ನಗರಸಭೆ ಅಧ್ಯಕ್ಷೆ-ಪೌರಾಯುಕ್ತರ ವಿರುದ್ಧ ಸದಸ್ಯರ ಆಕ್ರೋಶ 


Team Udayavani, Feb 20, 2019, 7:29 AM IST

nagarasabhe.jpg

ಕೋಲಾರ: ಕೋಲಾರವನ್ನು ಬರ ಪೀಡಿತ ಜಿಲ್ಲೆಯನ್ನಾಗಿ ರಾಜ್ಯ ಸರ್ಕಾರ ಘೋಷಿಸಿದ್ದರೂ ನಗರದ ಜನತೆಗೆ ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯ ಒದಗಿಸುವಲ್ಲಿ ನಗರಸಭೆ ಅಧ್ಯಕ್ಷೆ -ಪೌರಾಯುಕ್ತರು ವಿಫಲವಾಗಿದ್ದಾರೆ ಎಂದು ಆರೋಪಿಸಿ ಕೆಲ ನಗರಸಭೆ ಸದಸ್ಯರು ಧರಣಿ ನಡೆಸಿದರು.

ಕ್ರಮ ಕೈಗೊಂಡಿಲ್ಲ: ಮಂಗಳವಾರ ನಗರಸಭೆ ಮುಂದೆ ಜಮಾಯಿಸಿದ ವಿವಿಧ ಪಕ್ಷಗಳ ನಗರಸಭೆ ಸದಸ್ಯರು, ಬರಗಾಲದಿಂದ ನಗರದ ಬಹುತೇಕ ವಾರ್ಡ್‌ಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಿದೆ. ಜೊತೆಗೆ ಒಳಚರಂಡಿ ವ್ಯವಸ್ಥೆ ನಗರದಲ್ಲಿ ಹದಗೆಟ್ಟಿದೆ. ರಸ್ತೆಗಳಲ್ಲಿ ವಿದ್ಯುತ್‌ ದೀಪಗಳ ಸಮಸ್ಯೆಗಳಿದ್ದರೂ ನಗರಸಭೆಯಿಂದ ಯಾವುದೇ ಕ್ರಮ ಕೈಗೊಳ್ಳಲು ಮುಂದಾಗಿಲ್ಲ ಎಂದು ದೂರಿದರು.

ಸಮರ್ಪಕ ನೀರಿಲ್ಲ: ಸದಸ್ಯ ಕಾಶಿ ವಿಶ್ವನಾಥ ಮಾತನಾಡಿ, ತನ್ನ ವಾರ್ಡ್‌ನಲ್ಲಿ 10 ಬೋರ್‌ವೆಲ್‌ಗ‌ಳಿದ್ದು ಅದರಲ್ಲಿ 5 ಚಾಲ್ತಿಯಲ್ಲಿವೆ. ಅದರಲ್ಲಿ 3 ಬೋರ್‌ವೆಲ್‌ನಲ್ಲಿ ಮಾತ್ರ ನೀರು ಬರುತ್ತಿದೆ. ತನ್ನ ವಾರ್ಡ್‌ನ ಒಟ್ಟು 7 ಸಾವಿರ ಜನರಿಗೆ ಹೇಗೆ ನೀರು ಕೊಡಲು ಸಾಧ್ಯ ಎಂದು ಪ್ರಶ್ನಿಸಿದರು.

