ಇಂಧನ ಉಳಿಸಿ: ಪಿಎಸ್ಐ ಅಣ್ಣಯ್ಯ ಸಲಹೆ
Team Udayavani, Feb 16, 2019, 7:26 AM IST
ಕೋಲಾರ: ಬೇರೆ ರಾಷ್ಟ್ರಗಳಿಂದ ಇಂಧನ ಆಮದು ಮಾಡಿಕೊಳ್ಳುತ್ತಿದ್ದೇವೆ. ನಮ್ಮ ದೇಶದಲ್ಲಿ ಇಂಧನ ಉಳಿಸುವ ಕಾರ್ಯ ಮಾಡಬೇಕಾದ ಅನಿವಾರ್ಯತೆ ಇದ್ದು ಅರ್ಧ ಕಿ.ಮೀ.ಗೂ ಹೋಗಲು ನಾವು ವಾಹನ ಅವಲಂಬಿಸುವುದು ಬೇಸರದ ಸಂಗತಿ ಎಂದು ಕೋಲಾರ ನಗರಠಾಣೆ ಪಿಎಸ್ಐ ಅಣ್ಣಯ್ಯ ತಿಳಿಸಿದರು.
ಇಂಧನ ಉಳಿತಾಯ ಸಪ್ತಾಹದ ಅಂಗವಾಗಿ ಇಂಡಿಯನ್ ಆಯಿಲ್ ಕಾಪೋರೇಷನ್ ವತಿಯಿಂದ ಇಂಧನ ಉಳಿಸಿ – ದೇಶ ಮತ್ತು ಪರಿಸರ ರಕ್ಷಿಸಿ ಎಂಬ ಘೋಷಣೆಯೊಂದಿಗೆ ಮುನಿಸ್ವಾಮಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳೊಂದಿಗೆ ನಗರದಲ್ಲಿ ಶುಕ್ರವಾರ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.
ಇಂಡಿಯನ್ ಆಯಿಲ್ ಕಾರ್ಪೋರೇಷನ್ ಹಮ್ಮಿಕೊಂಡಿರುವ ಜಾಥಾ ಬಹಳ ಶ್ಲಾಘನೀಯ. ದಯಮಾಡಿ ಕಡಿಮೆ ಅಂತರವಿದ್ದರೆ ಕಾಲ್ನಡಿಗೆಯಲ್ಲಿ ಕ್ರಮಿಸಿ. ಇದರಿಂದ ನಿಮ್ಮ ಆರೋಗ್ಯ ವೃದ್ಧಿಯಾಗುತ್ತದೆ. ಅವಶ್ಯಕತೆ ಇದ್ದಲ್ಲಿ ವಾಹನ ಬಳಸುವುದರೊಂದಿಗೆ ಇಂಧನ ಉಳಿಸಿ ಎಂದರು.
ಇಂಡಿಯನ್ ಆಯಿಲ್ ಕಾರ್ಪೋರೇಷನ್ ಮಾರುಕಟ್ಟೆ ವ್ಯವಸ್ಥಾಪಕ ಶ್ರೀನಿವಾಸ್ ನಾಗಿರೆಡ್ಡಿ, ದೇಶಾದ್ಯಂತ ನಮ್ಮ ಕಂಪನಿ ವತಿಯಿಂದ ವಾಹನ ಸವಾರರಲ್ಲಿ ಇಂಧನ ಉಳಿಸುವ, ಪರಿಸರ ರಕ್ಷಿಸುವ ಬಗ್ಗೆ ಜಾಗೃತಿ ಮೂಡಿಸುವ ಜಾಥಾ ಹಮ್ಮಿಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ದೇಶ ಉಳಿಸುವ ಸಲುವಾಗಿ ಇಂಧನ ಉಳಿಸುವ ಕರ್ತವ್ಯ ನಮ್ಮ ಮೇಲಿದೆ ಎಂದರು.
ಜಾಥಾಗೆ ಮೊದಲು ಶಾಲಾ ಮಕ್ಕಳು ಮತ್ತು ನೆರೆದಿದ್ದ ಗಣ್ಯರು ಇಂಧನ ಉಳಿಸುವ ಪ್ರತಿಜ್ಞಾ ಬೋಧನೆ ಸ್ವೀಕರಿಸಿದ ಸಂದರ್ಭದಲ್ಲಿ ಸೆವೆನಿಲ್ಸ್ ಪೆಟ್ರೋಲ್ ಬಂಕ್ ಮಾಲಿಕ ಎನ್.ಸಿ.ಸತೀಶ್, ಇಂಡಿಯನ್ ಆಯಿಲ್ ಬಂಕ್ ಡೀಲರ್ಗಳಾದ ಮಲ್ಲೇಶ್ ಬಾಬು, ಶಿವು, ಬಂಗಾರಪೇಟೆ ಕಾರ್ತಿಕ್, ಮುಳಬಾಗಿಲು ರಾಜಾರಾಮಣ್ಣ, ಸಿಬ್ಬಂದಿ ದೇವರಾಜ್ಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