ಸುಡು ಬಿಸಿಲಿಗೆ ತತ್ತರಿಸಿದ ಜನ


Team Udayavani, Mar 20, 2019, 7:23 AM IST

sudubisilu.jpg

ಮಾಲೂರು: ಈ ವರ್ಷ ಬೇಸಿಗೆ 17 ದಿನಗಳ ಮುಂಚೆಯೇ ಪ್ರಾರಂಭವಾಗಿದ್ದು, ಬರದನಾಡದ ಜಿಲ್ಲೆಯಲ್ಲಿ ಬಿಸಿಲ ಧಗೆ ಜನರ ಬೆವರಿಳಿಸುತ್ತಿದೆ. ಎಷ್ಟು ನೀರು ಕುಡಿದರೂ ದಾಹ ನೀಗುತ್ತಿಲ್ಲ. ಬಿಸಿಲಿನ ತಾಪಕ್ಕೆ ತತ್ತರಿಸಿರುವ ನಾಗರಿಕರು ದೇಹದ ದಣಿವು ನೀಗಿಸಲು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ.

ಮಧ್ಯಾಹ್ನವಾಗುತ್ತಿದ್ದಂತೆ ಹೊಂಗೆ, ಅರಳಿ ಮರಗಳನ್ನು ಹುಡುಕುವಂತಹ ಪರಿಸ್ಥಿತಿ ಇದೆ. ಪ್ರತಿನಿತ್ಯ 32 ರಿಂದ 34 ಡಿಗ್ರಿಯಷ್ಟು ತಾಪಮಾನ ದಾಖಲಾಗುತ್ತಿದೆ. ಇದನ್ನೇ ಉದ್ಯೋಗ ಮಾಡಿಕೊಂಡಿರುವ ಕೆಲ ವ್ಯಾಪಾರಿಗಳು, ಮಾಲೂರು ಪಟ್ಟಣ, ವಾಹನಗಳು ಹೆಚ್ಚು ಓಡಾಡುವ ರಸ್ತೆಗಳ ಪಕ್ಕದಲ್ಲಿ ಸೈಕಲ್‌, ತುಳ್ಳುವ ಗಾಡಿ, ಸಣ್ಣದಾಗಿ ಟೆಂಟ್‌ ಹಾಕಿಕೊಂಡು ಕಲ್ಲಂಗಡಿ, ಸೌತೇಕಾಯಿ, ಎಳನೀರು, ಮಜ್ಜಿಗೆ, ಐಸ್‌ಕ್ರೀಂ, ಹಣ್ಣಿನ ಜ್ಯೂಸ್‌ಗಳನ್ನು ಮಾರಾಟ ಮಾಡುತ್ತಿರುವ ದೃಶ್ಯ ಕಂಡು ಬರುತ್ತಿದೆ. 

ಎಳನೀರು, ಮಜ್ಜಿಗೆಗೆ ಬೇಡಿಕೆ: ಕೋಕಾ ಕೋಲಾ, ಸ್ಪ್ರೈಟ್‌, ಫಾಂಟಾ ಮತ್ತಿತರರು ಕೃತಕ ಪಾನಿಗಳಿಗಿಂತಲೂ ಈ ಬಾರಿ ಆರೋಗ್ಯ ಹೆಚ್ಚಿಸುವ ಎಳನೀರು, ಕಲ್ಲಂಗಡಿ, ಕಬ್ಬಿನ ಹಾಲು, ಮಜ್ಜಿಗೆಯಂತಹ ಪಾನೀಯಗಳಿಗೆ ಹೆಚ್ಚು ಬೇಡಿಕೆ ಬಂದಿದೆ. ಎಳನೀರು 30 ರೂ.ಗೆ ಮಾರಾಟವಾಗುತ್ತಿದೆ. ರೈತರ ಪಾಲಿಗೆ ಇದೊಂದು ಆಶಾದಾಯಕ ಬೆಳವಣಿಗೆ. ಅದರಂತೆ ಜಿಲ್ಲೆಯ ರೈತರ ಜೀವಾಳವಾಗಿರುವ ನಂದಿನಿ ಹಾಲಿನ ಉತ್ಪನ್ನಗಳಲ್ಲಿ ಮೊಸರು, ಮಜ್ಜಿಗೆ ಹೆಚ್ಚಿನ ಬೇಡಿಕೆ ಸೃಷ್ಟಿಸಿಕೊಂಡಿದೆ.

ಭರ್ಜರಿ ಲಾಭ: ಮಾರುಕಟ್ಟೆಯಲ್ಲಿ ನಂದಿನಿ ಉತ್ಪನ್ನದ ಮಸಾಲೆ ಮಜ್ಜಿಗೆ ಕೋಚಿಮಲ್‌ ನಿಗದಿ ಪಡಿಸುವ ದರಗಳಿಗೆ ಮಾರಾಟವಾಗುತ್ತಿದ್ದರೆ, ರೈತರಿಂದ 10 ರಿಂದ 12 ರೂ.ಗೆ ಖರೀದಿ ಮಾಡುವ ವ್ಯಾಪಾರಿಗಳು, ಒಂದು ಎಳನೀರನ್ನು 25 ರಿಂದ 30 ರೂ.ವರೆಗೂ ಮಾರಾಟ ಮಾಡಿ ಲಾಭ ಮಾಡಿಕೊಳ್ಳುತ್ತಿದ್ದಾರೆ.