ಮನವಿಗೆ ಸ್ಪಂದಿಸಿಲ್ಲ: ಮತ್ತೂಬ್ಬ ಸದಸ್ಯ ಸೋಮಶೇಖರ್‌, 5ನೇ ವಾರ್ಡ್‌ನಲ್ಲಿ ಒಳಚರಂಡಿ ವ್ಯವಸ್ಥೆ ಹದಗೆಟ್ಟಿದ್ದರೂ ಮನೆಗಳಲ್ಲಿ ವಾಸಮಾಡಲು ತೊಂದರೆಯಾಗುವ ಮಟ್ಟಿಗೆ ಸಮಸ್ಯೆ ಉಂಟಾಗಿದೆ. ಈ ಕುರಿತು ಅಧ್ಯಕ್ಷರಿಗೆ ಸುಮಾರು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ತಾರತಮ್ಯ: 1ನೇ ವಾರ್ಡ್‌ ಸದಸ್ಯ ವೆಂಕಟೇಶ್‌ ಮಾತನಾಡಿ, ನಗರದ ಜನತೆ ಕುಡಿಯುವ ನೀರಿನ ಸಮಸ್ಯೆಯಿಂದ ಆತಂಕಕ್ಕೆ ಒಳಗಾಗಿದ್ದು, ನಗರದಲ್ಲಿ ಇರುವ ಟ್ಯಾಂಕರ್‌ಗಳು ನಗರಸಭೆ ಸದಸ್ಯರ ವ್ಯಾಪ್ತಿಯಲ್ಲಿ ನೀರು ಕೊಡದೆ ಅಧ್ಯಕ್ಷರ ಅಣತಿಯಂತೆ ಅವರ ಪರವಾಗಿರುವ ಸದಸ್ಯರ ವಾರ್ಡ್‌ಗೆ ಮಾತ್ರ ಕಳುಹಿಸುತ್ತಿದ್ದಾರೆಂದು ದೂರಿದರು.

ಕೆರೆಗಳಲ್ಲಿ ಬೋರ್‌ವೆಲ್‌ಗ‌ಳ ರಿಪೇರಿ ಮಾಡಿ ನಮಗೆ ಹಸ್ತಾಂತರ ಮಾಡಿ ಎಂದು ಸುಮಾರು 6 ತಿಂಗಳಿಂದ ಮನವಿ ಮಾಡಿದರೂ ಇದುವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ಕೂಡಲೇ ನಗರಸಭೆ ಅಧ್ಯಕ್ಷೆ -ಪೌರಾಯುಕ್ತರು ಕ್ರಮ ತೆಗೆದುಕೊಳ್ಳದೆ ಹೋದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. 

ಸದಸ್ಯರ, ಅಧ್ಯಕ್ಷರ ಪತಿ ಮಧ್ಯೆ ಮಾತಿನ ಚಕಮಕಿ: ಈ ವೇಳೆ ಅಧ್ಯಕ್ಷರ ಪತಿ ಹಾಗೂ ನಗರಸಭೆ ಸದಸ್ಯ ಪ್ರಸಾದ್‌ಬಾಬು ಮತ್ತು ಇತರೆ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ನಗರಸಭೆ ಸದಸ್ಯ ಪ್ರಸಾದ್‌ ಬಾಬು ಮಾತನಾಡಿ, ಸಮಸ್ಯೆಗಳು ಇಲ್ಲದಿದ್ದರೂ ಸುಮ್ಮನೆ ಅಪಪ್ರಚಾರ ಸರಿಯಲ್ಲ. ತನ್ನ ವಾರ್ಡ್‌ನಲ್ಲಿ ಯಾವುದೇ ಸಮಸ್ಯೆ ಇಲ್ಲ.

ವಿನಾಕಾರಣ ಏಕೆ ಅಧ್ಯಕ್ಷರ ಮೇಲೆ ಆರೋಪ ಮಾಡುತ್ತೀರಾ ಎಂದಾಗ, ಸದಸ್ಯರು ನೀವು ಇಲ್ಲಿ ಕೂತು ಹೋರಾಟ ಮಾಡಿ ನಮ್ಮ ಕಷ್ಟ ನಿಮಗೆ ಅರ್ಥವಾಗುತ್ತದೆ ಎಂದಾಗ ಅವರು ಅಧ್ಯಕ್ಷರ ಪತಿ ಅಲ್ಲಿಂದ ಜಾಗ ಖಾಲಿ ಮಾಡಿದರು. ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯರಾದ ಮೋಹನ್‌ ಪ್ರಸಾದ್‌, ಅಫೊಜ್‌ಪಾಷಾ, ಎ.ಪಿ.ರವೀಂದ್ರ, ಎಲ್‌.ನವಾಜ್‌, ನಾರಾಯಣಮ್ಮ, ಲಕ್ಷಮ್ಮ, ನದೀಮ್‌, ಹರ್ಷಿತಾಸುಲ್ತಾನ್‌ ಇದ್ದರು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.