ಸಮರೋಪಾದಿ ಬರನಿರ್ವಹಣೆಗೆ ಜಿಲ್ಲಾಡಳಿತ ಸಜ್ಜು  


Team Udayavani, Feb 19, 2019, 7:40 AM IST

jilleya.jpg

ಕೋಲಾರ: ಶಾಶ್ವತ ಬರ ಪೀಡಿತ ಕೋಲಾರ ಜಿಲ್ಲೆಯಲ್ಲಿ ಬೇಸಿಗೆಯ ನೂರು ದಿನಗಳನ್ನು ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು, ಸಮರೋಪಾದಿಯಲ್ಲಿ ಬರ ನಿರ್ವಹಣೆ ಕಾರ್ಯ ಕೈಗೆತ್ತಿಕೊಂಡಿದೆ.

ಕಂಟ್ರೋಲ್‌ ರೂಂ ಸ್ಥಾಪನೆ, ನೋಡಲ್‌ ಅಧಿಕಾರಿ ನೇಮಕ: ಮಳೆ ಕೊರತೆಯಿಂದಾಗಿ ಇಡೀ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದೆ. ಹೀಗಾಗಿ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಬರ ನಿರ್ವಹಿಸುವ ಸಲುವಾಗಿ 2 ತಿಂಗಳ ಹಿಂದೆಯೇ ಕಂಟ್ರೋಲ್‌ ರೂಂ ರಚಿಸಿ, ದೂರವಾಣಿ ಸಂಖ್ಯೆ ಪ್ರಕಟಿಸಲಾಗಿದೆ. ಪ್ರತಿ ಹೋಬಳಿಗೂ ನೋಡಲ್‌ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಈ ನೋಡಲ್‌ ಅಧಿಕಾರಿಗಳು ಆಯಾ ವಾರದ  ಬರ ಸಂಬಂಧಿತ ವಿಚಾರಗಳನ್ನು ಚರ್ಚಿಸಲು ಪ್ರತಿ ಶನಿವಾರ ಸಭೆ ನಡೆಸುತ್ತದೆ. ಪ್ರತಿ ಸೋಮವಾರ ಜಿಲ್ಲಾ ಮಟ್ಟದ ಬರ ನಿರ್ವಹಣೆ ಸಭೆಯು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿಯೇ ನಡೆದು ಆಯಾ ವಾರದ ಸಮಸ್ಯೆ-ಅವುಗಳ ನಿರ್ವಹಣೆಗೆ ಕೈಗೊಂಡ ಕ್ರಮಗಳ ಕುರಿತಂತೆ ಚರ್ಚಿಸುತ್ತಿದೆ. 

ಮೇವು ನಿಧಿ: ಜಿಲ್ಲೆಯ ಪ್ರತಿ ತಾಲೂಕಿನಲ್ಲಿಯೂ ತಲಾ ಒಂದು ಮೇವು ನಿಧಿ ಸ್ಥಾಪಿಸುವ ಸಂಬಂಧ ಹೊರ ಜಿಲ್ಲೆ ರಾಜ್ಯದಿಂದ ಒಣ ಭತ್ತದ ಹುಲ್ಲನ್ನು ಖರೀದಿಸಲು ತಾಲೂಕುವಾರು ಅಲ್ಪಾವಧಿ ಟೆಂಡರ್‌ ಕರೆಯಲಾಗಿದೆ. ಆಯಾ ತಾಲೂಕಿನ ಬೇಡಿಕೆ ಅನ್ವಯ ಒಣ ಭತ್ತ ಹುಲ್ಲು ಖರೀದಿಸಿ ರೈತರಿಗೆ ಹಂಚಿಕೆ ಮಾಡಲು ಜಿಲ್ಲಾಡಳಿತ ಸೂಚನೆ ಮೇರೆಗೆ ಆಯಾ ತಾಲೂಕು ಆಡಳಿತಕ್ಕೂ ಅಗತ್ಯ ಕ್ರಮ ಕೈಗೊಳ್ಳುತ್ತಿವೆ.

