ಸ್ವಯಂ ಉದ್ಯೋಗಕ್ಕೆ ವಿಫ‌ುಲ ಅವಕಾಶ


Team Udayavani, Feb 17, 2019, 7:34 AM IST

swayam.jpg

ಕೋಲಾರ: ಕಾಂಕ್ರೀಟೀಕರಣಗೊಳ್ಳುತ್ತಿರುವ ನಗರ ಪ್ರದೇಶಗಳಲ್ಲಿ ನೆಮ್ಮದಿ ಬದುಕು, ಉತ್ತಮ ಗಾಳಿಗಾಗಿ ಇರುವ ಉದ್ಯಾನವನಗಳ ಅಭಾವ ನೀಗಿಸಲು ಲ್ಯಾಂಡ್‌ ಸ್ಕೇಪ್‌ ಮತ್ತು ಆರ್ಕಿಟೆಕ್ಚರ್‌ ಬಹು ಬೇಡಿಕೆ ಕ್ಷೇತ್ರವಾಗಿ ಬೆಳೆಯುತ್ತಿದೆ ಎಂದು ತೋಟಗಾರಿಕೆ ಕಾಲೇಜಿನ ಡೀನ್‌ ಡಾ.ಜಿ.ಪ್ರಕಾಶ್‌ ತಿಳಿಸಿದರು.

ಶುಕ್ರವಾರ ನಗರ ಹೊರವಲಯದ ಟಮಕದಲ್ಲಿನ ತೋಟಗಾರಿಕೆ ಕಾಲೇಜಿನಲ್ಲಿ ದ್ವಿತೀಯ ಬಿಎಸ್ಸಿ ತೋಟಗಾರಿಕೆ ವಿದ್ಯಾರ್ಥಿಗಳು ಆಯೋಜಿಸಿದ್ದ “ತೋಟದ ಪರಿಕಲ್ಪನೆ ಮತ್ತು ಹೂ ರಚನಾ ವಿನ್ಯಾಸ’ ಪ್ರದರ್ಶನ ವೀಕ್ಷಿಸಿದ ನಂತರ ಮಾತನಾಡಿದರು. ಏರುತ್ತಿರುವ ಜನಸಂಖ್ಯೆಗೆ ಅಗತ್ಯವಾದ ಮನೆ, ನಿವೇಶನ ಒದಗಿಸಲು ನಗರಪ್ರದೇಶಗಳಲ್ಲಿ ಕಷ್ಟವಾಗಿದೆ. ಈ ನಿಟ್ಟಿನಲ್ಲಿ ಉದ್ಯಾನವನಗಳ ನಿರ್ಮಾಣ ಕಷ್ಟವಾಗಿದೆ ಎಂದರು.

ಈ ನಿಟ್ಟಿನಲ್ಲಿ ಲ್ಯಾಂಡ್‌ ಸ್ಕೇಪ್‌ ಮತ್ತು ಆರ್ಕಿಟೆಕ್ಚರ್‌ ಬಹು ಬೇಡಿಕೆಯಿರುವ ಕ್ಷೇತ್ರವಾಗಿದ್ದು, ಸ್ವಯಂ ಉದ್ಯೋಗ ಕಂಡುಕೊಳ್ಳಲು ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ವಿಫುಲ ಅವಕಾಶ ಕಲ್ಪಿಸಿಕೊಡಲಿದೆ ಎಂದು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳು ಪಠ್ಯದಲ್ಲಿ ಏನು ಕಲಿತಿರುತ್ತಾರೋ ಅದರ ಪ್ರಾಯೋಗಿಕ ಪ್ರದರ್ಶನ ನೀಡುವುದು ಶೈಕ್ಷಣಿಕ ಚಟುವಟಿಕೆಯ ಭಾಗವಾಗಿದ್ದು, ಇದರಿಂದ ಅವರ ಮುಂದಿನ ಬದುಕಿಗೆ ಅಗತ್ಯವಾದ ಪ್ರಾಯೋಗಿಕ ಅನುಭವ ಲಭಿಸಲು ಸಹಕಾರಿ ಎಂದರು.

ಇಂದು ಕಾಂಕ್ರೀಟೀಕರಣಗೊಳ್ಳುತ್ತಿರುವ ನಗರಗಳಲ್ಲಿ ಉದ್ಯಾನವನಗಳ ಅಭಾವವಿದೆ. ನಾವು ವಾಸವಿರುವ ಸ್ಥಳದಲ್ಲೇ ಹಸಿರೀಕರಣಕ್ಕೆ ಇರುವ ಅವಕಾಶಗಳ ಬಗ್ಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶ. ಲ್ಯಾಂಡ್‌ ಸ್ಕೇಪ್‌ ಮತ್ತು ಆರ್ಕಿಟೆಕ್ಚರ್‌ ಕ್ಷೇತ್ರ ಬಹು ಬೇಡಿಕೆ ಇರುವುದರಿಂದ ವಿದ್ಯಾರ್ಥಿಗಳು ಉದ್ಯೋಗ ಸಿಗದಿದ್ದರೆ ಆತಂಕ ಪಡುವ ಅಗತ್ಯವಿಲ್ಲ ಸ್ವಯಂ ಉದ್ಯೋಗ ರೂಪಿಸಿಕೊಂಡು ಬದುಕು ರೂಪಿಸಿಕೊಳ್ಳಲು ಹೆಚ್ಚಿನ ಅವಕಾಶಗಳಿವೆ ಎಂದರು.

