ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಿಕ್ಷಕರಿಗೆ ಸನ್ಮಾನ
Team Udayavani, Feb 23, 2019, 7:29 AM IST
ಕೆಜಿಎಫ್: ತಾಲೂಕಿನ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಿಕ್ಷಕರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ರ ಅಧ್ಯಕ್ಷತೆಯಲ್ಲಿ ಸನ್ಮಾನಿಸಲಾಯಿತು.
ಶುಕ್ರವಾರ ಉರಿಗಾಂಪೇಟೆ ಕ್ಲಸ್ಟರ್ನ ಯರನಾಗನಹಳ್ಳಿ ಸರ್ಕಾರಿ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟದಿಂದ ರಾಷ್ಟ್ರೀಯಮಟ್ಟಕ್ಕೆ ಆಯ್ಕೆಗೊಂಡಿರುವ ಕಬಡ್ಡಿಯಲ್ಲಿ ಶಿಕ್ಷಕ ಎಚ್.ಆರ್.ರವಿ, ಬಾಲ್ ಬ್ಯಾಡ್ಮಿಂಟನ್ನಲ್ಲಿ ಶಿಕ್ಷಕಿ ಯಶೋಧಮ್ಮ,
ಸುಷ್ಮಾ, ಕ್ರಿಕೆಟ್ನಲ್ಲಿ ವೆಂಕಟಾಚಲಪತಿ, ಪ್ರಶಾಂತ್ ಅವರನ್ನೊಳಗೊಂಡಂತೆ ಇನ್ಸ್ಪೆçರ್ ಅವಾರ್ಡ್ನಲ್ಲಿ ರಾಷ್ಟ್ರಮಟ್ಟದಲ್ಲಿ ಆಯ್ಕೆಯಾಗಿರುವ ವಿದ್ಯಾರ್ಥಿನಿ ಅನುಶ್ರೀ ಅವರನ್ನು ಬಿಇಒ ಅಶೋಕ್ ಸನ್ಮಾನಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಮನ್ವಯಾಧಿಕಾರಿ ಶಂಕರ್ ಕಾವಲಿ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಅಪ್ಪಯ್ಯಗೌಡ, ಶಿಕ್ಷಕರಲ್ಲಿ ಸ್ಪರ್ಧಾ ಮನೋಭಾವ ಹೆಚ್ಚಾಗಬೇಕು ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್, ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡುವ ಮೂಲಕ ಶಿಕ್ಷಕರ ಕರ್ತವ್ಯ ಅತಿ ಜವಾಬ್ದಾರಿಯಿಂದ ಕೂಡಿರಬೇಕು. ಮಕ್ಕಳ ಸುರಕ್ಷತೆ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದರು. ಇದೇ ವೇಳೆ ಪುಲ್ವಾಮಾದಲ್ಲಿ ಉಗ್ರರ ದಾಳಿಯಿಂದ ಮೃತಪಟ್ಟ ವೀರ ಯೋಧರಿಗೆ ಮೌನಾಚರಣೆ ನಡೆಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಸಹ ಕಾರ್ಯದರ್ಶಿ ಮುನಿರತ್ನಂ, ಶಿಕ್ಷಕರಾದ ಬಿ.ಕೆ.ಚಂದ್ರಪ್ಪ, ಶಿಲ್ಲಾ, ಸಿಆರ್ಪಿ, ಬಿಆರ್ಪಿ, ಇಸಿಒ, ಶಿಕ್ಷಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