ಬೆಳೆ ಹಾನಿ ಪರಿಹಾರ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಸುಮಾರು 26 ಕೋಟಿ ರೂ., ಮೌಲ್ಯದ ಬೆಳೆ ಹಾನಿಯಾಗಿದೆ ಎಂದು ಅಂದಾಜು ಮಾಡಲಾಗಿದೆ. ಅದೇ ರೀತಿ ಹಿಂಗಾರಲ್ಲಿ 6 ಕೋಟಿ ರೂ. ನಷ್ಟವುಂಟಾಗಿದೆ ಎಂದು ಅಂದಾಜಿಸಲಾಗಿದೆ. ಕಳೆದ ವರ್ಷ ಕೋಲಾರ ಜಿಲ್ಲೆಯಲ್ಲಿ 32 ಕೋಟಿ ರೂ.,ಗಳ ಬೆಳೆ ಹಾನಿ ಸಂಭವಿಸಿದ್ದು, ವಿಮಾ ಪರಿಹಾರವನ್ನು ರೈತರ ಖಾತೆಗೆ ನೇರವಾಗಿ ಜಮೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಸರ್ಕಾರದಿಂದ ಶೀಘ್ರ ರೈತರ ಖಾತೆಗೆ ಪರಿಹಾರ ಬಿಡುಗಡೆಯಾಗುವ ನಿರೀಕ್ಷೆ ಇದೆ. 

ಶುದ್ಧ ನೀರಿನ ಘಟಕ: ಜಿಲ್ಲೆಗೆ 1110 ಶುದ್ಧ ನೀರಿನ ಘಟಕಗಳು ಮಂಜೂರಾಗಿದ್ದು, ಈ ಪೈಕಿ 1059 ಪೂರ್ಣಗೊಂಡಿದೆ. ಹೀಗೆ ಪೂರ್ಣಗೊಂಡಿರುವ ಶುದ್ಧ ನೀರಿನ ಘಟಕಗಳ ಪೈಕಿ 1039 ಘಟಕಗಳು ಜನರಿಗೆ ಕುಡಿಯುವ ನೀರನ್ನು ನೀಡುತ್ತಿದೆ. ಸುಮಾರು 38 ಘಟಕಗಳು ನಿರ್ಮಾಣ ಹಂತದಲ್ಲಿವೆ. 13 ಶುದ್ಧ ನೀರಿನ ಘಟಕಗಳು ವಿವಿಧ ಸಮಸ್ಯೆಗಳಿಂದಾಗಿ ಇನ್ನೂ ಆರಂಭವೇ ಆಗಿಲ್ಲ. ಈ ಪೈಕಿ ಬಹುತೇಕ ಜಾಗದ ಸಮಸ್ಯೆ ಪ್ರಮುಖವಾಗಿದೆ. ಕೆಲವೆಡೆ ನೀರಿನ ಅಲಭ್ಯತೆಯೂ ಇದೆ.  ಸುಮಾರು 20 ಶುದ್ಧ ನೀರಿನ ಘಟಕಗಳಲ್ಲಿ ನೀರಿನ ಅಲಭ್ಯತೆ, ಕೆಲವಾರು ತಾಂತ್ರಿಕ ಕಾರಣಗಳಿಂದಾಗಿ ದುರಸ್ತಿ ನಡೆಯುತ್ತಿದೆ. 