ಆರ್‌.ಎಲ್‌.ಜಾಲಪ್ಪ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಶ್ರೀರಾಮುಲು ಪ್ರದರ್ಶನವನ್ನು ಉದ್ಘಾಟಿಸಿ, ತೋಟಗಾರಿಕೆ ಸಂಬಂಧ ವಿದ್ಯಾರ್ಥಿಗಳು ಪಠ್ಯ ಅಭ್ಯಾಸ ಮಾಡಿದರೂ, ಅದನ್ನು ಪ್ರಾಯೋಗಿಕವಾಗಿ ಅನುಸರಿಸಿದರೆ ಮಾತ್ರವೇ ಹೆಚ್ಚಿನ ಅನುಭವ ಒದಗುವುದರಿಂದ ಇಂತಹ ಪ್ರದರ್ಶನಗಳು ಹೆಚ್ಚು ಜ್ಞಾನಾಭಿವೃದ್ಧಿಗೆ ಸಹಕಾರಿ ಎಂದರು.

ಹಾಜರಿದ್ದ ಹೂವಿನ ಬೆಳೆ ಸಹಾಯಕ ಪ್ರಾಧ್ಯಾಪಕ ಡಾ.ಎ.ಎಂ.ರಾಜೇಶ್‌, ಮನೆ ಛಾವಣಿಯ ಮೇಲೆಯೇ ಇಂದು ಅನೇಕರು ಉದ್ಯಾನವನ, ತರಕಾರಿ ತೋಟ ನಿರ್ಮಿಸಿ ಉತ್ತಮ ವಾತಾವರಣ ರೂಪಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಪ್ರದರ್ಶನದಲ್ಲಿ ಬಿಎಸ್ಸಿ ತೋಟಗಾರಿಕೆ ವಿದ್ಯಾರ್ಥಿಗಳು ಕಳೆದ  20 ದಿನಗಳ ಅವಿರತ ಶ್ರಮದಿಂದ ಬಗೆಬಗೆಯ ಉದ್ಯಾನ ಸೃಷ್ಟಿಸಿ ಬೆರಗುಗೊಳಿಸಿದ್ದಾರೆ. ಪ್ರಮುಖವಾಗಿ ಹಿಂದೆ ರಾಜ ರಾಣಿಯರ ಕಾಲದ ಉದ್ಯಾನವನಗಳು ಹೇಗಿದ್ದವು, ಅದರಲ್ಲಿನ ವಿವಿಧತೆಯನ್ನು ವಿದ್ಯಾರ್ಥಿಗಳು ಬಿಂಬಿಸಿದ್ದು, ನವನವೀನ ಉದ್ಯಾನಗಳ ಸೃಷ್ಟಿ ಇಲ್ಲಿ ಕಂಡು ಬರುತ್ತಿದೆ. 

ಫ್ರೆಂಚ್‌ ಗಾರ್ಡನ್‌, ಡಿಶ್‌ ಗಾರ್ಡನ್‌, ಟೇಬಲ್‌ ಗಾರ್ಡನ್‌, ತಾರಸಿ ಗಾರ್ಡನ್‌, ರಾಕ್‌ ಗಾರ್ಡನ್‌, ಪಾರದರ್ಶನ ಗಾಜಿನ ಬುರುಡೆಯೊಳಗೆ ಕುಬj ಸಸಿಗಳನ್ನು ಬೆಳೆಸುವ ಕೆಟೇರಿಯಂ, ಎಡಬಲ್‌ ಲ್ಯಾಂಡ್‌ ಸ್ಕೇಪಿಂಗ್‌ , ಜಪಾನ್‌ ಮತ್ತು ಇಂಗ್ಲಿಷ್‌ ಹೂವಿನ ತೋಟ ಹೀಗೆ ಹತ್ತು ಹಲವು ಬಗೆಯ ಉದ್ಯಾನವನಗಳನ್ನು ನಿರ್ಮಿಸುವ ಮೂಲಕ ವಿದ್ಯಾರ್ಥಿಗಳು ಗಮನ ಸೆಳೆದಿದ್ದಾರೆ. ಅಲ್ಲದೇ ಅದನ್ನು ನೋಡಿದವರು ತಮ್ಮ ಮನೆ ತಾರಸಿ ಮೇಲೆ ಉದ್ಯಾನವನ ನಿರ್ಮಾಣಕ್ಕೆ ಪ್ರೇರಣೆ ನೀಡಿದ್ದಾರೆ. 

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar: ಕುರ್ಚಿಗೆ ಅಧಿಕಾರಿಗಳಿಬ್ಬರ ತಿಕ್ಕಾಟ; ಕೆಲಸ ಸ್ಥಗಿತ

Kolar: ಕುರ್ಚಿಗೆ ಅಧಿಕಾರಿಗಳಿಬ್ಬರ ತಿಕ್ಕಾಟ; ಕೆಲಸ ಸ್ಥಗಿತ

11

Drinking water: ಜಾತ್ರೆಗೆ ಬಂದ ರಾಸುಗಳಿಗೆ ಕುಡಿಯಲು ನೀರಿಲ!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.