ನೀರಿನ ಕಷ್ಟ ಅವಿಭಜಿತ ಜಿಲ್ಲೆ ಜನರಿಗೆ ಗೊತ್ತು


Team Udayavani, Mar 23, 2019, 7:37 AM IST

ner-avibha.jpg

ಕೋಲಾರ: ನೀರು ಅಮೂಲ್ಯ ಜೀವದ್ರವ್ಯ ಆಗಿದ್ದು, ಅದರ ಸಂರಕ್ಷಣೆ ಮತ್ತು ಮಿತ ಬಳಕೆ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ತಿಳಿಸಿದರು.

ನಗರದ ಸರ್ವಜ್ಞ ಉದ್ಯಾನ ವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರ, ಜಿಪಂ, ವಕೀಲರ ಸಂಘ, ಆರೋಗ್ಯ ಇಲಾಖೆ, ಜಾಗೃತಿ ಕ್ಯಾನ್‌ ಸಂಸ್ಥೆ, ಗೋಪ್ಲಾಗ್‌, ನಗರಸಭೆ ಮತ್ತು ಪತ್ರಕರ್ತರ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ನೀರಿನ ಕಷ್ಟ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಯವರಿಗೆ ಬಿಟ್ಟು ಬೇರೆಯವರಿಗೆ ಗೊತ್ತಿಲ್ಲ. ಕಳೆದ 15 ವರ್ಷದಲ್ಲಿ ಮೂರು ವರ್ಷ ಮಳೆಯಾಗಿದ್ದು ಬಿಟ್ಟರೆ ಉಳಿದ ವರ್ಷಗಳು ಸತತವಾಗಿ ಬರಗಾಲವನ್ನು ಎದುರಿಸುತ್ತಾ ಬಂದಿದೆ. ದಿನೇ ದಿನೆ ನೀರಿನ ಮಟ್ಟ ಕುಸಿಯುತ್ತಾ ಮತ್ತಷ್ಟು ತೊಂದರೆಗಳನ್ನು ಅನುಭವಿಸುವತಾಂಗಿದೆ ಎಂದು ಹೇಳಿದರು.

ನೀರು ಉಳಿಸಿ: ಜಿಲ್ಲೆಯಲ್ಲಿ 4448 ಕೆರೆಗಳು ಇದ್ದು, ಇವುಗಳನ್ನು ಅಭಿವೃದ್ಧಿ ಪಡಿಸಲು ಸಾಕಷ್ಟು ಪ್ರಮಾಣದಲ್ಲಿ ಯೋಜನೆ ಹಮ್ಮಿಕೊಳ್ಳಲಾಗಿದೆ. ಪ್ರತಿವರ್ಷ ಸಂಗ್ರಹಿಸಿದ ನೀರನ್ನು ಹನಿ ನೀರಾವರಿ ಯೋಜನೆಯ ಮೂಲಕ ನೀರನ್ನು ಉಳಿಸುವ ಜೊತೆಗೆ ಜನರಿಗೆ ನೀರಿನ ಅರಿವು ಮೂಡಿಸುವ ಕೆಲಸವಾಗಬೇಕಾಗಿದೆ ಎಂದು ಹೇಳಿದರು.

ಹನಿ ನೀರು ಗಡಿದಾಟದಿರಲಿ: ಜಿಪಂ ಸಿಇಒ ಜಿ.ಜಗದೀಶ್‌ ಮಾತನಾಡಿ, ಮುಂದಿನ ಪೀಳಿಗೆಗೆ ಬರಡುಭೂಮಿಯನ್ನು ಕೊಡದೆ ಕೆರೆ ಕಟ್ಟೆ ಕಾಲುವೆಗಳಲ್ಲಿ ನೀರು ಹರಿಯುವಂತಾ ವಾತಾವರಣ ತರ ಬೇಕಾಗಿದೆ ಮಳೆಗಾಲದಲ್ಲಿ ಬಿದ್ದ ನೀರು ಒಂದು ಹನಿ  ಸಹ ಕೋಲಾರ ಜಿಲ್ಲೆಯ ಗಡಿದಾಟಿ ಹೋಗದಂತೆ ನೋಡಿಕೊಂಡು ಮೇಲಕ್ಕೆ ನೀರು ತರುವಂತಾಗಬೇಕು ಎಂದರು.