ಕಲ್ಲಂಗಡಿ ಕತ್ತರಿಸಿದ ಒಂದು ಹೋಳು 10 ರೂ.ನಂತೆ ಮಾರಾಟ ಮಾಡುತ್ತಿದ್ದು, ಫ್ರೂಟ್‌ ಸಾಲಾಡ್‌ ಪ್ಲೇಟ್‌ ಒಂದರ ದರ 20 ರೂ. ಇದೆ. ಕತ್ತರಿಸದೇ ಮಾರಾಟ ಮಾಡುವ ಕಲ್ಲಂಗಡಿ ಹಣ್ಣು ಕೆ.ಜಿ.ಗೆ 25 ರಿಂದ 30 ರೂ.ವರೆಗೂ ಮಾರಾಟವಾಗುತ್ತಿದೆ. ಬೆಲೆ ದುಬಾರಿಯಾದ್ರೂ ಬಿಸಿಲಿಗೆ ನಲುಗಿರುವ ಜನರು ತಂಪು ಪಾನೀಯ, ನೀರಿನಾಂಶದ ಹಣ್ಣುಗಳನ್ನು ಸವಿಯುವುದನ್ನು ನಿಲ್ಲಿಸಿಲ್ಲ.
ರಾಜಕೀಯ ಚರ್ಚೆಗಳ ಸ್ಥಳ ಶಿಫ್ಟ್:

ಬಿಸಿಲಿನ ತಾಪ ಹೆಚ್ಚಾಗುತ್ತಿರುವಂತೆ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆ ಕಾವೂ ಏರುತ್ತಿದೆ. ಹೋಟೆಲ್‌ಗ‌ಳು, ಚಹಾದ ಅಂಗಡಿಗಳಲ್ಲಿ ನಡೆಯುತ್ತಿದ್ದ ರಾಜಕೀಯ ಚರ್ಚೆಗಳು ಇದೀಗ ಜ್ಯೂಸ್‌ ಸೆಂಟರ್‌, ಕಲ್ಲಂಗಡಿ ಮತ್ತು ಎಳನೀರು ಅಂಗಡಿಗಳಿಗೆ ಶಿಫ್ಟ್ ಅಗಿವೆ. ತಂಪು ಪಾನೀಯ ಸೇವಿಸುತ್ತಾ ರಾಜಕೀಯ ಚರ್ಚೆ ಮಾಡುತ್ತಿದ್ದಾರೆ.

ಬಿಸಿಲಿನಿಂದ ದೇಹ ತಂಪಾಗಿಸಿಕೊಳ್ಳಲು ಎಳನೀರು ಉತ್ತಮ ಪಾನೀಯ. ದೇಹ ತಂಪಾಗಿಸುವುದರ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು. ಮಳೆಯ ಕೊರತೆಯಿಂದ ತೆಂಗಿನ ಮರಗಳಲ್ಲಿ ಎಳನೀರಿನ ಇಳುವರಿ ಕಡಿಮೆಯಾಗಿದೆ. ಆದರೆ, ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಿದೆ. ಆದರೂ ಇರುವ ಅಲ್ಪ ಸ್ವಲ್ಪ ಎಳನೀರನ್ನು ತಂದು ಮಾರಾಟ ಮಾಡುತ್ತಿದ್ದೇವೆ.
-ದಾಸಪ್ಪ, ಎಳನೀರು ವ್ಯಾಪಾರಿ.

ಈಗಾಗಲೇ ಬರಗಾಲಕ್ಕೆ ತುತ್ತಾಗಿರುವ ಜಿಲ್ಲೆಯಲ್ಲಿ ಬಿಸಿಲಿನ ಝಳ ಜೋರಾಗಿದೆ. ದಣಿದ ದೇಹವನ್ನು ತಂಪಾಗಿಸಿಕೊಳ್ಳಲು ಜನ ಮುಂದಾಗುತ್ತಿದ್ದಾರೆ. ನಂದಿನಿ ಮಸಾಲೆ ಮಜ್ಜಿಗೆ, ಲಸ್ಸಿ, ತಂಪು ಬಾದಾಮಿ ಹಾಲಿಗೆ ಬೇಡಿಕೆ ಹೆಚ್ಚಾಗುತ್ತಿದೆ.
-ಶ್ಯಾಮಣ್ಣ, ನಂದಿನಿ ಹಾಲು ಮಾರಾಟಗಾರ.

* ಎಂ.ರವಿಕುಮಾರ್‌

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.