ರಾಯದೊಂದಿಗೆ ಆಯ್ಕೆ ಮಾಡಲಾಗುವುದು ಎಂದರು. ಸಭೆಯಲ್ಲಿ ಮಾಜಿ ಶಾಸಕ ಎ.ನಾಗರಾಜು, ತಬಲ ಎ.ನಾರಾಯಣಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟಮುನಿಯಪ್ಪ, ಜಿಲ್ಲಾ ಉಸ್ತುವಾರಿ ಸಚ್ಚಿದಾನಂದ ಮೂರ್ತಿ, ತಾಲೂಕು ಅಧ್ಯಕ್ಷ ಬಿ.ಆರ್‌.ವೆಂಕಟೇಶ್‌, ಪುರಸಭೆ ಅಧ್ಯಕ್ಷ ಸಿ.ಪಿ.ನಾಗರಾಜು, ಸದಸ್ಯರಾದ ವೇಮನ, ಶ್ರೀವಳ್ಳಿ, ಗೀತಾ, ಭಾರತಮ್ಮ ಮತ್ತಿತರರಿದ್ದರು.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.