ಕುಡಿವ ನೀರಿಗೆ ಆದ್ಯತೆ: ಬರ ಹಿನ್ನೆಲೆಯಲ್ಲಿ ಜಿಲ್ಲೆಯ ಬಹುತೇಕ ಜಲ ಮೂಲಗಳಾದ ಕೆರೆ ಕುಂಟೆಗಳು ಬತ್ತಿವೆ. ಕೊಳವೆ ಬಾವಿಗಳಲ್ಲಿಯೂ ನೀರು ಖಾಲಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ತುರ್ತು ಕೊಳವೆ ಬಾವಿ ಕೊರೆಸಲು, ಪಂಪು ಮೋಟಾರು ಅಳವಡಿಸಲು, ಪೈಪ್‌ಲೈನ್‌ ಹಾಕಿಸಲು ಹಾಗೂ ಮೋಟಾರು ದುರಸ್ತಿಗೆ ಆದ್ಯತೆ ನೀಡಲಾಗುತ್ತಿದೆ. ಸದ್ಯಕ್ಕೆ ಕೋಲಾರ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ 23 ಗ್ರಾಮಗಳಲ್ಲಿ ನೀರಿಗೆ ಅಭಾವ ಕಂಡು ಬಂದಿದೆ.

ಖಾಸಗಿ ಕೊಳವೆ ಬಾವಿಗಳಿಂದ ಹಾಗೂ ಟ್ಯಾಂಕರ್‌ ಮೂಲಕ ನೀರು ಖರೀದಿಸಿ ಪೂರೈಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ 180 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಎದುರಾಗಬಹುದು ಎಂದು ನಿರೀಕ್ಷಿಸಲಾಗುತ್ತಿದೆ. ನಗರ ಪಟ್ಟಣ ಪ್ರದೇಶಗಳಲ್ಲಿ ಜಿಲ್ಲೆಯಲ್ಲಿ 166 ವಾರ್ಡುಗಳಿದ್ದು, 48 ವಾರ್ಡುಗಳಲ್ಲಿ ಟ್ಯಾಂಕರ್‌ ಮೂಲಕ ಪ್ರತಿ ನಿತ್ಯ 76 ಟ್ರಿಪ್‌ಗ್ಳಲ್ಲಿ ನೀರು ಪೂರೈಕೆಯಾಗುತ್ತಿದೆ.

ಇದಕ್ಕಾಗಿ ಸ್ಥಳೀಯ ಸಂಸ್ಥೆಗಳಿಂದಲೇ 14 ಟ್ಯಾಂಕರ್‌ ಬಳಸಿಕೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ವಾರ್ಡುಗಳಲ್ಲಿ ನೀರಿನ ಸಮಸ್ಯೆ ಎದುರಾದರೆ ಅದನ್ನು ಎದುರಿಸಲು ಸಿದ್ಧವಿರುವಂತೆ ಸೂಚಿಸಲಾಗಿದೆ. ಹೀಗಾಗಿ ಜಿಪಂ ಹಾಗೂ ಸ್ಥಳೀಯ ಸಂಸ್ಥೆಗಳ ಆಡಳಿತಾಂಗವನ್ನು ಸಜ್ಜುಗೊಳಿಸಲಾಗುತ್ತಿದೆ.