ಆತಂಕ ಜೀವನ ನಡೆಸಬೇಕಾಗುತ್ತೆ: ಇಸ್ರೇಲ್‌ ದೇಶದಲ್ಲಿ 250 ಮೀಟರ್‌, ನಮ್ಮಲ್ಲಿ 750 ಮೀಟರ್‌ ಮಳೆ ಬರುತ್ತದೆ. ಹೀಗಿದ್ದೂ ಆ ದೇಶದಲ್ಲಿ ನೀರಿನ ಸಂರಕ್ಷ ಣೆ ಮಾಡಿಕೊಂಡು ಅಭಿವೃದ್ಧಿ ಹೊಂದುತ್ತಿವೆ. ನಾವು ನೀರು ಪೋಲು ಮಾಡುತ್ತೇವೆ. ಸ್ಥಿತಿ ಇದೇ ರೀತಿ ಮುಂದುವರಿದರೆ ಮುಂದೆ ಆತಂಕದಲ್ಲಿ ಜೀವನ ಸಾಗಿಸಬೇಕಾಗುತ್ತದೆ ಎಂದು ಹೇಳಿದರು.

ಪರಿಸರ ಸಂರಕ್ಷಣೆಗೆ ಸಹಕರಿಸಿ: ನೀರಿನ ಸಂರಕ್ಷಣೆಗೆ ಪ್ರತಿ ವರ್ಷ ನರೇಗಾ ಯೋಜನೆಯಲ್ಲಿ ಸಾವಿರ ಚೆಕ್‌ ಡ್ಯಾಂಗಳನ್ನು ನಿರ್ಮಿಸಲಾಗುತ್ತಿದೆ.  ಪಾಳುಬಿದ್ದ ಗೋಕುಂಟೆ, ಕಲ್ಯಾಣಿಗಳನ್ನು ಸ್ವಚ್ಛ ಮಾಡುವುದು, ಕೋಟಿ ನಾಟಿ ಯೋಜನೆಯಲ್ಲಿ ಗಿಡ ನೆಡುವುದು, ಬೆಟ್ಟ ಗುಡ್ಡ ಪ್ರದೇಶದಲ್ಲಿ ಬೀಜ ಬಿತ್ತನೆ ಮಾಡುವ ಕೆಲಸಗಳನ್ನು ಮಾಡುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಹೇಳಿದರು.

ತಲೆಗೆ ಒಂದು ಗಿಡ ನೆಡಿ: ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಗುರುರಾಜ್‌ ಜಿ.ಶಿರೋಳ್‌ ಮಾತನಾಡಿ, ಭೂಮಿಯಲ್ಲಿ ಶೇ.97 ಪ್ರಮಾಣದ ನೀರು ಇದ್ದರೂ ಶೇ 0.77 ನೀರು ಮಾತ್ರ ಕುಡಿಯಲು ಯೋಗ್ಯವಾಗಿದೆ. ಗಾಳಿ ಮತ್ತು ನೀರನ್ನು ಉತ್ಪಾದಿಸಲು ಪ್ರತಿಯೊಂದು ತಲೆಗೆ ಒಂದು ಗಿಡವನ್ನು ನೆಡಬೇಕಾಗಿದೆ ಎಂದು ಹೇಳಿದರು.

ಜಾಥಾ, ಗಿಡ ವಿತರಣೆ: ಇದಕ್ಕೂ ಮುಂಚೆ ನಗರದ ಟೇಕಲ್‌ ವೃತ್ತದಲ್ಲಿ ಇರುವ ಕಲ್ಯಾಣಿ ಸ್ವಚ್ಛ ಗೊಳಿಸಿ ನಂತರ ವಿಶ್ವ ಜಲ ದಿನಾಚರಣೆಯ ಅಂಗವಾಗಿ ಪ್ರವಾಸಿ ಮಂದಿರದಿಂದ ಜಾಥಾ ಮೂಲಕ ಮೆರವಣಿಗೆಯಲ್ಲಿ ಸರ್ವಜ್ಞ ಉದ್ಯಾನದಲ್ಲಿ ಗಿಡ ನೀಡಲಾಯಿತು.

ಅಪರ ಜಿಲ್ಲಾಧಿಕಾರಿ ಎಚ್‌.ಪುಷ್ಪಲತಾ, ಜಿಲ್ಲಾ ಪೋಲಿಸ್‌ ವರಿಷ್ಠಾ ಧಿಕಾರಿ ಡಾ.ರೋಹಿಣಿ ಕಟೋಚ್‌ ಸೆಪೆಟ್‌, ನಗರಸಭೆ ಆಯುಕ್ತ ಮಹೇಂದ್ರ ಕುಮಾರ್‌, ಜಾಗೃತಿ ಸಂಸ್ಥೆಯ ಕೆ.ಧನರಾಜ್‌, ಮಂಜುಳಾ,ಭೀಮರಾವ್‌, ಎಸ್‌ಎನ್‌ಆರ್‌ ಪ್ರಸನ್ನ ಮುಂತಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.