ಹಿಪ್ಪುನೇರಳೆ ಬೆಳೆಯಲ್ಲಿ ತಾಂತ್ರಿಕತೆ ಅಳವಡಿಸಿ


Team Udayavani, Feb 13, 2019, 7:28 AM IST

hippu.jpg

ಬಂಗಾರಪೇಟೆ: ರೇಷ್ಮೆ ಬೆಳೆಗಾರರು ಹಿಪ್ಪುನೇರಳೆ ತೋಟಗಳಲ್ಲಿ ನೂತನ ತಾಂತ್ರಿಕತೆ ಅಳವಡಿಸಿಕೊಳ್ಳುವುದರಿಂದ ಅಧಿಕ ಇಳುವರಿಯ ಸೊಪ್ಪನ್ನು ಪಡೆಯಬಹುದೆಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ನಿವೃತ್ತ ಪ್ರೊಫೆಸರ್‌ ಡಾ.ವಿಜಯೇಂದ್ರ ತಿಳಿಸಿದರು. 

ತಾಲೂಕಿನ ಕುಪ್ಪನಹಳ್ಳಿ ರೇಷ್ಮೆ ಕೃಷಿ ಕೇಂದ್ರದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ರೇಷ್ಮೆ ಇಲಾಖೆ ಬಂಗಾರಪೇಟೆ ಮತ್ತು ಕೇಂದ್ರ ರೇಷ್ಮೆ ಮಂಡಳಿ ಸಹಯೋಗದಲ್ಲಿ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ದ್ವಿತಳಿ ರೇಷ್ಮೆಯನ್ನು ಹೆಚ್ಚು ರೈತರು ಬೆಳೆಯುತ್ತಿದ್ದು ತಪ್ಪದೇ ಸರಿಯಾದ ಸೋಂಕು ನಿವಾರಕ ಬಳಸಿದರೆ ಗುಣಮಟ್ಟದ ರೇಷ್ಮೆ ಗೂಡುಗಳನ್ನು ಬೆಳೆದು ಅಧಿಕ ಲಾಭ ಗಳಿಸಬಹುದೆಂದು ತಿಳಿಸಿದರು. ರೇಷ್ಮೆ ಹುಳು ಸಾಕುವ ಮನೆಗಳನ್ನು ರೈತರು ತಾಂತ್ರಿಕವಾಗಿ ಹುಳು ಸಾಕಣೆಗೆ ಯೋಗ್ಯವಾಗುವಂತೆ ಇಲಾಖೆ ಮಾರ್ಗದರ್ಶನದಲ್ಲಿ ನಿರ್ಮಿಸಿಕೊಳ್ಳಬೇಕು. ಇದರಿಂದ ರೈತರಿಗೆ ಉಪಯುಕ್ತವಾಗುತ್ತದೆ ಎಂದರು.

ಕೃಷಿ ವಿಶ್ವದ್ಯಾಲಯದ ಪೊ›ಫೆಸರ್‌ ಡಾ.ನಾರಾಯಣರೆಡ್ಡಿ, ಇಸ್ರೇಲ್‌ ತಾಂತ್ರಿಕತೆ ಬಳಸಿಕೊಳ್ಳುವ ವಿಧಾನ, ಅದರಿಂದಾಗುವ ಉಪಯೋಗ, ಯಾವ ತಾಂತ್ರಿಕತೆಯನ್ನು ಯಾವ ಅವಧಿಯಲ್ಲಿ ಅಳವಡಿಸಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು.

ಪ್ರತಿಯೊಬ್ಬ ರೈತರು ಮುಕ್ತವಾಗಿ ಇಂತಹ ಕಾರ್ಯಕ್ರಮಗಳಲ್ಲಿ ತಮ್ಮ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕು. ಆಗಲೇ ತಮ್ಮ ತೋಟಗಳನ್ನು ಅಭಿವೃದ್ಧಿ ಪಡಿಸಿಕೊಂಡು ಉತ್ತಮ ಪ್ರಗತಿ ಪರ ರೈತರಾಗಬಹುದು. ಕೋಲಾರದ ರೈತರು ಬೇರೆ ಭಾಗಗಳ ರೈತರು ಪ್ರಜ್ಞಾವಂತರಾಗಿದ್ದು ಇನ್ನು ಹೆಚ್ಚಿನ ತಾಂತ್ರಿಕತೆ ಅಳವಡಿಸಿಕೊಳ್ಳಬೇಕೆಂದರು.