ಅನುದಾನದ ಲಭ್ಯತೆ: ಕುಡಿಯುವ ನೀರು -ಬರ ನಿರ್ವಹಣೆಗೆ ಈಗಾಗಲೇ ಜಿಲ್ಲಾಧಿಕಾರಿಗಳ ಸಿಆರ್‌ಎಫ್ ಖಾತೆಯಲ್ಲಿ 6 ಕೋಟಿ ರೂ., ಲಭ್ಯವಿದೆ. ಇದೀಗ ಸರ್ಕಾರ ಪ್ರತಿ ತಾಲೂಕಿಗೆ ಒಂದು ಕೋಟಿಯಂತೆ 5 ಕೋಟಿ ರೂ. ಬಿಡುಗಡೆ ಮಾಡಿದ್ದು ಒಟ್ಟು 11 ಕೋಟಿ ರೂ.ಅನುದಾನವಿದೆ.  ಇದರೊಂದಿಗೆ ಟಾಸ್ಕ್ ಫೋರ್ಸ್‌ ನಿಧಿಗೆ ಸರ್ಕಾರದಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ 1 ಕೋಟಿ ರೂ., ಬಿಡುಗಡೆಯಾಗಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮೀಣ ನೀರು ಸರಬರಾಜು ಇಲಾಖೆಯಿಂದ 14 ನೇ ಹಣಕಾಸು ಯೋಜನೆ ಅನುದಾನ ಬಳಸಿಕೊಳ್ಳಲಾಗುತ್ತಿದೆ. ನಗರ-ಪಟ್ಟಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳಲ್ಲಿ ನಗರೋತ್ಥಾನ ನಿಧಿ ಹಣವನ್ನು ಕುಡಿವ ನೀರು ಪೂರೈಕೆಗೆ ಬಳಸಿಕೊಳ್ಳಲಾಗುತ್ತಿದೆ. ಜೊತೆಗೆ ಎಸ್‌ಎಫ್ಸಿ ಅನುದಾನ ಮತ್ತು ಸ್ಥಳೀಯ ಸಂಸ್ಥೆಗಳ ನಿಧಿ ಬಳಸಿಕೊಳ್ಳಲಾಗುತ್ತಿದೆ. ಸದ್ಯಕ್ಕೆ ಇವೆಲ್ಲಾ ಅನುದಾನವನ್ನು ಗಮನಿಸಿದಾಗ ಕೋಲಾರ ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಅನುದಾನದ ಕೊರತೆ ಇಲ್ಲವೆನ್ನಲಾಗುತ್ತಿದೆ.

ಗುಳೇ ತಡೆಯಲು ಕ್ರಮ: ಜಿಲ್ಲೆಯಿಂದ ಯಾವುದೇ ವ್ಯಕ್ತಿ ಕೆಲಸ ಇಲ್ಲ, ಕೂಲಿ ಇಲ್ಲ ಎಂದು ಗುಳೇ ಹೋಗದಂತೆ ತಡೆಯಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ 100 ದಿನಗಳಿಗೆ ಬದಲಾಗಿ 150 ದಿನಗಳ ಕೆಲಸ ನೀಡಲು ಸೂಚಿಸಲಾಗಿದೆ. ಯಾವುದೇ ವ್ಯಕ್ತಿ ಉದ್ಯೋಗ ಖಾತ್ರಿ ಯೋಜನೆಯಡಿ ಫಾರಂ ಸಂಖ್ಯೆ 5 ರಲ್ಲಿ ಬೇಡಿಕೆಯಿಡುವ ಎಲ್ಲರಿಗೂ ಉದ್ಯೋಗ ಕಲ್ಪಿಸಲು ಸೂಚಿಸಲಾಗಿದೆ. ಯಾವುದೇ ವ್ಯಕ್ತಿ ಕೆಲಸ ಸಿಗದೆ ಕೂಲಿ ಇಲ್ಲದೆ ಕೋಲಾರ ಜಿಲ್ಲೆಯಿಂದ ಗುಳೇ ಹೋದರೆ ಅದಕ್ಕೆ ಆಯಾ ವ್ಯಾಪ್ತಿಯ ಗ್ರಾಪಂ ಅಧಿಕಾರಿಗಳನ್ನೇ ಜವಾಬ್ದಾರರನ್ನಾಗಿಸಿ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದೆಂದು ಎಚ್ಚರಿಸಲಾಗಿದೆ. 

ಮೇವು ನಿರ್ವಹಣೆ: ಜಿಲ್ಲೆಯಲ್ಲಿ ಹಾಲು ಉತ್ಪಾದಿಸುವ ಹೈಬ್ರಿಡ್‌ ರಾಸುಗಳನ್ನು ರೈತರು ಹೆಚ್ಚಾಗಿ ಸಾಕುತ್ತಿದ್ದಾರೆ. ಹೀಗಾಗಿ ಗೋಶಾಲೆಗಳಿಗೆ ಗೋವುಗಳನ್ನು ಬಿಡುವುದಿಲ್ಲ. ಜಿಲ್ಲೆಯಲ್ಲಿ ಯಾವುದೇ ಗೋ ಶಾಲೆ ತೆರೆದಿಲ್ಲ. ಹೀಗಾಗಿ ಆಯಾ ರೈತರೇ ಮೇವು ಬೆಳೆದುಕೊಳ್ಳಲು ಅನುಕೂಲವಾಗುವಂತೆ 83,076 ಮೇವಿನ ಕಿಟ್‌ ನೀಡಲಾಗಿದೆ. ಕೋಚಿಮುಲ್‌ 26,440 ಮೇವಿನ ಕಿಟ್‌ ನೀಡುವುದರ ಜೊತೆಗೆ ಮೇವು ಬೆಳೆಯಲು ಪ್ರತಿ ಎಕರೆಗೆ 2 ಸಾವಿರ ರೂ., ಪ್ರೋತ್ಸಾಹ ಧನ ನೀಡಲಾಗುತ್ತಿದೆ. 

ಜಿಲ್ಲೆಯಲ್ಲಿ ಒಟ್ಟು 8370 ಹೆಕ್ಟೇರ್‌ನಲ್ಲಿ ಮೇವು ಬೆಳೆಯಲಾಗುತ್ತಿದೆ. ಇಲ್ಲಿ ಬೆಳೆಯುವ ಮೇವನ್ನು ರೈತರು ತಮ್ಮ ಬಳಕೆಗೆ ಇಟ್ಟುಕೊಂಡು ಉಳಿದ ಮೇವನ್ನು ಆಯಾ ತಾಲೂಕುಗಳಲ್ಲಿ ಸ್ಥಾಪಿಸಲ್ಪಟ್ಟಿರುವ ಮೇವು ಬ್ಯಾಂಕಿಗೆ ಮಾರಾಟ ಮಾಡಿ ದಾಸ್ತಾನು ಮಾಡಬೇಕಾಗಿದೆ. ಜೊತೆಗೆ ತೋಟಗಾರಿಕೆ ಇಲಾಖೆ ಸಸ್ಯ ಕ್ಷೇತ್ರಗಳ 20 ಎಕರೆಯಲ್ಲಿ ಮೇವು ಬೆಳೆಯಲಾಗಿದೆ. ಇದರಿಂದ 300 ಟನ್‌ಗಳಷ್ಟು ಮೇವು ಉತ್ಪಾದನೆಯಾಗಲಿದೆಯೆಂದು ನಿರೀಕ್ಷಿಸಲಾಗುತ್ತಿದೆ.

ಕೆ.ಸಿ.ವ್ಯಾಲಿ ಯೋಜನೆ ವ್ಯಾಪ್ತಿಯಲ್ಲಿ ಒಳಪಡುವ ಕೆರೆಗಳ 300 ಎಕರೆ ಎಚ್ಚುಕಟ್ಟು ಪ್ರದೇಶದಲ್ಲಿ ಮಿನಿ ಕಿಟ್‌ಗಳಿಂದ ಹಸಿರು ಮೇವು ಉತ್ಪಾದನೆಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ. ಹೆಚ್ಚುವರಿ ಇನ್ನೂ 50 ಸಾವಿರ ಮೇವಿನ ಕಿಟ್‌ ಸರಬರಾಜು ಮಾಡುವಂತೆ ಪಶುಪಾಲನಾ ಆಯುಕ್ತರಿಗೆ ಪತ್ರ ಬರೆಯಲಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ ಸದ್ಯಕ್ಕೆ ಮುಂದಿನ 13 ವಾರಗಳಿಗೆ ಆಗುವಷ್ಟು ಮೇವು ದಾಸ್ತಾನಿದೆ.

* ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.