ಜಿಲ್ಲಾ ರೇಷ್ಮೆ ಉಪನಿರ್ದೇಶಕ ಎಂ.ಕೆ.ಪ್ರಭಾಕರ್‌,   ನರೇಗಾ ಯೋಜನೆಯಲ್ಲಿ ತಮ್ಮೆಲ್ಲರ ಹಾಗೂ ಅಧಿಕಾರಿಗಳ ಪರಿಶ್ರಮದಿಂದ ಉತ್ತಮ ಸಾಧನೆ ಮಾಡಿದ್ದು ಅದನ್ನು ಮುಂದುವರಿಸಬೇಕು. ಈ ಯೋಜನೆ ಸೌಲಭ್ಯವನ್ನು ಪ್ರತಿಯೊಬ್ಬ ರೈತರು ಪಡೆದುಕೊಳ್ಳಬೇಕು ಎಂದು ರೈತರಲ್ಲಿ ಮನವಿ ಮಾಡಿದರು.
 
ರೇಷ್ಮೆ ಸಹಾಯಕ ನಿರ್ದೇಶಕ ಎಸ್‌.ಎನ್‌.ಶ್ರೀನಿವಾಸ್‌ ಮಾತನಾಡಿ, ನರೇಗಾ ಯೋಜನೆಯಡಿ ರೇಷ್ಮೆ ಬೆಳೆಗಾರರು ತಮ್ಮ ತೋಟಗಳ ಸೌಲಭ್ಯ ಪಡೆಯಬೇಕು. ಉತ್ತಮ ಗುಣಮಟ್ಟದ ಸೊಪ್ಪು ಉತ್ಪಾದನೆ ಮಾಡಿ ಗುಣ ಮಟ್ಟದ ಗೂಡು ಬೆಳೆದು ಅಧಿಕ ಲಾಭ ಗಳಿಸಬೇಕು ಎಂದರು.  

ರೇಷ್ಮೆ ಕೃಷಿ ವಿಜ್ಞಾನಿ ಡಾ.ಮೋರಿಸನ್‌ ಮಾತನಾಡಿ, ಗುಣಮಟ್ಟದ ದ್ವಿತಳಿ ರೇಷ್ಮೆ ಗೂಡು ಉತ್ಪಾದನೆ ಮಾಡಿದ್ದಲ್ಲಿ ಇಲ್ಲಿಯೇ ಎಆರ್‌ಎಂ ಘಟಕ ಸಿಬ್ಬಂದಿ ಆಗಮಿಸಿ ರೇಷ್ಮೆ ಗೂಡು ಖರೀದಿಸುತ್ತಾರೆ. ತಾಂತ್ರಿಕತೆ ಅಳವಡಿಸಿಕೊಂಡು ದ್ವಿತಳಿ ಬೆಳೆ ಬೆಳೆಯಬೇಕೆಂದರು.

ಕೋಲಾರದ ಪ್ರಗತಿಪರ ರೈತ ಕೃಷ್ಣಮೂರ್ತಿ, ಬಂಗಾರಪೇಟೆಯಲ್ಲಿ ರೇಷ್ಮೆ ಇಲಾಖೆ ಇಂತಹ ಕಾರ್ಯಕ್ರಮಗಳನ್ನು ಮಾಡುವ ಮೂಲಕ ರೈತರಿಗೆ ಉತ್ತಮವಾಗಿ ಸ್ಪಂದಿಸುತ್ತಿದೆ. ಅದೇ ರೀತಿ ಎಲ್ಲಾ ಕಡೆ ಅಧಿಕಾರಿಗಳು ರೈತರಿಗೆ ಸ್ಪಂದಿಸಿ ಕೆಲಸ ನಿರ್ವಹಿಸಲು ಸೂಚನೆ ನೀಡಲು ರೇಷ್ಮೆ ಉಪನಿರ್ದೇಶಕರಲ್ಲಿ ಮನವಿ ಮಾಡಿದರು. 

ರೇಷ್ಮೆ ಕೃಷಿಯಲ್ಲಿ ಅಧಿಕ ಇಳುವರಿ ಪಡೆದ ಪ್ರಗತಿಪರ ರೈತರಾದ ಗುಟ್ಟಹಳ್ಳಿ ಗೋವಿಂದಪ್ಪ, ಉರಿಗಾಂ ಚಂದ್ರು, ಕಾಲವಲಹಳ್ಳಿ ಮಾರ್ಕೊಂಡರೆಡ್ಡಿ ಅವರನ್ನು ಸನ್ಮಾನಿಸಲಾಯಿತು. ಕೃಷಿ ವಿಜ್ಞಾನ ಕಾಲೇಜಿನ ವೆಂಕಟೇಶ್‌, ಸಂತೋಷ್‌, ರೇಷ್ಮೆ ಇಲಾಖೆ ರೇಷ್ಮೆ ಅಧಿಕಾರಿಗಳಾದ ಜಿ.ಶ್ರೀನಿವಾಸ್‌, ಜಯಶ್ರೀನಿವಾಸ್‌, ರಿಯಾಜ್‌ ಅಹಮದ್‌, ರಾಮಚಂದ್ರರಾವ್‌, ಬಂಗಾರಪೇಟೆ ರೇಷ್ಮೆ ಬೆಳೆಗಾರರ ಸಂಘದ ಪದಾಧಿಕಾರಿಗಳಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.